ಮನರಂಜನೆ

ಬೆಂಗಳೂಲ್ಲಿ 300 ಎಕರೆ ಜಮೀನು ಖರೀದಿಸಿದ್ದ ಧರ್ಮೆಂದ್ರ

ಬೆಂಗಳೂರು : ಬಾಲಿವುಡ್ ನಟ ಧರ್ಮೇಂದ್ರ ಬೆಂಗಳೂರಲ್ಲಿ 300 ಎಕರೆ ಜಮೀನು ಖರೀದಿಸಿದ್ದರು ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಧರ್ಮೇಂದ್ರ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ.

ಧರ್ಮೇಂದ್ರ ನಿಧನದ ಕುರಿತು ಮಾತನಾಡಿದ ಅವರು, ಎಲೆಕ್ಟ್ರಾನಿಕ್ ಸಿಟಿ ಹತ್ತಿರ ಧರ್ಮೇಂದ್ರ 300 ಎಕರೆ ಜಮೀನು ಖರೀದಿಸಿದ್ದರು. ಆಮೇಲೆ ಅದನ್ನು ಮಾರಿಬಿಟ್ಟರು. ಅದನ್ನು ಮಾರಾಟ ಮಾಡಿದ ಮೇಲೆ ಆ ಜಾಗಕ್ಕೆ ಚಿನ್ನದಂತಹ ಬೆಲೆ ಬಂತು. ಧರ್ಮೇಂದ್ರ ತುಂಬಾ ಒಳ್ಳೆಯ ಮನುಷ್ಯ. ಯಾವುದಕ್ಕೂ ಆಸೆ ಪಡುತ್ತಿರಲಿಲ್ಲ. ದೇವರು ಅವರಿಗೆ ಎಲ್ಲವನ್ನೂ ಕೊಟ್ಟ. ಯಾರು ಏನೇ ಹೇಳಿದರೂ ಹೇಮಮಾಲಿಯನ್ನ ತುಂಬಾ ಚೆನ್ನಾಗಿ ನೋಡಿಕೊಂಡರು. ಅವರಿಬ್ಬರ ಲವ್ ಸ್ಟೋರಿಯನ್ನ ನಾನು ನೋಡಿದ್ದೇನೆ ಎಂದರು.

ಮೊದಲು ಬಣ್ಣ ಹಚ್ಚಿದ್ದೆ ಮೈಸೂರಲ್ಲಿ
ಧರ್ಮೇಂದ್ರ ನನಗೆ ತುಂಬಾ ಹತ್ತಿರದವರು. ಕರ್ನಾಟಕಕ್ಕೆ ಬಂದ ಸಂದರ್ಭ ಅಶೋಕಾ ಹೋಟೆಲ್‌ನಲ್ಲಿ ಇರುತ್ತಿದ್ದರು. ನಾನು, ಅಂಬರೀಷ್, ವಿಷ್ಣುವರ್ಧನ್ ಎಲ್ಲಾ ಜೊತೆಯಲ್ಲಿ ಇರುವ ಫೋಟೋಗಳು ವಿಷ್ಣುವರ್ಧನ್ ಬಳಿ ಇತ್ತು. ಅವರು ಮೊದಲಿಗೆ ಬಣ್ಣ ಹಚ್ಚಿ ಹೀರೋ ಆಗಿದ್ದೇ ಮೈಸೂರಿನ ಪ್ರೀಮಿಯರ್ ಸ್ಟುಡಿಯೋದಲ್ಲಿ. ಅಲ್ಲಿಂದ ಅವರು ನಮಗೆ ಪರಿಚಯ. 8 ತಿಂಗಳ ಹಿಂದೆ ಅವರನ್ನು ಭೇಟಿ ಮಾಡಲು ಹೋಗಿದ್ದೆವು. ಅವರೊಂದಿಗೆ ಒಂದು ಸಿನಿಮಾ ಮಾಡುವ ಯೋಚನೆ ಕೂಡ ಇತ್ತು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ:-ಬೆಂಗಳೂಲ್ಲಿ 300 ಎಕರೆ ಜಮೀನು ಖರೀದಿಸಿದ್ದ ಧರ್ಮೆಂದ್ರ

ಮೈಸೂರಿನ ದೋಸೆ ಅವರಿಗಿಷ್ಟ
ಧರ್ಮೇಂದ್ರ ಅಷ್ಟು ದೊಡ್ಡ ಮನುಷ್ಯರಾದರೂ ಸಹ ಬಂಗಾರದ ಮನುಷ್ಯ. ಅವರಿಗೆ ಯಾವುದೇ ರೀತಿಯ ಅಹಂಕಾರ ಇರಲಿಲ್ಲ. ಯಾವುದೇ ನಿರ್ಮಾಪಕರು ಕೂಡ ಅವರನ್ನು ದೂರಲಿಲ್ಲ. ಇವತ್ತು ಅಮಿತಾಬ್ ಬಚ್ಚನ್ ದೊಡ್ಡ ಹೀರೋ ಆಗಿದ್ದಾರೆ ಅಂದ್ರೆ ಅದಕ್ಕೆ ಧರ್ಮೇಂದ್ರ ಕಾರಣ. ಅವರು ದೋಸೆ ಪ್ರಿಯರು. ಮೈಸೂರಿನ ಹೋಟೆಲ್‌ನಲ್ಲಿ ಸಾದಾ ದೋಸೆ ಎಲ್ಲ ಕೊಡಿಸಿದ್ದೆ. ಅದೆಲ್ಲಾ ಅವರಿಗೆ ಇಷ್ಟವಾಗುತ್ತಿತ್ತು. ಸಾಮಾನ್ಯವಾಗಿ ಎಂಟಿಆರ್‌ಗೆ ಹೋಗುತ್ತಿದ್ದರು. ಮೈಸೂರಿಗೆ ಹೋದರೆ ರಾಜ್ ಹೋಟೆಲ್‌ನಲ್ಲಿ ಇರುತ್ತಿದ್ದರು. ಇವರು ತುಂಬಾ ಒಳ್ಳೆಯ ಮನುಷ್ಯ. ಇಂತಹ ಮನುಷ್ಯ ಸಿಗೋದೇ ಕಷ್ಟ. ಯಾವಗ್ಲೋ ನೋಡಿದ್ರೂ ಯಾವತ್ತಿಗೂ ಮರೆಯುತ್ತಿರಲಿಲ್ಲ. ಸದಾ ನೆನಪಿನಲ್ಲಿಟ್ಟುಕೊಳ್ಳುತ್ತಿದ್ದರು ಎಂದು ನೆನಪಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

8 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

10 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

11 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

11 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

13 hours ago