Categories: ಮನರಂಜನೆ

ದಿ’ ಎಂಬ ಹೆಸರಿಡಲು ಆ ಮೂರು ಕಾರಣಗಳು …

ಕನ್ನಡದಲ್ಲಿ ‘ದಿ’ ಎನ್ನುವ ಹೆಸರೊಂದು ಸದ್ದಿಲ್ಲದೆ ತಯಾರಾಗಿ ಬಿಡುಗಡೆಯಾಗಿದೆ. ಚಿತ್ರ ಮೇ.16ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಟ ಮಂಡ್ಯ ರಮೇಶ್ ‘ದಿ’ ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿ ‌ಪ್ರದರ್ಶನ ಕಾಣಲಿ ಎಂದು ಹಾರೈಸಿದರು.

ಈ ಚಿತ್ರಕ್ಕೆ ‘ದಿ’ ಎಂದು ಹೆಸರಿಡಲು ಮೂರು ಕಾಣಗಳಿವೆಯಂತೆ. ಈ ಕುರಿತು ಮಾತನಾಡುವ ನಿರ್ದೇಶಕ ಕಂ ನಾಯಕ ವಿನಯ್‍ ವಾಸುದೇವ್‍, ‘ಚಿತ್ರಕ್ಕೆ ‘ದಿ’ ಎಂದು ಹೆಸರಿಡಲು ಮೂರು ಜನ ಮುಖ್ಯ ಕಾರಣ. ಒಂದು ನಟ ಸುದೀಪ್. ಇನ್ನೊಬ್ಬರು ನನ್ನ ಗುರುಗಳು. ನಾನು ಸುದೀಪ್ ಅವರ ಅಭಿಮಾನಿ ಹಾಗೂ ನಮ್ಮ ಗುರುಗಳ ಹೆಸರಿನಲ್ಲೂ ದಿ ಅಕ್ಷರವಿದೆ. ಚಿತ್ರದಲ್ಲೂ ನಾಯಕನ ಹೆಸರು ದೀಪು. ನಮ್ಮ ‘ದಿ’ ಚಿತ್ರದ ನಾಯಕಿ ಹೆಸರು ದಿಶಾ ರಮೇಶ್. ಈ ಎಲ್ಲಾ ಕಾರಣಗಳಿಂದ ನಮ್ಮ ಚಿತ್ರಕ್ಕೆ ‘ದಿ’ ಎಂದು ಶೀರ್ಷಿಕೆ ಇಡಲಾಗಿದೆ‌. ಹಾಗಾಗಿ ಇದು ಇಂಗ್ಲೀಷ್ ‘The’ ಅಲ್ಲ‌. ಕನ್ನಡದ ‘ದಿ’ ಎಂದರು.

ಈ ಚಿತ್ರದ ಶೇಕಡ 80% ರಷ್ಟು ಭಾಗದ ಚಿತ್ರೀಕರಣ ಕಾಡಿನಲ್ಲೇ ನಡೆಯುತ್ತದೆಯಂತೆ. ‘ದೇವರಾಯನ ದುರ್ಗ, ದೇವರಮನೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ‌. ಚಿತ್ರೀಕರಣವಾದ ಸ್ಥಳಗಳ ಹೆಸರಿನಲ್ಲೂ ದ ಅಕ್ಷರವಿದೆ. ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದೇನೆ ಜೊತೆಗೆ ನಾಯಕನಾಗೂ ನಟಿಸಿದ್ದೇನೆ. ಚಿತ್ರತಂಡದ ಎಲ್ಲರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇದೇ ಮೇ.16 ರಂದು ತೆರೆ ಕಾಣಲಿದೆ’ ಎಂದರು.

ಇದನ್ನೂ ಓದಿ:- ತಮಿಳುನಾಡು| ವೇದಿಕೆ ಮೇಲೆಯೇ ಕುಸಿದು ಬಿದ್ದ ತಮಿಳು ನಟ ವಿಶಾಲ್‌

ನಾಯಕಿ ದಿಶಾ ರಮೇಶ್‍ ಮಾತನಾಡಿ, ‘ನನಗೆ ವಿನಯ್ ಅವರು ಕಥೆ ಹೇಳಿದಾಗ ಕಥೆ ಕೇಳಿ ಬಹಳ ಇಷ್ಟವಾಯಿತು. ನಂತರ ಟೀಸರ್ ನೋಡಿದ ಮೇಲಂತೂ ಅವರು ಹೇಳಿದಕ್ಕಿಂತ ಇನ್ನೂ ಚೆನ್ನಾಗಿ ಮೂಡಿ ಬಂದಿತ್ತು. ಒಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ’ ಎಂದರು.

‘ದಿ’ ಚಿತ್ರದಲ್ಲಿ ಹರಿಣಿ ಶ್ರೀಕಾಂತ್, ನಾಗೇಂದ್ರ ಅರಸ್, ಡಾಲಾ ಶರಣ್, ಕಲಾರತಿ ಮಹಾದೇವ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಲೆನ್‍ ಭರತ್‍ ಛಾಯಾಗ್ರಹಣ, ಯು.ಎಂ. ಸ್ಟೀವನ್ ಸತೀಶ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

4 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

4 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

5 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

6 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

6 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

6 hours ago