ಕನ್ನಡದಲ್ಲಿ ‘ದಿ’ ಎನ್ನುವ ಹೆಸರೊಂದು ಸದ್ದಿಲ್ಲದೆ ತಯಾರಾಗಿ ಬಿಡುಗಡೆಯಾಗಿದೆ. ಚಿತ್ರ ಮೇ.16ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಟ ಮಂಡ್ಯ ರಮೇಶ್ ‘ದಿ’ ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿ ಪ್ರದರ್ಶನ ಕಾಣಲಿ ಎಂದು ಹಾರೈಸಿದರು.
ಈ ಚಿತ್ರಕ್ಕೆ ‘ದಿ’ ಎಂದು ಹೆಸರಿಡಲು ಮೂರು ಕಾಣಗಳಿವೆಯಂತೆ. ಈ ಕುರಿತು ಮಾತನಾಡುವ ನಿರ್ದೇಶಕ ಕಂ ನಾಯಕ ವಿನಯ್ ವಾಸುದೇವ್, ‘ಚಿತ್ರಕ್ಕೆ ‘ದಿ’ ಎಂದು ಹೆಸರಿಡಲು ಮೂರು ಜನ ಮುಖ್ಯ ಕಾರಣ. ಒಂದು ನಟ ಸುದೀಪ್. ಇನ್ನೊಬ್ಬರು ನನ್ನ ಗುರುಗಳು. ನಾನು ಸುದೀಪ್ ಅವರ ಅಭಿಮಾನಿ ಹಾಗೂ ನಮ್ಮ ಗುರುಗಳ ಹೆಸರಿನಲ್ಲೂ ದಿ ಅಕ್ಷರವಿದೆ. ಚಿತ್ರದಲ್ಲೂ ನಾಯಕನ ಹೆಸರು ದೀಪು. ನಮ್ಮ ‘ದಿ’ ಚಿತ್ರದ ನಾಯಕಿ ಹೆಸರು ದಿಶಾ ರಮೇಶ್. ಈ ಎಲ್ಲಾ ಕಾರಣಗಳಿಂದ ನಮ್ಮ ಚಿತ್ರಕ್ಕೆ ‘ದಿ’ ಎಂದು ಶೀರ್ಷಿಕೆ ಇಡಲಾಗಿದೆ. ಹಾಗಾಗಿ ಇದು ಇಂಗ್ಲೀಷ್ ‘The’ ಅಲ್ಲ. ಕನ್ನಡದ ‘ದಿ’ ಎಂದರು.
ಈ ಚಿತ್ರದ ಶೇಕಡ 80% ರಷ್ಟು ಭಾಗದ ಚಿತ್ರೀಕರಣ ಕಾಡಿನಲ್ಲೇ ನಡೆಯುತ್ತದೆಯಂತೆ. ‘ದೇವರಾಯನ ದುರ್ಗ, ದೇವರಮನೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಚಿತ್ರೀಕರಣವಾದ ಸ್ಥಳಗಳ ಹೆಸರಿನಲ್ಲೂ ದ ಅಕ್ಷರವಿದೆ. ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದೇನೆ ಜೊತೆಗೆ ನಾಯಕನಾಗೂ ನಟಿಸಿದ್ದೇನೆ. ಚಿತ್ರತಂಡದ ಎಲ್ಲರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇದೇ ಮೇ.16 ರಂದು ತೆರೆ ಕಾಣಲಿದೆ’ ಎಂದರು.
ಇದನ್ನೂ ಓದಿ:- ತಮಿಳುನಾಡು| ವೇದಿಕೆ ಮೇಲೆಯೇ ಕುಸಿದು ಬಿದ್ದ ತಮಿಳು ನಟ ವಿಶಾಲ್
ನಾಯಕಿ ದಿಶಾ ರಮೇಶ್ ಮಾತನಾಡಿ, ‘ನನಗೆ ವಿನಯ್ ಅವರು ಕಥೆ ಹೇಳಿದಾಗ ಕಥೆ ಕೇಳಿ ಬಹಳ ಇಷ್ಟವಾಯಿತು. ನಂತರ ಟೀಸರ್ ನೋಡಿದ ಮೇಲಂತೂ ಅವರು ಹೇಳಿದಕ್ಕಿಂತ ಇನ್ನೂ ಚೆನ್ನಾಗಿ ಮೂಡಿ ಬಂದಿತ್ತು. ಒಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ’ ಎಂದರು.
‘ದಿ’ ಚಿತ್ರದಲ್ಲಿ ಹರಿಣಿ ಶ್ರೀಕಾಂತ್, ನಾಗೇಂದ್ರ ಅರಸ್, ಡಾಲಾ ಶರಣ್, ಕಲಾರತಿ ಮಹಾದೇವ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಲೆನ್ ಭರತ್ ಛಾಯಾಗ್ರಹಣ, ಯು.ಎಂ. ಸ್ಟೀವನ್ ಸತೀಶ್ ಸಂಗೀತವಿದೆ.
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…