ಮನರಂಜನೆ

ರೌಡಿ ಆಯ್ತು: ಈಗ ಪೊಲೀಸ್‍ ಇನ್‍ಸ್ಪೆಕ್ಟರ್‍ ಆದ ಧರ್ಮ ಕೀರ್ತಿರಾಜ್‍

ಧರ್ಮ ಕೀರ್ತಿರಾಜ್‍ ಇತ್ತೀಚೆಗಷ್ಟೇ, ‘ತಲ್ವಾರ್‍’ ಎಂಬ ಚಿತ್ರದಲ್ಲಿ ರೌಡಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಪೊಲೀಸ್‍ ಇನ್‍ಸ್ಪೆಕ್ಟರ್‍ ಆಗಿದ್ದಾರೆ. ‘ಅಮರಾವತಿ ಪೊಲೀಸ್‍ ಸ್ಟೇಶನ್‍’ ಚಿತ್ರದಲ್ಲಿ ಒಂದಿಷ್ಟು ಜನರ ನಾಪತ್ತೆ ಮತ್ತು ಸಾವಿಗೆ ಕಾರಣರಾದವರ ಬೆನ್ನತ್ತಿ ಹೊರಟಿದ್ದಾರೆ.

ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ಎರಡು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ‘ಅಮರಾವತಿ ಪೊಲೀಸ್‍ ಸ್ಟೇಷನ್‍’ ಚಿತ್ರದ ಟೀಸರ್‍ ಇತ್ತೀಚೆಗೆ ಬಿಡುಗಡೆಯಾಗಿದೆ. ಪಿ.ಪಿ.ಪವರ್ ಪಿಕ್ಚರ್ಸ್ ಲಾಂಛನದಲ್ಲಿ ಕೆ.ಆರ್. ಪ್ರದೀಪ್ ಕಮಲಪುರ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಒಂದೂರಿನಲ್ಲಿ ಕೆಲವರು ನಿಗೂಢವಾಗಿ ಕಣ್ಮರೆಯಾಗುತ್ತಿರುತ್ತಾರೆ. ಈ ಕೇಸ್‍ ಪತ್ತೆ ಹಚ್ಚುವುದಕ್ಕಾಗಿ ಬರುವ ಪೊಲೀಸ್‍ ಇನ್‍ಸ್ಪೆಕ್ಟರ್‍ ಸಹ ಕಾಣೆಯಾಗುತ್ತಾನೆ. ಇದೆಲ್ಲದರ ಹಿಂದೆ ಇರುವ ಮರ್ಮ ಏನೆಂಬುದನ್ನು ಹೇಳುವ ಚಿತ್ರವೇ ‘ಅಮರಾವತಿ ಪೊಲೀಸ್ ಸ್ಟೇಷನ್’. ಧರ್ಮ ಕೀರ್ತಿರಾಜ್ ಈ ಚಿತ್ರದಲ್ಲಿ ಪೊಲೀಸ್ ಇನ್‍ಸ್ಪೆಕ್ಟರ್ ಆಗಿ ನಟಿಸಿದ್ದು, ಗುರುರಾಜ್ ಜಗ್ಗೇಶ್ ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೇದ್ವಿಕ ಚಿತ್ರದ ನಾಯಕಿಯ ಪಾತ್ರ ಮಾಡಿದ್ದಾರೆ.

‘ಅಮರಾವತಿ ಪೊಲೀಸ್ ಸ್ಟೇಷನ್’ ಕುರಿತು ಮಾತನಾಡುವ ನಿರ್ದೇಶಕ ಪುನೀತ್, ‘ಈಗಾಗಲೇ ೩೬ ದಿನಗಳ ಕಾಲ ನಮ್ಮ ಚಿತ್ರದ ಶೇ.೯೦ ಭಾಗದ ಚಿತ್ರೀಕರಣ ನಡೆಸಲಾಗಿದೆ. ಕ್ಲೈಮ್ಯಾಕ್ಸ್ ಹಾಗೂ ಹಾಡೊಂದರ ಶೂಟಿಂಗ್ ಮಾತ್ರವೇ ಬಾಕಿಯಿದೆ. ಅದನ್ನು ಗೋವಾ ಹಾಗೂ ಹಿಂದೂಪುರದಲ್ಲಿ ಚಿತ್ರೀಕರಿಸುವ ಪ್ಲಾನಿದೆ. ಅಲ್ಲದೆ ಮಾರ್ಚ್ ೧೭ರಂದು ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ದಿನ ನಮ್ಮ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡುತ್ತಿದ್ದೇವೆ. ಮಾರ್ಚ್ ಕೊನೆಗೆ ಅಥವಾ ಏಪ್ರಿಲ್ ವೇಳೆಗೆ ಸಿನಿಮಾ ಬಿಡುಗಡೆ ಮಾಡುವ ಯೋಚನೆಯಿದೆ’ ಎಂದು ಹೇಳಿದರು.

ತಮ್ಮ ಪಾತ್ರದ ಬಗ್ಗೆ ಮಾತನಾಡುವ ಧರ್ಮ ಕೀರ್ತಿರಾಜ್, ‘ಈ ಚಿತ್ರದಲ್ಲಿ ನಾನು ಮಫ್ತಿಯಲ್ಲಿರುವ ಪೊಲೀಸ್ ಫಾತ್ರ ಮಾಡಿದ್ದೇನೆ. ಸಿನಿಮಾದಲ್ಲಿ ಆಕ್ಷನ್ ತುಂಬಾ ವಿಶೇಷವಾಗಿದೆ. ನಿರ್ದೇಶಕ ಪುನೀತ್ ಅವರು ಮಾಡಿಕೊಂಡಿದ್ದ ಕಥೆ ತುಂಬಾ ಚೆನ್ನಾಗಿದೆ’ ಎಂದು ಹೇಳಿದರು.

‘ಅಮರಾವತಿ ಪೊಲೀಸ್ ಸ್ಟೇಷನ್’ ಚಿತ್ರದಲ್ಲಿ ಹಿರಿಯ ನಟಿ ಭವ್ಯ, ಧರ್ಮ, ಸಾಧು ಕೋಕಿಲ, ಕಾಕ್ರೋಚ್ ಸುಧಿ ನಾಗೇಂದ್ರ ಪ್ರಸಾದ್, ಧರ್ಮಣ್ಣ ಕಡೂರು ಮುಂತಾದವರು ನಟಿಸಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ರೋಣದ ಬಕ್ಕೇಶ್ ಅವರ ಸಂಗೀತ, ಗೌತಮ್ ಮಟ್ಟಿ ಅವರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

29 mins ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

2 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

2 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

3 hours ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

3 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

4 hours ago