ಮನರಂಜನೆ

‘ಬುಲೆಟ್‍’ ಮೇಲೆ ಬಂದ ಧರ್ಮ ಕೀರ್ತಿರಾಜ್; ಜೂನ್ 20ಕ್ಕೆ ಚಿತ್ರ ಬಿಡುಗಡೆ

ಧರ್ಮ ಕೀರ್ತಿರಾಜ್‍ ಅಭಿನಯದ ‘ತಲ್ವಾರ್’ ಮತ್ತು ‘ದಾಸರಹಳ್ಳಿ ಎಂಬ ಎರಡು ಚಿತ್ರಗಳು ಈಗಾಗಲೇ ಈ ವರ್ಷ ಬಿಡುಗಡೆಯಾಗಿದೆ. ಈ ಮಧ್ಯೆ, ಅವರ ಮೂರನೆಯ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಜೂನ್‍ 20ರಂದು ಬಿಡುಗಡೆಯಾಗುತ್ತಿದೆ.

ಅಂದಹಾಗೆ, ಧರ್ಮ ಅಭಿನಯದ ಹೊಸ ಚಿತ್ರದ ಹೆಸರು ಬುಲೆಟ್‍. ಈ ಚಿತ್ರದ ಹಾಡು ಮತ್ತು ಟೀಸರ್‍ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರವನ್ನು ಸತ್ಯಜಿತ್‌ ಶಬ್ಬೀರ್ ನಿರ್ಮಿಸಿ, ನಿರ್ದೇಶಿಸಿದ್ದಾರೆ. ಇದಕ್ಕೂ ಮೊದಲು ತೆಲುಗು , ತಮಿಳು, ಮಲೆಯಾಳಂ ಹಾಗೂ ಹಿಂದಿ ಚಿತ್ರಗಳಲ್ಲಿ ನಟಿಸಿರುವ ಸತ್ಯಜಿತ್‍ ಶಬ್ಬೀರ್, ನಿರ್ದೇಶಿಸಿರುವ ಮೊದಲ ಚಿತ್ರವಿದು. ಜೊತೆಗೆ ಅವರು ಚಿತ್ರದಲ್ಲಿ ಧರ್ಮ ಅವರ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಸತ್ಯಜಿತ್, ‘ನಾನು ಭಾರತಿರಾಜ ಅವರ ನಿರ್ದೇಶನದ ‘ಪದಿನಾರು ವಯದಿನಿಲೆ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ಸಂಗೀತ ನಿರ್ದೇಶಕರಾದ ಇಳಯರಾಜ ಅವರು ಶಬ್ಬೀರ್ ಅಂತ ಇದ್ದ ನನ್ನ ಹೆಸರಿನ ಮುಂದೆ ಸತ್ಯಜಿತ್‌ ಎಂದು ಸೇರಿಸಿದರು. ಅಂದಿನಿಂದ ನನ್ನ ಹೆಸರು ಸತ್ಯಜಿತ್ ಶಬ್ಬೀರ್. ಇದುವರೆಗೂ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳ 75 ಚಿತ್ರಗಳಲ್ಲಿ ನಟಿಸಿದ್ದೇನೆ. ಮೂಲತಃ ಕರ್ನಾಟಕದವನಾಗಿರುವ ನಾನು ಆನಂತರ ಚೆನ್ನೈ ಹಾಗೂ ಮುಂಬೈನಲ್ಲಿ ನೆಲೆಸಿದ್ದೆ. ಮೊದಲ ಚಿತ್ರವನ್ನು ಕನ್ನಡದಲ್ಲೇ ನಿರ್ಮಿಸಿ, ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈಗ ಈಡೇರಿದೆ’ ಎಂದರು.

ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಎನ್ನುವ ಅವರು, ‘ಚಿತ್ರತಂಡದ ಸಹಕಾರದಿಂದ ಒಂದೊಳ್ಳೆಯ ಚಿತ್ರ ಮೂಡಿಬಂದಿದೆ. ಇದೇ ಜೂನ್ 20ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಜಯದೇವ ಫಿಲಂಸ್ ಮೂಲಕ ಮರಿಸ್ವಾಮಿ ಅವರು ವಿತರಣೆ ಮಾಡಲಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ’ ಎಂದರು ನಿರ್ಮಾಪಕ ಹಾಗೂ ನಿರ್ದೇಶಕ ಸತ್ಯಜಿತ್‌ ಶಬ್ಬೀರ್.

ಧರ್ಮ ಕೀರ್ತಿರಾಜ್‍ ಮಾತನಾಡಿ, ‘ಸತ್ಯಜಿತ್‌ ಶಬ್ಬೀರ್ ಅವರ ನಿರ್ದೇಶನದಲ್ಲಿ ಉತ್ತಮ ಚಿತ್ರ ನಿರ್ಮಾಣವಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಈ ವರ್ಷದಲ್ಲಿ ನಾನು ನಾಯಕನಾಗಿ ನಟಿಸಿ ಬಿಡುಗಡೆಯಾಗುತ್ತಿರುವ ಮೂರನೇ ಚಿತ್ರ ಇದು’ ಎಂದರೆ, ನಾಯಕನ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ನಟಿ ಭವ್ಯ ಹೇಳಿದರು.

ಚಿತ್ರದಲ್ಲಿ ಧರ್ಮ ಕೀರ್ತಿರಾಜ‍್‍ಗೆ ನಾಯಕಿಯಾಗಿ ಶ್ರೀಯಾ ಶುಕ್ಲ ನಟಿಸಿದ್ದಾರೆ. ಜೊತೆಗೆ ಹಿರಿಯ ನಟಿ ಭವ್ಯ, ಶೋಭರಾಜ್, ಶಿವ ಮುಂತಾದವರು ನಟಿಸಿದ್ದಾರೆ. ಇದು ಪಿ.ವಿ.ಆರ್. ಸ್ವಾಮಿ ಛಾಯಾಗ್ರಹಣದ 50ನೇ ಚಿತ್ರ. ರಾಜ್ ಭಾಸ್ಕರ್ ಸಂಗೀತ ಸಂಯೋಜಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago