Categories: ಮನರಂಜನೆ

ದಿ’ ಎಂಬ ಹೆಸರಿಡಲು ಆ ಮೂರು ಕಾರಣಗಳು …

ಕನ್ನಡದಲ್ಲಿ ‘ದಿ’ ಎನ್ನುವ ಹೆಸರೊಂದು ಸದ್ದಿಲ್ಲದೆ ತಯಾರಾಗಿ ಬಿಡುಗಡೆಯಾಗಿದೆ. ಚಿತ್ರ ಮೇ.16ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಟ ಮಂಡ್ಯ ರಮೇಶ್ ‘ದಿ’ ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿ ‌ಪ್ರದರ್ಶನ ಕಾಣಲಿ ಎಂದು ಹಾರೈಸಿದರು.

ಈ ಚಿತ್ರಕ್ಕೆ ‘ದಿ’ ಎಂದು ಹೆಸರಿಡಲು ಮೂರು ಕಾಣಗಳಿವೆಯಂತೆ. ಈ ಕುರಿತು ಮಾತನಾಡುವ ನಿರ್ದೇಶಕ ಕಂ ನಾಯಕ ವಿನಯ್‍ ವಾಸುದೇವ್‍, ‘ಚಿತ್ರಕ್ಕೆ ‘ದಿ’ ಎಂದು ಹೆಸರಿಡಲು ಮೂರು ಜನ ಮುಖ್ಯ ಕಾರಣ. ಒಂದು ನಟ ಸುದೀಪ್. ಇನ್ನೊಬ್ಬರು ನನ್ನ ಗುರುಗಳು. ನಾನು ಸುದೀಪ್ ಅವರ ಅಭಿಮಾನಿ ಹಾಗೂ ನಮ್ಮ ಗುರುಗಳ ಹೆಸರಿನಲ್ಲೂ ದಿ ಅಕ್ಷರವಿದೆ. ಚಿತ್ರದಲ್ಲೂ ನಾಯಕನ ಹೆಸರು ದೀಪು. ನಮ್ಮ ‘ದಿ’ ಚಿತ್ರದ ನಾಯಕಿ ಹೆಸರು ದಿಶಾ ರಮೇಶ್. ಈ ಎಲ್ಲಾ ಕಾರಣಗಳಿಂದ ನಮ್ಮ ಚಿತ್ರಕ್ಕೆ ‘ದಿ’ ಎಂದು ಶೀರ್ಷಿಕೆ ಇಡಲಾಗಿದೆ‌. ಹಾಗಾಗಿ ಇದು ಇಂಗ್ಲೀಷ್ ‘The’ ಅಲ್ಲ‌. ಕನ್ನಡದ ‘ದಿ’ ಎಂದರು.

ಈ ಚಿತ್ರದ ಶೇಕಡ 80% ರಷ್ಟು ಭಾಗದ ಚಿತ್ರೀಕರಣ ಕಾಡಿನಲ್ಲೇ ನಡೆಯುತ್ತದೆಯಂತೆ. ‘ದೇವರಾಯನ ದುರ್ಗ, ದೇವರಮನೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ‌. ಚಿತ್ರೀಕರಣವಾದ ಸ್ಥಳಗಳ ಹೆಸರಿನಲ್ಲೂ ದ ಅಕ್ಷರವಿದೆ. ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದೇನೆ ಜೊತೆಗೆ ನಾಯಕನಾಗೂ ನಟಿಸಿದ್ದೇನೆ. ಚಿತ್ರತಂಡದ ಎಲ್ಲರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇದೇ ಮೇ.16 ರಂದು ತೆರೆ ಕಾಣಲಿದೆ’ ಎಂದರು.

ಇದನ್ನೂ ಓದಿ:- ತಮಿಳುನಾಡು| ವೇದಿಕೆ ಮೇಲೆಯೇ ಕುಸಿದು ಬಿದ್ದ ತಮಿಳು ನಟ ವಿಶಾಲ್‌

ನಾಯಕಿ ದಿಶಾ ರಮೇಶ್‍ ಮಾತನಾಡಿ, ‘ನನಗೆ ವಿನಯ್ ಅವರು ಕಥೆ ಹೇಳಿದಾಗ ಕಥೆ ಕೇಳಿ ಬಹಳ ಇಷ್ಟವಾಯಿತು. ನಂತರ ಟೀಸರ್ ನೋಡಿದ ಮೇಲಂತೂ ಅವರು ಹೇಳಿದಕ್ಕಿಂತ ಇನ್ನೂ ಚೆನ್ನಾಗಿ ಮೂಡಿ ಬಂದಿತ್ತು. ಒಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ’ ಎಂದರು.

‘ದಿ’ ಚಿತ್ರದಲ್ಲಿ ಹರಿಣಿ ಶ್ರೀಕಾಂತ್, ನಾಗೇಂದ್ರ ಅರಸ್, ಡಾಲಾ ಶರಣ್, ಕಲಾರತಿ ಮಹಾದೇವ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಲೆನ್‍ ಭರತ್‍ ಛಾಯಾಗ್ರಹಣ, ಯು.ಎಂ. ಸ್ಟೀವನ್ ಸತೀಶ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

2 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

2 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

2 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

2 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago