ಮನರಂಜನೆ

ಧರ್ಮ ಕೀರ್ತಿರಾಜ್‍ ‘ಬಿಗ್‍ ಬಾಸ್‍’ನಲ್ಲಿ; ‘ಟೆನೆಂಟ್‍’ ಟೀಸರ್‍ ಯೂಟ್ಯೂಬ್‍ನಲ್ಲಿ

 

ಆ ಕಡೆ ಹಿರಿಯ ಖಳನಟ ಕೀರ್ತಿರಾಜ್‍ ಅವರ ಮಗ ಧರ್ಮ ಕೀರ್ತಿರಾಜ್‍, ‘ಬಿಗ್‍ ಬಾಸ್‍’ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಅವರ ಅಭಿನಯದ ಹೊಸ ಚಿತ್ರವೊಂದರ ಟೀಸರ್‍ ಸದ್ದಿಲ್ಲದೆ ಬಿಡುಗಡೆಯಾಗಿದೆ. ಅದೇ ‘ಟೆನೆಂಟ್‍’.

‘ಟೆನೆಂಟ್‍’ ಎಂದರೆ ಬಾಡಿಗೆದಾರ ಎಂದು ಎಲ್ಲರಿಗೂ ಗೊತ್ತೇ ಇದೆ. ಮನೆಯೊಂದರಲ್ಲಿ ನಡೆಯುವ ಕ್ರೈಮ್‍ ಥ್ರಿಲ್ಲರ್‍ ಚಿತ್ರ ಇದು. ಧರ್ಮ ಜೊತೆಗೆ ಸೋನು ಗೌಡ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಮೊದಲ ನೋಟ ಬಿಡುಗಡೆ ಆಗಿದ್ದು, ಇತ್ತೀಚೆಗೆ ಚಿತ್ರದ ಮೊದಲ ಟೀಸರ್‍ ಬಿಡುಗಡೆ ಆಗಿದೆ.

ವಿಶೇಷವೆಂದರೆ, ಕನ್ನಡ ಚಿತ್ರರಂಗದ ಹಲವು ಗಣ್ಯರು ಸೇರಿ ಈ ಟೀಸರ್‍ ಬಿಡುಗಡೆ ಮಾಡಿದ್ದಾರೆ. ನಿರ್ದೇಶಕರಾದ ಶಶಾಂಕ್, ಪವನ್ ಒಡೆಯರ್, ಛಾಯಾಗ್ರಹಕರಾದ ಸತ್ಯ ಹೆಗ್ಡೆ, ಡಿಸೈನರ್ ಹಾಗೂ ವಿತರಕಿ ಸಚಿನ್ನಾ ಹೆಗ್ಗಾರ್, ಚಂದನ್ ಶೆಟ್ಟಿ, ನವೀಶ್ ಶಂಕರ್ ಸೇರಿದಂತೆ ಅನೇಕರು ಟೀಸರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದಾರೆ.

‘ಟೆನೆಂಟ್‍’ ಚಿತ್ರವನ್ನು ನಿರ್ದೇಶಿಸಿರುವುದು ಶ್ರೀಧರ್‍ ಶಾಸ್ತ್ರಿ. ವಿ.ಎಫ್.ಎಕ್ಸ್ ನಲ್ಲಿ ನಾಲ್ಕು ವರ್ಷಗಳ ಅನುಭವವಿರುವ ಶ್ರೀಧರ್, ಈಗ ಇದೇ ಮೊದಲ ಬಾರಿಗೆ ‘ಟನೆಂಟ್‍’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದಕ್ಕೂ ಮುನ್ನ ಒಂದಿಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಶ್ರೀಧರ್‍, ಇದೇ ಮೊದಲ ಬಾರಿಗೆ ಚಿತ್ರ ನಿರ್ದೇನಕ್ಕೆ ಕೈ ಹಾಕಿದ್ದಾರೆ.

ಮಾಸ್ಟರ್ ಚಾಯ್ಸ್ ಕ್ರಿಯೇಷನ್ ನಡಿ ನಾಗರಾಜ್ ಟಿ, ‘ಟೆನೆಂಟ್’ ಚಿತ್ರವನ್ನು ನಿರ್ಮಿಸುತ್ತಿದ್ದು, ಪೃಥ್ವಿರಾಜ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ. ಇನ್ನು, ಶ್ರೀಧರ್ ಶಾಸ್ತ್ರಿ ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ.

‘ಟೆನೆಂಟ್‍’ ಚಿತ್ರದಲ್ಲಿ ಧರ್ಮ ಕೀರ್ತಿರಾಜ್, ಸೋನು ಗೌಡ, ತಿಲಕ್‍ ಜೊತೆಗೆ ರಾಕೇಶ್ ಮಯ್ಯ, ‘ಉಗ್ರಂ’ ಮಂಜು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಗಿರೀಶ್ ಹೊತೂರ್ ಸಂಗೀತ, ಉಜ್ವಲ್ ಚಂದ್ರ ಸಂಕಲನ ಮತ್ತು ಮನೋಹರ್ ಜೋಷಿ ಛಾಯಾಗ್ರಹಣವಿದೆ.

‘ಟೆನೆಂಟ್‍’ ಚಿತ್ರವು ನವೆಂಬರ್‍ 22ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago