ಮನರಂಜನೆ

ರೌಡಿ ಆಯ್ತು: ಈಗ ಪೊಲೀಸ್‍ ಇನ್‍ಸ್ಪೆಕ್ಟರ್‍ ಆದ ಧರ್ಮ ಕೀರ್ತಿರಾಜ್‍

ಧರ್ಮ ಕೀರ್ತಿರಾಜ್‍ ಇತ್ತೀಚೆಗಷ್ಟೇ, ‘ತಲ್ವಾರ್‍’ ಎಂಬ ಚಿತ್ರದಲ್ಲಿ ರೌಡಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಪೊಲೀಸ್‍ ಇನ್‍ಸ್ಪೆಕ್ಟರ್‍ ಆಗಿದ್ದಾರೆ. ‘ಅಮರಾವತಿ ಪೊಲೀಸ್‍ ಸ್ಟೇಶನ್‍’ ಚಿತ್ರದಲ್ಲಿ ಒಂದಿಷ್ಟು ಜನರ ನಾಪತ್ತೆ ಮತ್ತು ಸಾವಿಗೆ ಕಾರಣರಾದವರ ಬೆನ್ನತ್ತಿ ಹೊರಟಿದ್ದಾರೆ.

ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ಎರಡು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ‘ಅಮರಾವತಿ ಪೊಲೀಸ್‍ ಸ್ಟೇಷನ್‍’ ಚಿತ್ರದ ಟೀಸರ್‍ ಇತ್ತೀಚೆಗೆ ಬಿಡುಗಡೆಯಾಗಿದೆ. ಪಿ.ಪಿ.ಪವರ್ ಪಿಕ್ಚರ್ಸ್ ಲಾಂಛನದಲ್ಲಿ ಕೆ.ಆರ್. ಪ್ರದೀಪ್ ಕಮಲಪುರ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಒಂದೂರಿನಲ್ಲಿ ಕೆಲವರು ನಿಗೂಢವಾಗಿ ಕಣ್ಮರೆಯಾಗುತ್ತಿರುತ್ತಾರೆ. ಈ ಕೇಸ್‍ ಪತ್ತೆ ಹಚ್ಚುವುದಕ್ಕಾಗಿ ಬರುವ ಪೊಲೀಸ್‍ ಇನ್‍ಸ್ಪೆಕ್ಟರ್‍ ಸಹ ಕಾಣೆಯಾಗುತ್ತಾನೆ. ಇದೆಲ್ಲದರ ಹಿಂದೆ ಇರುವ ಮರ್ಮ ಏನೆಂಬುದನ್ನು ಹೇಳುವ ಚಿತ್ರವೇ ‘ಅಮರಾವತಿ ಪೊಲೀಸ್ ಸ್ಟೇಷನ್’. ಧರ್ಮ ಕೀರ್ತಿರಾಜ್ ಈ ಚಿತ್ರದಲ್ಲಿ ಪೊಲೀಸ್ ಇನ್‍ಸ್ಪೆಕ್ಟರ್ ಆಗಿ ನಟಿಸಿದ್ದು, ಗುರುರಾಜ್ ಜಗ್ಗೇಶ್ ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೇದ್ವಿಕ ಚಿತ್ರದ ನಾಯಕಿಯ ಪಾತ್ರ ಮಾಡಿದ್ದಾರೆ.

‘ಅಮರಾವತಿ ಪೊಲೀಸ್ ಸ್ಟೇಷನ್’ ಕುರಿತು ಮಾತನಾಡುವ ನಿರ್ದೇಶಕ ಪುನೀತ್, ‘ಈಗಾಗಲೇ ೩೬ ದಿನಗಳ ಕಾಲ ನಮ್ಮ ಚಿತ್ರದ ಶೇ.೯೦ ಭಾಗದ ಚಿತ್ರೀಕರಣ ನಡೆಸಲಾಗಿದೆ. ಕ್ಲೈಮ್ಯಾಕ್ಸ್ ಹಾಗೂ ಹಾಡೊಂದರ ಶೂಟಿಂಗ್ ಮಾತ್ರವೇ ಬಾಕಿಯಿದೆ. ಅದನ್ನು ಗೋವಾ ಹಾಗೂ ಹಿಂದೂಪುರದಲ್ಲಿ ಚಿತ್ರೀಕರಿಸುವ ಪ್ಲಾನಿದೆ. ಅಲ್ಲದೆ ಮಾರ್ಚ್ ೧೭ರಂದು ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ದಿನ ನಮ್ಮ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡುತ್ತಿದ್ದೇವೆ. ಮಾರ್ಚ್ ಕೊನೆಗೆ ಅಥವಾ ಏಪ್ರಿಲ್ ವೇಳೆಗೆ ಸಿನಿಮಾ ಬಿಡುಗಡೆ ಮಾಡುವ ಯೋಚನೆಯಿದೆ’ ಎಂದು ಹೇಳಿದರು.

ತಮ್ಮ ಪಾತ್ರದ ಬಗ್ಗೆ ಮಾತನಾಡುವ ಧರ್ಮ ಕೀರ್ತಿರಾಜ್, ‘ಈ ಚಿತ್ರದಲ್ಲಿ ನಾನು ಮಫ್ತಿಯಲ್ಲಿರುವ ಪೊಲೀಸ್ ಫಾತ್ರ ಮಾಡಿದ್ದೇನೆ. ಸಿನಿಮಾದಲ್ಲಿ ಆಕ್ಷನ್ ತುಂಬಾ ವಿಶೇಷವಾಗಿದೆ. ನಿರ್ದೇಶಕ ಪುನೀತ್ ಅವರು ಮಾಡಿಕೊಂಡಿದ್ದ ಕಥೆ ತುಂಬಾ ಚೆನ್ನಾಗಿದೆ’ ಎಂದು ಹೇಳಿದರು.

‘ಅಮರಾವತಿ ಪೊಲೀಸ್ ಸ್ಟೇಷನ್’ ಚಿತ್ರದಲ್ಲಿ ಹಿರಿಯ ನಟಿ ಭವ್ಯ, ಧರ್ಮ, ಸಾಧು ಕೋಕಿಲ, ಕಾಕ್ರೋಚ್ ಸುಧಿ ನಾಗೇಂದ್ರ ಪ್ರಸಾದ್, ಧರ್ಮಣ್ಣ ಕಡೂರು ಮುಂತಾದವರು ನಟಿಸಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ರೋಣದ ಬಕ್ಕೇಶ್ ಅವರ ಸಂಗೀತ, ಗೌತಮ್ ಮಟ್ಟಿ ಅವರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

4 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

5 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

6 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

7 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

7 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

7 hours ago