‘ರಾಜಯೋಗ’ ಚಿತ್ರದ ನಂತರ ಮುಂದೇನು? ಈ ಪ್ರಶ್ನೆಯನ್ನು ಕಡೂರಿನ ಧರ್ಮಣ್ಣನನ್ನು ಹೋದಲ್ಲಿ ಬಂದಲ್ಲಿ ಜನ ಕೇಳುತ್ತಲೇ ಇದ್ದರು. ಏಕೆಂದರೆ, ಅಲ್ಲಿಯವರೆಗೂ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ನಟ ಧರ್ಮ, ‘ರಾಜಯೋಗ’ ಚಿತ್ರದ ಮೂಲಕ ಹೀರೋ ಆಗಿದ್ದರು. ಚಿತ್ರ ಕಳೆದ ವರ್ಷ ಬಿಡುಗಡೆಯೂ ಆಯಿತು. ಆದರೆ, ಅಷ್ಟೇನೂ ದೊಡ್ಡ ಯಶಸ್ಸು ಕಾಣಲಿಲ್ಲ. ಆದರೂ ಹೀರೊ ಆದ ನಟ ಕೆಳಗೆ ಇಳಿಯುವ ಹಾಗೂ ಇಲ್ಲ. ಹೀಗಿರುವಾಗಲೇ, ಅವರು ಇನ್ನೊಂದು ಚಿತ್ರದಲ್ಲಿ ಹೀರೋ ಆಗಿ ಅಭಿನಯಿಸುವುದಕ್ಕೆ ಸಜ್ಜಾಗಿದ್ದಾರೆ.
ಆ ಚಿತ್ರದ ಹೆಸರು ‘ಹಂಪಿ ಎಕ್ಸ್ಪ್ರೆಸ್’. ಈ ಚಿತ್ರದ ಮುಹೂರ್ತ ಇತ್ತೀಚೆಗೆ ಮುಗಿದಿದೆ. ಮುಹೂರ್ತ ಮುಗಿಸಿಕೊಂಡು ಚಿತ್ರತಂಡ ಸೀದಾ ಯೋಗರಾಜ್ ಭಟ್ ಅವರ ಆಫೀಸಿಗೆ ಹೋಗಿ, ಚಿತ್ರದ ಶೀರ್ಷಿಕೆಯನ್ನೂ ಅನಾವರಣಗೊಳಿಸಿದ್ದಾರೆ. ಈ ಚಿತ್ರಕ್ಕೆ ಪಾಟೀಲ್ ಲಿಂಗನಗೌಡ ಹರಪನಹಳ್ಳಿ ಎಂಬುವವರು ಕಥೆ, ಚಿತ್ರಕಥೆ ರಚಿಸುವುದರ ಜೊತೆಗೆ ಚಿತ್ರದ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಇನ್ನು ಹಂಪಿ ಟಾಕೀಸ್ ಬಳಗ ಈ ಚಿತ್ರವನ್ನು ನಿರ್ಮಿಸುತ್ತಿದೆ.
‘ಹಂಪಿ ಎಕ್ಸ್ಪ್ರೆಸ್’ ಚಿತ್ರದಲ್ಲಿ ಧರ್ಮಣ್ಣ ಕಡೂರು, ರಾಮ್ ನಾಡಗೌಡ, ಪದ್ಮಶ್ರೀ ಮಂಜಮ್ಮ ಜೋಗತಿ, ಮಹಾಂತೇಶ್ ಹೀರೇಮಠ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮನು ಪ್ರಸಾದ್ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ.
ಈ ಚಿತ್ರದ ಬಗ್ಗೆ ಚಿತ್ರತಂಡವು ಹೆಚ್ಚಿನ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಕಾರಣ, ಇನ್ನೂ ಚಿತ್ರೀಕರಣ ಪ್ರಾರಂಭವಾಗಿಲ್ಲ. ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಹಂಪಿ ಮತ್ತು ಆನೆಗುಂದಿ ಸುತ್ತಮುತ್ತ ನಡೆಯಲಿದೆಯಂತೆ.
ಇದೊಂದು ನೈಜ ಘಟನೆಯನ್ನು ಆಧರಿಸಿ ಮಾಡಿರುವ ಕಥೆ ಎನ್ನುವ ಧರ್ಮಣ್ಣ, ‘ಈ ಚಿತ್ರದಲ್ಲಿ ಎರಡು ಕಥೆಗಳಿವೆ. ಒಂದು ಕಥೆ ಒಬ್ಬ ಸ್ಕೂಲ್ ಮಾಸ್ಟರ್ನದ್ದಾದರೆ, ಇನ್ನೊಂದು ಕತೆ ಒಬ್ಬ ಫೋಟೋಗ್ರಾಫರ್ನದು. ನಾನು ಈ ಚಿತ್ರದಲ್ಲಿ ಫೋಟೋಗ್ರಾಫರ್ ಪಾತ್ರ ಮಾಡುತ್ತಿದ್ದೇನೆ. ಎರಡು ವಿಭಿನ್ನ ಕಥೆಗಳಿಂದ ಶುರುವಾಗುವ ಚಿತ್ರ ಕ್ರಮೇಣ ಒಂದೇ ಆಗುತ್ತದೆ’ ಎನ್ನುತ್ತಾರೆ ಧರ್ಮಣ್ಣ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…