ಮನರಂಜನೆ

ಬೆಂಗಳೂಲ್ಲಿ 300 ಎಕರೆ ಜಮೀನು ಖರೀದಿಸಿದ್ದ ಧರ್ಮೆಂದ್ರ

ಬೆಂಗಳೂರು : ಬಾಲಿವುಡ್ ನಟ ಧರ್ಮೇಂದ್ರ ಬೆಂಗಳೂರಲ್ಲಿ 300 ಎಕರೆ ಜಮೀನು ಖರೀದಿಸಿದ್ದರು ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಧರ್ಮೇಂದ್ರ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ.

ಧರ್ಮೇಂದ್ರ ನಿಧನದ ಕುರಿತು ಮಾತನಾಡಿದ ಅವರು, ಎಲೆಕ್ಟ್ರಾನಿಕ್ ಸಿಟಿ ಹತ್ತಿರ ಧರ್ಮೇಂದ್ರ 300 ಎಕರೆ ಜಮೀನು ಖರೀದಿಸಿದ್ದರು. ಆಮೇಲೆ ಅದನ್ನು ಮಾರಿಬಿಟ್ಟರು. ಅದನ್ನು ಮಾರಾಟ ಮಾಡಿದ ಮೇಲೆ ಆ ಜಾಗಕ್ಕೆ ಚಿನ್ನದಂತಹ ಬೆಲೆ ಬಂತು. ಧರ್ಮೇಂದ್ರ ತುಂಬಾ ಒಳ್ಳೆಯ ಮನುಷ್ಯ. ಯಾವುದಕ್ಕೂ ಆಸೆ ಪಡುತ್ತಿರಲಿಲ್ಲ. ದೇವರು ಅವರಿಗೆ ಎಲ್ಲವನ್ನೂ ಕೊಟ್ಟ. ಯಾರು ಏನೇ ಹೇಳಿದರೂ ಹೇಮಮಾಲಿಯನ್ನ ತುಂಬಾ ಚೆನ್ನಾಗಿ ನೋಡಿಕೊಂಡರು. ಅವರಿಬ್ಬರ ಲವ್ ಸ್ಟೋರಿಯನ್ನ ನಾನು ನೋಡಿದ್ದೇನೆ ಎಂದರು.

ಮೊದಲು ಬಣ್ಣ ಹಚ್ಚಿದ್ದೆ ಮೈಸೂರಲ್ಲಿ
ಧರ್ಮೇಂದ್ರ ನನಗೆ ತುಂಬಾ ಹತ್ತಿರದವರು. ಕರ್ನಾಟಕಕ್ಕೆ ಬಂದ ಸಂದರ್ಭ ಅಶೋಕಾ ಹೋಟೆಲ್‌ನಲ್ಲಿ ಇರುತ್ತಿದ್ದರು. ನಾನು, ಅಂಬರೀಷ್, ವಿಷ್ಣುವರ್ಧನ್ ಎಲ್ಲಾ ಜೊತೆಯಲ್ಲಿ ಇರುವ ಫೋಟೋಗಳು ವಿಷ್ಣುವರ್ಧನ್ ಬಳಿ ಇತ್ತು. ಅವರು ಮೊದಲಿಗೆ ಬಣ್ಣ ಹಚ್ಚಿ ಹೀರೋ ಆಗಿದ್ದೇ ಮೈಸೂರಿನ ಪ್ರೀಮಿಯರ್ ಸ್ಟುಡಿಯೋದಲ್ಲಿ. ಅಲ್ಲಿಂದ ಅವರು ನಮಗೆ ಪರಿಚಯ. 8 ತಿಂಗಳ ಹಿಂದೆ ಅವರನ್ನು ಭೇಟಿ ಮಾಡಲು ಹೋಗಿದ್ದೆವು. ಅವರೊಂದಿಗೆ ಒಂದು ಸಿನಿಮಾ ಮಾಡುವ ಯೋಚನೆ ಕೂಡ ಇತ್ತು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ:-ಬೆಂಗಳೂಲ್ಲಿ 300 ಎಕರೆ ಜಮೀನು ಖರೀದಿಸಿದ್ದ ಧರ್ಮೆಂದ್ರ

ಮೈಸೂರಿನ ದೋಸೆ ಅವರಿಗಿಷ್ಟ
ಧರ್ಮೇಂದ್ರ ಅಷ್ಟು ದೊಡ್ಡ ಮನುಷ್ಯರಾದರೂ ಸಹ ಬಂಗಾರದ ಮನುಷ್ಯ. ಅವರಿಗೆ ಯಾವುದೇ ರೀತಿಯ ಅಹಂಕಾರ ಇರಲಿಲ್ಲ. ಯಾವುದೇ ನಿರ್ಮಾಪಕರು ಕೂಡ ಅವರನ್ನು ದೂರಲಿಲ್ಲ. ಇವತ್ತು ಅಮಿತಾಬ್ ಬಚ್ಚನ್ ದೊಡ್ಡ ಹೀರೋ ಆಗಿದ್ದಾರೆ ಅಂದ್ರೆ ಅದಕ್ಕೆ ಧರ್ಮೇಂದ್ರ ಕಾರಣ. ಅವರು ದೋಸೆ ಪ್ರಿಯರು. ಮೈಸೂರಿನ ಹೋಟೆಲ್‌ನಲ್ಲಿ ಸಾದಾ ದೋಸೆ ಎಲ್ಲ ಕೊಡಿಸಿದ್ದೆ. ಅದೆಲ್ಲಾ ಅವರಿಗೆ ಇಷ್ಟವಾಗುತ್ತಿತ್ತು. ಸಾಮಾನ್ಯವಾಗಿ ಎಂಟಿಆರ್‌ಗೆ ಹೋಗುತ್ತಿದ್ದರು. ಮೈಸೂರಿಗೆ ಹೋದರೆ ರಾಜ್ ಹೋಟೆಲ್‌ನಲ್ಲಿ ಇರುತ್ತಿದ್ದರು. ಇವರು ತುಂಬಾ ಒಳ್ಳೆಯ ಮನುಷ್ಯ. ಇಂತಹ ಮನುಷ್ಯ ಸಿಗೋದೇ ಕಷ್ಟ. ಯಾವಗ್ಲೋ ನೋಡಿದ್ರೂ ಯಾವತ್ತಿಗೂ ಮರೆಯುತ್ತಿರಲಿಲ್ಲ. ಸದಾ ನೆನಪಿನಲ್ಲಿಟ್ಟುಕೊಳ್ಳುತ್ತಿದ್ದರು ಎಂದು ನೆನಪಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

2 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

2 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

2 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

2 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

3 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

3 hours ago