ಕನ್ನಡದಲ್ಲಿ ‘ದಿ’ ಎನ್ನುವ ಹೆಸರೊಂದು ಸದ್ದಿಲ್ಲದೆ ತಯಾರಾಗಿ ಬಿಡುಗಡೆಯಾಗಿದೆ. ಚಿತ್ರ ಮೇ.16ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಟ ಮಂಡ್ಯ ರಮೇಶ್ ‘ದಿ’ ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿ ಪ್ರದರ್ಶನ ಕಾಣಲಿ ಎಂದು ಹಾರೈಸಿದರು.
ಈ ಚಿತ್ರಕ್ಕೆ ‘ದಿ’ ಎಂದು ಹೆಸರಿಡಲು ಮೂರು ಕಾಣಗಳಿವೆಯಂತೆ. ಈ ಕುರಿತು ಮಾತನಾಡುವ ನಿರ್ದೇಶಕ ಕಂ ನಾಯಕ ವಿನಯ್ ವಾಸುದೇವ್, ‘ಚಿತ್ರಕ್ಕೆ ‘ದಿ’ ಎಂದು ಹೆಸರಿಡಲು ಮೂರು ಜನ ಮುಖ್ಯ ಕಾರಣ. ಒಂದು ನಟ ಸುದೀಪ್. ಇನ್ನೊಬ್ಬರು ನನ್ನ ಗುರುಗಳು. ನಾನು ಸುದೀಪ್ ಅವರ ಅಭಿಮಾನಿ ಹಾಗೂ ನಮ್ಮ ಗುರುಗಳ ಹೆಸರಿನಲ್ಲೂ ದಿ ಅಕ್ಷರವಿದೆ. ಚಿತ್ರದಲ್ಲೂ ನಾಯಕನ ಹೆಸರು ದೀಪು. ನಮ್ಮ ‘ದಿ’ ಚಿತ್ರದ ನಾಯಕಿ ಹೆಸರು ದಿಶಾ ರಮೇಶ್. ಈ ಎಲ್ಲಾ ಕಾರಣಗಳಿಂದ ನಮ್ಮ ಚಿತ್ರಕ್ಕೆ ‘ದಿ’ ಎಂದು ಶೀರ್ಷಿಕೆ ಇಡಲಾಗಿದೆ. ಹಾಗಾಗಿ ಇದು ಇಂಗ್ಲೀಷ್ ‘The’ ಅಲ್ಲ. ಕನ್ನಡದ ‘ದಿ’ ಎಂದರು.
ಈ ಚಿತ್ರದ ಶೇಕಡ 80% ರಷ್ಟು ಭಾಗದ ಚಿತ್ರೀಕರಣ ಕಾಡಿನಲ್ಲೇ ನಡೆಯುತ್ತದೆಯಂತೆ. ‘ದೇವರಾಯನ ದುರ್ಗ, ದೇವರಮನೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಚಿತ್ರೀಕರಣವಾದ ಸ್ಥಳಗಳ ಹೆಸರಿನಲ್ಲೂ ದ ಅಕ್ಷರವಿದೆ. ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದೇನೆ ಜೊತೆಗೆ ನಾಯಕನಾಗೂ ನಟಿಸಿದ್ದೇನೆ. ಚಿತ್ರತಂಡದ ಎಲ್ಲರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇದೇ ಮೇ.16 ರಂದು ತೆರೆ ಕಾಣಲಿದೆ’ ಎಂದರು.
ಇದನ್ನೂ ಓದಿ:- ತಮಿಳುನಾಡು| ವೇದಿಕೆ ಮೇಲೆಯೇ ಕುಸಿದು ಬಿದ್ದ ತಮಿಳು ನಟ ವಿಶಾಲ್
ನಾಯಕಿ ದಿಶಾ ರಮೇಶ್ ಮಾತನಾಡಿ, ‘ನನಗೆ ವಿನಯ್ ಅವರು ಕಥೆ ಹೇಳಿದಾಗ ಕಥೆ ಕೇಳಿ ಬಹಳ ಇಷ್ಟವಾಯಿತು. ನಂತರ ಟೀಸರ್ ನೋಡಿದ ಮೇಲಂತೂ ಅವರು ಹೇಳಿದಕ್ಕಿಂತ ಇನ್ನೂ ಚೆನ್ನಾಗಿ ಮೂಡಿ ಬಂದಿತ್ತು. ಒಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ’ ಎಂದರು.
‘ದಿ’ ಚಿತ್ರದಲ್ಲಿ ಹರಿಣಿ ಶ್ರೀಕಾಂತ್, ನಾಗೇಂದ್ರ ಅರಸ್, ಡಾಲಾ ಶರಣ್, ಕಲಾರತಿ ಮಹಾದೇವ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಲೆನ್ ಭರತ್ ಛಾಯಾಗ್ರಹಣ, ಯು.ಎಂ. ಸ್ಟೀವನ್ ಸತೀಶ್ ಸಂಗೀತವಿದೆ.
ವನ್ಯಜೀವಿ ಚಿತ್ರಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…
ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…
ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…