ಮನರಂಜನೆ

ಬೆಂಗಳೂಲ್ಲಿ 300 ಎಕರೆ ಜಮೀನು ಖರೀದಿಸಿದ್ದ ಧರ್ಮೆಂದ್ರ

ಬೆಂಗಳೂರು : ಬಾಲಿವುಡ್ ನಟ ಧರ್ಮೇಂದ್ರ ಬೆಂಗಳೂರಲ್ಲಿ 300 ಎಕರೆ ಜಮೀನು ಖರೀದಿಸಿದ್ದರು ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಧರ್ಮೇಂದ್ರ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ.

ಧರ್ಮೇಂದ್ರ ನಿಧನದ ಕುರಿತು ಮಾತನಾಡಿದ ಅವರು, ಎಲೆಕ್ಟ್ರಾನಿಕ್ ಸಿಟಿ ಹತ್ತಿರ ಧರ್ಮೇಂದ್ರ 300 ಎಕರೆ ಜಮೀನು ಖರೀದಿಸಿದ್ದರು. ಆಮೇಲೆ ಅದನ್ನು ಮಾರಿಬಿಟ್ಟರು. ಅದನ್ನು ಮಾರಾಟ ಮಾಡಿದ ಮೇಲೆ ಆ ಜಾಗಕ್ಕೆ ಚಿನ್ನದಂತಹ ಬೆಲೆ ಬಂತು. ಧರ್ಮೇಂದ್ರ ತುಂಬಾ ಒಳ್ಳೆಯ ಮನುಷ್ಯ. ಯಾವುದಕ್ಕೂ ಆಸೆ ಪಡುತ್ತಿರಲಿಲ್ಲ. ದೇವರು ಅವರಿಗೆ ಎಲ್ಲವನ್ನೂ ಕೊಟ್ಟ. ಯಾರು ಏನೇ ಹೇಳಿದರೂ ಹೇಮಮಾಲಿಯನ್ನ ತುಂಬಾ ಚೆನ್ನಾಗಿ ನೋಡಿಕೊಂಡರು. ಅವರಿಬ್ಬರ ಲವ್ ಸ್ಟೋರಿಯನ್ನ ನಾನು ನೋಡಿದ್ದೇನೆ ಎಂದರು.

ಮೊದಲು ಬಣ್ಣ ಹಚ್ಚಿದ್ದೆ ಮೈಸೂರಲ್ಲಿ
ಧರ್ಮೇಂದ್ರ ನನಗೆ ತುಂಬಾ ಹತ್ತಿರದವರು. ಕರ್ನಾಟಕಕ್ಕೆ ಬಂದ ಸಂದರ್ಭ ಅಶೋಕಾ ಹೋಟೆಲ್‌ನಲ್ಲಿ ಇರುತ್ತಿದ್ದರು. ನಾನು, ಅಂಬರೀಷ್, ವಿಷ್ಣುವರ್ಧನ್ ಎಲ್ಲಾ ಜೊತೆಯಲ್ಲಿ ಇರುವ ಫೋಟೋಗಳು ವಿಷ್ಣುವರ್ಧನ್ ಬಳಿ ಇತ್ತು. ಅವರು ಮೊದಲಿಗೆ ಬಣ್ಣ ಹಚ್ಚಿ ಹೀರೋ ಆಗಿದ್ದೇ ಮೈಸೂರಿನ ಪ್ರೀಮಿಯರ್ ಸ್ಟುಡಿಯೋದಲ್ಲಿ. ಅಲ್ಲಿಂದ ಅವರು ನಮಗೆ ಪರಿಚಯ. 8 ತಿಂಗಳ ಹಿಂದೆ ಅವರನ್ನು ಭೇಟಿ ಮಾಡಲು ಹೋಗಿದ್ದೆವು. ಅವರೊಂದಿಗೆ ಒಂದು ಸಿನಿಮಾ ಮಾಡುವ ಯೋಚನೆ ಕೂಡ ಇತ್ತು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ:-ಬೆಂಗಳೂಲ್ಲಿ 300 ಎಕರೆ ಜಮೀನು ಖರೀದಿಸಿದ್ದ ಧರ್ಮೆಂದ್ರ

