ಮನರಂಜನೆ

ರೌಡಿ ಆಯ್ತು: ಈಗ ಪೊಲೀಸ್‍ ಇನ್‍ಸ್ಪೆಕ್ಟರ್‍ ಆದ ಧರ್ಮ ಕೀರ್ತಿರಾಜ್‍

ಧರ್ಮ ಕೀರ್ತಿರಾಜ್‍ ಇತ್ತೀಚೆಗಷ್ಟೇ, ‘ತಲ್ವಾರ್‍’ ಎಂಬ ಚಿತ್ರದಲ್ಲಿ ರೌಡಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಪೊಲೀಸ್‍ ಇನ್‍ಸ್ಪೆಕ್ಟರ್‍ ಆಗಿದ್ದಾರೆ. ‘ಅಮರಾವತಿ ಪೊಲೀಸ್‍ ಸ್ಟೇಶನ್‍’ ಚಿತ್ರದಲ್ಲಿ ಒಂದಿಷ್ಟು ಜನರ ನಾಪತ್ತೆ ಮತ್ತು ಸಾವಿಗೆ ಕಾರಣರಾದವರ ಬೆನ್ನತ್ತಿ ಹೊರಟಿದ್ದಾರೆ.

ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ಎರಡು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ‘ಅಮರಾವತಿ ಪೊಲೀಸ್‍ ಸ್ಟೇಷನ್‍’ ಚಿತ್ರದ ಟೀಸರ್‍ ಇತ್ತೀಚೆಗೆ ಬಿಡುಗಡೆಯಾಗಿದೆ. ಪಿ.ಪಿ.ಪವರ್ ಪಿಕ್ಚರ್ಸ್ ಲಾಂಛನದಲ್ಲಿ ಕೆ.ಆರ್. ಪ್ರದೀಪ್ ಕಮಲಪುರ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಒಂದೂರಿನಲ್ಲಿ ಕೆಲವರು ನಿಗೂಢವಾಗಿ ಕಣ್ಮರೆಯಾಗುತ್ತಿರುತ್ತಾರೆ. ಈ ಕೇಸ್‍ ಪತ್ತೆ ಹಚ್ಚುವುದಕ್ಕಾಗಿ ಬರುವ ಪೊಲೀಸ್‍ ಇನ್‍ಸ್ಪೆಕ್ಟರ್‍ ಸಹ ಕಾಣೆಯಾಗುತ್ತಾನೆ. ಇದೆಲ್ಲದರ ಹಿಂದೆ ಇರುವ ಮರ್ಮ ಏನೆಂಬುದನ್ನು ಹೇಳುವ ಚಿತ್ರವೇ ‘ಅಮರಾವತಿ ಪೊಲೀಸ್ ಸ್ಟೇಷನ್’. ಧರ್ಮ ಕೀರ್ತಿರಾಜ್ ಈ ಚಿತ್ರದಲ್ಲಿ ಪೊಲೀಸ್ ಇನ್‍ಸ್ಪೆಕ್ಟರ್ ಆಗಿ ನಟಿಸಿದ್ದು, ಗುರುರಾಜ್ ಜಗ್ಗೇಶ್ ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೇದ್ವಿಕ ಚಿತ್ರದ ನಾಯಕಿಯ ಪಾತ್ರ ಮಾಡಿದ್ದಾರೆ.

‘ಅಮರಾವತಿ ಪೊಲೀಸ್ ಸ್ಟೇಷನ್’ ಕುರಿತು ಮಾತನಾಡುವ ನಿರ್ದೇಶಕ ಪುನೀತ್, ‘ಈಗಾಗಲೇ ೩೬ ದಿನಗಳ ಕಾಲ ನಮ್ಮ ಚಿತ್ರದ ಶೇ.೯೦ ಭಾಗದ ಚಿತ್ರೀಕರಣ ನಡೆಸಲಾಗಿದೆ. ಕ್ಲೈಮ್ಯಾಕ್ಸ್ ಹಾಗೂ ಹಾಡೊಂದರ ಶೂಟಿಂಗ್ ಮಾತ್ರವೇ ಬಾಕಿಯಿದೆ. ಅದನ್ನು ಗೋವಾ ಹಾಗೂ ಹಿಂದೂಪುರದಲ್ಲಿ ಚಿತ್ರೀಕರಿಸುವ ಪ್ಲಾನಿದೆ. ಅಲ್ಲದೆ ಮಾರ್ಚ್ ೧೭ರಂದು ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ದಿನ ನಮ್ಮ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡುತ್ತಿದ್ದೇವೆ. ಮಾರ್ಚ್ ಕೊನೆಗೆ ಅಥವಾ ಏಪ್ರಿಲ್ ವೇಳೆಗೆ ಸಿನಿಮಾ ಬಿಡುಗಡೆ ಮಾಡುವ ಯೋಚನೆಯಿದೆ’ ಎಂದು ಹೇಳಿದರು.

ತಮ್ಮ ಪಾತ್ರದ ಬಗ್ಗೆ ಮಾತನಾಡುವ ಧರ್ಮ ಕೀರ್ತಿರಾಜ್, ‘ಈ ಚಿತ್ರದಲ್ಲಿ ನಾನು ಮಫ್ತಿಯಲ್ಲಿರುವ ಪೊಲೀಸ್ ಫಾತ್ರ ಮಾಡಿದ್ದೇನೆ. ಸಿನಿಮಾದಲ್ಲಿ ಆಕ್ಷನ್ ತುಂಬಾ ವಿಶೇಷವಾಗಿದೆ. ನಿರ್ದೇಶಕ ಪುನೀತ್ ಅವರು ಮಾಡಿಕೊಂಡಿದ್ದ ಕಥೆ ತುಂಬಾ ಚೆನ್ನಾಗಿದೆ’ ಎಂದು ಹೇಳಿದರು.

‘ಅಮರಾವತಿ ಪೊಲೀಸ್ ಸ್ಟೇಷನ್’ ಚಿತ್ರದಲ್ಲಿ ಹಿರಿಯ ನಟಿ ಭವ್ಯ, ಧರ್ಮ, ಸಾಧು ಕೋಕಿಲ, ಕಾಕ್ರೋಚ್ ಸುಧಿ ನಾಗೇಂದ್ರ ಪ್ರಸಾದ್, ಧರ್ಮಣ್ಣ ಕಡೂರು ಮುಂತಾದವರು ನಟಿಸಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ರೋಣದ ಬಕ್ಕೇಶ್ ಅವರ ಸಂಗೀತ, ಗೌತಮ್ ಮಟ್ಟಿ ಅವರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

2 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

5 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

5 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

6 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

8 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

9 hours ago