ಮನರಂಜನೆ

ಬೆಂಗಳೂಲ್ಲಿ 300 ಎಕರೆ ಜಮೀನು ಖರೀದಿಸಿದ್ದ ಧರ್ಮೆಂದ್ರ

ಬೆಂಗಳೂರು : ಬಾಲಿವುಡ್ ನಟ ಧರ್ಮೇಂದ್ರ ಬೆಂಗಳೂರಲ್ಲಿ 300 ಎಕರೆ ಜಮೀನು ಖರೀದಿಸಿದ್ದರು ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಧರ್ಮೇಂದ್ರ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ.

ಧರ್ಮೇಂದ್ರ ನಿಧನದ ಕುರಿತು ಮಾತನಾಡಿದ ಅವರು, ಎಲೆಕ್ಟ್ರಾನಿಕ್ ಸಿಟಿ ಹತ್ತಿರ ಧರ್ಮೇಂದ್ರ 300 ಎಕರೆ ಜಮೀನು ಖರೀದಿಸಿದ್ದರು. ಆಮೇಲೆ ಅದನ್ನು ಮಾರಿಬಿಟ್ಟರು. ಅದನ್ನು ಮಾರಾಟ ಮಾಡಿದ ಮೇಲೆ ಆ ಜಾಗಕ್ಕೆ ಚಿನ್ನದಂತಹ ಬೆಲೆ ಬಂತು. ಧರ್ಮೇಂದ್ರ ತುಂಬಾ ಒಳ್ಳೆಯ ಮನುಷ್ಯ. ಯಾವುದಕ್ಕೂ ಆಸೆ ಪಡುತ್ತಿರಲಿಲ್ಲ. ದೇವರು ಅವರಿಗೆ ಎಲ್ಲವನ್ನೂ ಕೊಟ್ಟ. ಯಾರು ಏನೇ ಹೇಳಿದರೂ ಹೇಮಮಾಲಿಯನ್ನ ತುಂಬಾ ಚೆನ್ನಾಗಿ ನೋಡಿಕೊಂಡರು. ಅವರಿಬ್ಬರ ಲವ್ ಸ್ಟೋರಿಯನ್ನ ನಾನು ನೋಡಿದ್ದೇನೆ ಎಂದರು.

ಮೊದಲು ಬಣ್ಣ ಹಚ್ಚಿದ್ದೆ ಮೈಸೂರಲ್ಲಿ
ಧರ್ಮೇಂದ್ರ ನನಗೆ ತುಂಬಾ ಹತ್ತಿರದವರು. ಕರ್ನಾಟಕಕ್ಕೆ ಬಂದ ಸಂದರ್ಭ ಅಶೋಕಾ ಹೋಟೆಲ್‌ನಲ್ಲಿ ಇರುತ್ತಿದ್ದರು. ನಾನು, ಅಂಬರೀಷ್, ವಿಷ್ಣುವರ್ಧನ್ ಎಲ್ಲಾ ಜೊತೆಯಲ್ಲಿ ಇರುವ ಫೋಟೋಗಳು ವಿಷ್ಣುವರ್ಧನ್ ಬಳಿ ಇತ್ತು. ಅವರು ಮೊದಲಿಗೆ ಬಣ್ಣ ಹಚ್ಚಿ ಹೀರೋ ಆಗಿದ್ದೇ ಮೈಸೂರಿನ ಪ್ರೀಮಿಯರ್ ಸ್ಟುಡಿಯೋದಲ್ಲಿ. ಅಲ್ಲಿಂದ ಅವರು ನಮಗೆ ಪರಿಚಯ. 8 ತಿಂಗಳ ಹಿಂದೆ ಅವರನ್ನು ಭೇಟಿ ಮಾಡಲು ಹೋಗಿದ್ದೆವು. ಅವರೊಂದಿಗೆ ಒಂದು ಸಿನಿಮಾ ಮಾಡುವ ಯೋಚನೆ ಕೂಡ ಇತ್ತು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ:-ಬೆಂಗಳೂಲ್ಲಿ 300 ಎಕರೆ ಜಮೀನು ಖರೀದಿಸಿದ್ದ ಧರ್ಮೆಂದ್ರ

ಮೈಸೂರಿನ ದೋಸೆ ಅವರಿಗಿಷ್ಟ
ಧರ್ಮೇಂದ್ರ ಅಷ್ಟು ದೊಡ್ಡ ಮನುಷ್ಯರಾದರೂ ಸಹ ಬಂಗಾರದ ಮನುಷ್ಯ. ಅವರಿಗೆ ಯಾವುದೇ ರೀತಿಯ ಅಹಂಕಾರ ಇರಲಿಲ್ಲ. ಯಾವುದೇ ನಿರ್ಮಾಪಕರು ಕೂಡ ಅವರನ್ನು ದೂರಲಿಲ್ಲ. ಇವತ್ತು ಅಮಿತಾಬ್ ಬಚ್ಚನ್ ದೊಡ್ಡ ಹೀರೋ ಆಗಿದ್ದಾರೆ ಅಂದ್ರೆ ಅದಕ್ಕೆ ಧರ್ಮೇಂದ್ರ ಕಾರಣ. ಅವರು ದೋಸೆ ಪ್ರಿಯರು. ಮೈಸೂರಿನ ಹೋಟೆಲ್‌ನಲ್ಲಿ ಸಾದಾ ದೋಸೆ ಎಲ್ಲ ಕೊಡಿಸಿದ್ದೆ. ಅದೆಲ್ಲಾ ಅವರಿಗೆ ಇಷ್ಟವಾಗುತ್ತಿತ್ತು. ಸಾಮಾನ್ಯವಾಗಿ ಎಂಟಿಆರ್‌ಗೆ ಹೋಗುತ್ತಿದ್ದರು. ಮೈಸೂರಿಗೆ ಹೋದರೆ ರಾಜ್ ಹೋಟೆಲ್‌ನಲ್ಲಿ ಇರುತ್ತಿದ್ದರು. ಇವರು ತುಂಬಾ ಒಳ್ಳೆಯ ಮನುಷ್ಯ. ಇಂತಹ ಮನುಷ್ಯ ಸಿಗೋದೇ ಕಷ್ಟ. ಯಾವಗ್ಲೋ ನೋಡಿದ್ರೂ ಯಾವತ್ತಿಗೂ ಮರೆಯುತ್ತಿರಲಿಲ್ಲ. ಸದಾ ನೆನಪಿನಲ್ಲಿಟ್ಟುಕೊಳ್ಳುತ್ತಿದ್ದರು ಎಂದು ನೆನಪಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

1 hour ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

1 hour ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

2 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

2 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

2 hours ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

5 hours ago