ಮನರಂಜನೆ

ಬೆಂಗಳೂಲ್ಲಿ 300 ಎಕರೆ ಜಮೀನು ಖರೀದಿಸಿದ್ದ ಧರ್ಮೆಂದ್ರ

ಬೆಂಗಳೂರು : ಬಾಲಿವುಡ್ ನಟ ಧರ್ಮೇಂದ್ರ ಬೆಂಗಳೂರಲ್ಲಿ 300 ಎಕರೆ ಜಮೀನು ಖರೀದಿಸಿದ್ದರು ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಧರ್ಮೇಂದ್ರ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ.

ಧರ್ಮೇಂದ್ರ ನಿಧನದ ಕುರಿತು ಮಾತನಾಡಿದ ಅವರು, ಎಲೆಕ್ಟ್ರಾನಿಕ್ ಸಿಟಿ ಹತ್ತಿರ ಧರ್ಮೇಂದ್ರ 300 ಎಕರೆ ಜಮೀನು ಖರೀದಿಸಿದ್ದರು. ಆಮೇಲೆ ಅದನ್ನು ಮಾರಿಬಿಟ್ಟರು. ಅದನ್ನು ಮಾರಾಟ ಮಾಡಿದ ಮೇಲೆ ಆ ಜಾಗಕ್ಕೆ ಚಿನ್ನದಂತಹ ಬೆಲೆ ಬಂತು. ಧರ್ಮೇಂದ್ರ ತುಂಬಾ ಒಳ್ಳೆಯ ಮನುಷ್ಯ. ಯಾವುದಕ್ಕೂ ಆಸೆ ಪಡುತ್ತಿರಲಿಲ್ಲ. ದೇವರು ಅವರಿಗೆ ಎಲ್ಲವನ್ನೂ ಕೊಟ್ಟ. ಯಾರು ಏನೇ ಹೇಳಿದರೂ ಹೇಮಮಾಲಿಯನ್ನ ತುಂಬಾ ಚೆನ್ನಾಗಿ ನೋಡಿಕೊಂಡರು. ಅವರಿಬ್ಬರ ಲವ್ ಸ್ಟೋರಿಯನ್ನ ನಾನು ನೋಡಿದ್ದೇನೆ ಎಂದರು.

ಮೊದಲು ಬಣ್ಣ ಹಚ್ಚಿದ್ದೆ ಮೈಸೂರಲ್ಲಿ
ಧರ್ಮೇಂದ್ರ ನನಗೆ ತುಂಬಾ ಹತ್ತಿರದವರು. ಕರ್ನಾಟಕಕ್ಕೆ ಬಂದ ಸಂದರ್ಭ ಅಶೋಕಾ ಹೋಟೆಲ್‌ನಲ್ಲಿ ಇರುತ್ತಿದ್ದರು. ನಾನು, ಅಂಬರೀಷ್, ವಿಷ್ಣುವರ್ಧನ್ ಎಲ್ಲಾ ಜೊತೆಯಲ್ಲಿ ಇರುವ ಫೋಟೋಗಳು ವಿಷ್ಣುವರ್ಧನ್ ಬಳಿ ಇತ್ತು. ಅವರು ಮೊದಲಿಗೆ ಬಣ್ಣ ಹಚ್ಚಿ ಹೀರೋ ಆಗಿದ್ದೇ ಮೈಸೂರಿನ ಪ್ರೀಮಿಯರ್ ಸ್ಟುಡಿಯೋದಲ್ಲಿ. ಅಲ್ಲಿಂದ ಅವರು ನಮಗೆ ಪರಿಚಯ. 8 ತಿಂಗಳ ಹಿಂದೆ ಅವರನ್ನು ಭೇಟಿ ಮಾಡಲು ಹೋಗಿದ್ದೆವು. ಅವರೊಂದಿಗೆ ಒಂದು ಸಿನಿಮಾ ಮಾಡುವ ಯೋಚನೆ ಕೂಡ ಇತ್ತು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ:-ಬೆಂಗಳೂಲ್ಲಿ 300 ಎಕರೆ ಜಮೀನು ಖರೀದಿಸಿದ್ದ ಧರ್ಮೆಂದ್ರ

ಮೈಸೂರಿನ ದೋಸೆ ಅವರಿಗಿಷ್ಟ
ಧರ್ಮೇಂದ್ರ ಅಷ್ಟು ದೊಡ್ಡ ಮನುಷ್ಯರಾದರೂ ಸಹ ಬಂಗಾರದ ಮನುಷ್ಯ. ಅವರಿಗೆ ಯಾವುದೇ ರೀತಿಯ ಅಹಂಕಾರ ಇರಲಿಲ್ಲ. ಯಾವುದೇ ನಿರ್ಮಾಪಕರು ಕೂಡ ಅವರನ್ನು ದೂರಲಿಲ್ಲ. ಇವತ್ತು ಅಮಿತಾಬ್ ಬಚ್ಚನ್ ದೊಡ್ಡ ಹೀರೋ ಆಗಿದ್ದಾರೆ ಅಂದ್ರೆ ಅದಕ್ಕೆ ಧರ್ಮೇಂದ್ರ ಕಾರಣ. ಅವರು ದೋಸೆ ಪ್ರಿಯರು. ಮೈಸೂರಿನ ಹೋಟೆಲ್‌ನಲ್ಲಿ ಸಾದಾ ದೋಸೆ ಎಲ್ಲ ಕೊಡಿಸಿದ್ದೆ. ಅದೆಲ್ಲಾ ಅವರಿಗೆ ಇಷ್ಟವಾಗುತ್ತಿತ್ತು. ಸಾಮಾನ್ಯವಾಗಿ ಎಂಟಿಆರ್‌ಗೆ ಹೋಗುತ್ತಿದ್ದರು. ಮೈಸೂರಿಗೆ ಹೋದರೆ ರಾಜ್ ಹೋಟೆಲ್‌ನಲ್ಲಿ ಇರುತ್ತಿದ್ದರು. ಇವರು ತುಂಬಾ ಒಳ್ಳೆಯ ಮನುಷ್ಯ. ಇಂತಹ ಮನುಷ್ಯ ಸಿಗೋದೇ ಕಷ್ಟ. ಯಾವಗ್ಲೋ ನೋಡಿದ್ರೂ ಯಾವತ್ತಿಗೂ ಮರೆಯುತ್ತಿರಲಿಲ್ಲ. ಸದಾ ನೆನಪಿನಲ್ಲಿಟ್ಟುಕೊಳ್ಳುತ್ತಿದ್ದರು ಎಂದು ನೆನಪಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

11 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

14 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

17 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

21 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

21 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

21 hours ago