ಮನರಂಜನೆ

ಪೋಟೋಗ್ರಾಫರ್ ಆದ ಧರ್ಮಣ್ಣ; ‘ಹಂಪಿ ಎಕ್ಸ್ಪ್ರೆಸ್‍’ ಚಿತ್ರಕ್ಕೆ ಹೀರೋ

‘ರಾಜಯೋಗ’ ಚಿತ್ರದ ನಂತರ ಮುಂದೇನು? ಈ ಪ್ರಶ್ನೆಯನ್ನು ಕಡೂರಿನ ಧರ್ಮಣ್ಣನನ್ನು ಹೋದಲ್ಲಿ ಬಂದಲ್ಲಿ ಜನ ಕೇಳುತ್ತಲೇ ಇದ್ದರು. ಏಕೆಂದರೆ, ಅಲ್ಲಿಯವರೆಗೂ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ನಟ ಧರ್ಮ, ‘ರಾಜಯೋಗ’ ಚಿತ್ರದ ಮೂಲಕ ಹೀರೋ ಆಗಿದ್ದರು. ಚಿತ್ರ ಕಳೆದ ವರ್ಷ ಬಿಡುಗಡೆಯೂ ಆಯಿತು. ಆದರೆ, ಅಷ್ಟೇನೂ ದೊಡ್ಡ ಯಶಸ್ಸು ಕಾಣಲಿಲ್ಲ. ಆದರೂ ಹೀರೊ ಆದ ನಟ ಕೆಳಗೆ ಇಳಿಯುವ ಹಾಗೂ ಇಲ್ಲ. ಹೀಗಿರುವಾಗಲೇ, ಅವರು ಇನ್ನೊಂದು ಚಿತ್ರದಲ್ಲಿ ಹೀರೋ ಆಗಿ ಅಭಿನಯಿಸುವುದಕ್ಕೆ ಸಜ್ಜಾಗಿದ್ದಾರೆ.

ಆ ಚಿತ್ರದ ಹೆಸರು ‘ಹಂಪಿ ಎಕ್ಸ್ಪ್ರೆಸ್‍’. ಈ ಚಿತ್ರದ ಮುಹೂರ್ತ ಇತ್ತೀಚೆಗೆ ಮುಗಿದಿದೆ. ಮುಹೂರ್ತ ಮುಗಿಸಿಕೊಂಡು ಚಿತ್ರತಂಡ ಸೀದಾ ಯೋಗರಾಜ್‍ ಭಟ್‍ ಅವರ ಆಫೀಸಿಗೆ ಹೋಗಿ, ಚಿತ್ರದ ಶೀರ್ಷಿಕೆಯನ್ನೂ ಅನಾವರಣಗೊಳಿಸಿದ್ದಾರೆ. ಈ ಚಿತ್ರಕ್ಕೆ ಪಾಟೀಲ್‍ ಲಿಂಗನಗೌಡ ಹರಪನಹಳ್ಳಿ ಎಂಬುವವರು ಕಥೆ, ಚಿತ್ರಕಥೆ ರಚಿಸುವುದರ ಜೊತೆಗೆ ಚಿತ್ರದ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಇನ್ನು ಹಂಪಿ ಟಾಕೀಸ್‍ ಬಳಗ ಈ ಚಿತ್ರವನ್ನು ನಿರ್ಮಿಸುತ್ತಿದೆ.

‘ಹಂಪಿ ಎಕ್ಸ್ಪ್ರೆಸ್‍’ ಚಿತ್ರದಲ್ಲಿ ಧರ್ಮಣ್ಣ ಕಡೂರು, ರಾಮ್‍ ನಾಡಗೌಡ, ಪದ್ಮಶ್ರೀ ಮಂಜಮ್ಮ ಜೋಗತಿ, ಮಹಾಂತೇಶ್‍ ಹೀರೇಮಠ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮನು ಪ್ರಸಾದ್‍ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ.

ಈ ಚಿತ್ರದ ಬಗ್ಗೆ ಚಿತ್ರತಂಡವು ಹೆಚ್ಚಿನ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಕಾರಣ, ಇನ್ನೂ ಚಿತ್ರೀಕರಣ ಪ್ರಾರಂಭವಾಗಿಲ್ಲ. ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಹಂಪಿ ಮತ್ತು ಆನೆಗುಂದಿ ಸುತ್ತಮುತ್ತ ನಡೆಯಲಿದೆಯಂತೆ.

ಇದೊಂದು ನೈಜ ಘಟನೆಯನ್ನು ಆಧರಿಸಿ ಮಾಡಿರುವ ಕಥೆ ಎನ್ನುವ ಧರ್ಮಣ್ಣ, ‘ಈ ಚಿತ್ರದಲ್ಲಿ ಎರಡು ಕಥೆಗಳಿವೆ. ಒಂದು ಕಥೆ ಒಬ್ಬ ಸ್ಕೂಲ್‍ ಮಾಸ್ಟರ್‍ನದ್ದಾದರೆ, ಇನ್ನೊಂದು ಕತೆ ಒಬ್ಬ ಫೋಟೋಗ್ರಾಫರ್‍ನದು. ನಾನು ಈ ಚಿತ್ರದಲ್ಲಿ ಫೋಟೋಗ್ರಾಫರ್‍ ಪಾತ್ರ ಮಾಡುತ್ತಿದ್ದೇನೆ. ಎರಡು ವಿಭಿನ್ನ ಕಥೆಗಳಿಂದ ಶುರುವಾಗುವ ಚಿತ್ರ ಕ್ರಮೇಣ ಒಂದೇ ಆಗುತ್ತದೆ’ ಎನ್ನುತ್ತಾರೆ ಧರ್ಮಣ್ಣ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

55 mins ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

57 mins ago

ಓದುಗರ ಪತ್ರ: ದಂಡ ವಸೂಲಿಯೇ ಪೊಲೀಸರ ಆದ್ಯತೆ ಆಗಬಾರದು

ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…

59 mins ago

ವ್ಯವಸ್ಥೆಯನ್ನು ಪ್ರಶ್ನಿಸುವವರು ದಿಮಾಗಿ ನಕ್ಸಲರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…

1 hour ago

ಅಸಂಗತ ಜಾತ್ರೆಯಲ್ಲಿ ಅಪರೂಪದ ಯಾತ್ರಿಕ

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…

1 hour ago

ಗಲಿವರನ ಕಥೆಯಲ್ಲಿ ಕಂಡ ಜಂತರ್ ಮಂತರ್ ಹುಡುಗಿ

ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…

1 hour ago