ಮೈಸೂರಿನ ದೋಸೆ ಅವರಿಗಿಷ್ಟ
ಧರ್ಮೇಂದ್ರ ಅಷ್ಟು ದೊಡ್ಡ ಮನುಷ್ಯರಾದರೂ ಸಹ ಬಂಗಾರದ ಮನುಷ್ಯ. ಅವರಿಗೆ ಯಾವುದೇ ರೀತಿಯ ಅಹಂಕಾರ ಇರಲಿಲ್ಲ. ಯಾವುದೇ ನಿರ್ಮಾಪಕರು ಕೂಡ ಅವರನ್ನು ದೂರಲಿಲ್ಲ. ಇವತ್ತು ಅಮಿತಾಬ್ ಬಚ್ಚನ್ ದೊಡ್ಡ ಹೀರೋ ಆಗಿದ್ದಾರೆ ಅಂದ್ರೆ ಅದಕ್ಕೆ ಧರ್ಮೇಂದ್ರ ಕಾರಣ. ಅವರು ದೋಸೆ ಪ್ರಿಯರು. ಮೈಸೂರಿನ ಹೋಟೆಲ್‌ನಲ್ಲಿ ಸಾದಾ ದೋಸೆ ಎಲ್ಲ ಕೊಡಿಸಿದ್ದೆ. ಅದೆಲ್ಲಾ ಅವರಿಗೆ ಇಷ್ಟವಾಗುತ್ತಿತ್ತು. ಸಾಮಾನ್ಯವಾಗಿ ಎಂಟಿಆರ್‌ಗೆ ಹೋಗುತ್ತಿದ್ದರು. ಮೈಸೂರಿಗೆ ಹೋದರೆ ರಾಜ್ ಹೋಟೆಲ್‌ನಲ್ಲಿ ಇರುತ್ತಿದ್ದರು. ಇವರು ತುಂಬಾ ಒಳ್ಳೆಯ ಮನುಷ್ಯ. ಇಂತಹ ಮನುಷ್ಯ ಸಿಗೋದೇ ಕಷ್ಟ. ಯಾವಗ್ಲೋ ನೋಡಿದ್ರೂ ಯಾವತ್ತಿಗೂ ಮರೆಯುತ್ತಿರಲಿಲ್ಲ. ಸದಾ ನೆನಪಿನಲ್ಲಿಟ್ಟುಕೊಳ್ಳುತ್ತಿದ್ದರು ಎಂದು ನೆನಪಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ಕೃಷಿ ಪದವಿ ಪಡೆಯಲು ಸುವರ್ಣ ಅವಕಾಶ : 50% ಮೀಸಲು, ಏಪ್ರಿಲ್ 29ಕ್ಕೆ ಪ್ರಾಯೋಗಿಕ ಪರೀಕ್ಷೆ

ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ…

3 mins ago

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ…

42 mins ago

ಸಚಿವ ಸಂಪುಟ ಪುನರಾಚನೆಗೆ ಒತ್ತಡ ; ಕಾಂಗ್ರೆಸ್ ಶಾಸಕರು ಇಂದು ದೆಹಲಿಗೆ.

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ)…

48 mins ago

ಓದುಗರ ಪತ್ರ | ಕಿಕ್ಕೇರಿ ಕೆರೆಗೆ ಕೆಎಸ್‌ನ ಹೆಸರು ನಾಮಕರಣ ಶ್ಲಾಘನೀಯ

ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…

2 hours ago

ಓದುಗರ ಪತ್ರ | ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಿ

ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ ; ಬಿಜೆಪಿಗೆ ತಮಿಳುನಾಡು, ಪಶ್ಚಿಮ ಬಂಗಾಳವೇ ತಲೆನೋವು

ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…

2 hours ago