Categories: ಮನರಂಜನೆ

ದಿ’ ಎಂಬ ಹೆಸರಿಡಲು ಆ ಮೂರು ಕಾರಣಗಳು …

ಕನ್ನಡದಲ್ಲಿ ‘ದಿ’ ಎನ್ನುವ ಹೆಸರೊಂದು ಸದ್ದಿಲ್ಲದೆ ತಯಾರಾಗಿ ಬಿಡುಗಡೆಯಾಗಿದೆ. ಚಿತ್ರ ಮೇ.16ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಟ ಮಂಡ್ಯ ರಮೇಶ್ ‘ದಿ’ ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿ ‌ಪ್ರದರ್ಶನ ಕಾಣಲಿ ಎಂದು ಹಾರೈಸಿದರು.

ಈ ಚಿತ್ರಕ್ಕೆ ‘ದಿ’ ಎಂದು ಹೆಸರಿಡಲು ಮೂರು ಕಾಣಗಳಿವೆಯಂತೆ. ಈ ಕುರಿತು ಮಾತನಾಡುವ ನಿರ್ದೇಶಕ ಕಂ ನಾಯಕ ವಿನಯ್‍ ವಾಸುದೇವ್‍, ‘ಚಿತ್ರಕ್ಕೆ ‘ದಿ’ ಎಂದು ಹೆಸರಿಡಲು ಮೂರು ಜನ ಮುಖ್ಯ ಕಾರಣ. ಒಂದು ನಟ ಸುದೀಪ್. ಇನ್ನೊಬ್ಬರು ನನ್ನ ಗುರುಗಳು. ನಾನು ಸುದೀಪ್ ಅವರ ಅಭಿಮಾನಿ ಹಾಗೂ ನಮ್ಮ ಗುರುಗಳ ಹೆಸರಿನಲ್ಲೂ ದಿ ಅಕ್ಷರವಿದೆ. ಚಿತ್ರದಲ್ಲೂ ನಾಯಕನ ಹೆಸರು ದೀಪು. ನಮ್ಮ ‘ದಿ’ ಚಿತ್ರದ ನಾಯಕಿ ಹೆಸರು ದಿಶಾ ರಮೇಶ್. ಈ ಎಲ್ಲಾ ಕಾರಣಗಳಿಂದ ನಮ್ಮ ಚಿತ್ರಕ್ಕೆ ‘ದಿ’ ಎಂದು ಶೀರ್ಷಿಕೆ ಇಡಲಾಗಿದೆ‌. ಹಾಗಾಗಿ ಇದು ಇಂಗ್ಲೀಷ್ ‘The’ ಅಲ್ಲ‌. ಕನ್ನಡದ ‘ದಿ’ ಎಂದರು.

ಈ ಚಿತ್ರದ ಶೇಕಡ 80% ರಷ್ಟು ಭಾಗದ ಚಿತ್ರೀಕರಣ ಕಾಡಿನಲ್ಲೇ ನಡೆಯುತ್ತದೆಯಂತೆ. ‘ದೇವರಾಯನ ದುರ್ಗ, ದೇವರಮನೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ‌. ಚಿತ್ರೀಕರಣವಾದ ಸ್ಥಳಗಳ ಹೆಸರಿನಲ್ಲೂ ದ ಅಕ್ಷರವಿದೆ. ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದೇನೆ ಜೊತೆಗೆ ನಾಯಕನಾಗೂ ನಟಿಸಿದ್ದೇನೆ. ಚಿತ್ರತಂಡದ ಎಲ್ಲರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇದೇ ಮೇ.16 ರಂದು ತೆರೆ ಕಾಣಲಿದೆ’ ಎಂದರು.

ಇದನ್ನೂ ಓದಿ:- ತಮಿಳುನಾಡು| ವೇದಿಕೆ ಮೇಲೆಯೇ ಕುಸಿದು ಬಿದ್ದ ತಮಿಳು ನಟ ವಿಶಾಲ್‌

ನಾಯಕಿ ದಿಶಾ ರಮೇಶ್‍ ಮಾತನಾಡಿ, ‘ನನಗೆ ವಿನಯ್ ಅವರು ಕಥೆ ಹೇಳಿದಾಗ ಕಥೆ ಕೇಳಿ ಬಹಳ ಇಷ್ಟವಾಯಿತು. ನಂತರ ಟೀಸರ್ ನೋಡಿದ ಮೇಲಂತೂ ಅವರು ಹೇಳಿದಕ್ಕಿಂತ ಇನ್ನೂ ಚೆನ್ನಾಗಿ ಮೂಡಿ ಬಂದಿತ್ತು. ಒಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ’ ಎಂದರು.

‘ದಿ’ ಚಿತ್ರದಲ್ಲಿ ಹರಿಣಿ ಶ್ರೀಕಾಂತ್, ನಾಗೇಂದ್ರ ಅರಸ್, ಡಾಲಾ ಶರಣ್, ಕಲಾರತಿ ಮಹಾದೇವ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಲೆನ್‍ ಭರತ್‍ ಛಾಯಾಗ್ರಹಣ, ಯು.ಎಂ. ಸ್ಟೀವನ್ ಸತೀಶ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

53 mins ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

57 mins ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

59 mins ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

1 hour ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

1 hour ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

1 hour ago