ಮನರಂಜನೆ

‘ವೀಡಿಯೋ’ ಜೊತೆಗೆ ಬಂದ ದೀಕ್ಷಿತ್‍ ಶೆಟ್ಟಿ; ‘ಬ್ಲಿಂಕ್‍’ ತಂಡದ ಹೊಸ ಪ್ರಯತ್ನ

‘ಬ್ಲಿಂಕ್’ ಯಶಸ್ಸಿನ ನಂತರ ಮತ್ತೆ ಒಂದಾದ ದೀಕ್ಷಿತ್ ಶೆಟ್ಟಿ ಹಾಗೂ ಶ್ರೀನಿಧಿ ಬೆಂಗಳೂರು ಇದೀಗ ‘ವಿಡಿಯೋ’ ಎಂಬ ಚಿತ್ರದ ಮೂಲಕ ಮತ್ತೆ ಒಂದಾಗಿದ್ದಾರೆ. ಈ ಚಿತ್ರದ ಮೂಲಕ ದೀಕ್ಷಿತ್ ಶೆಟ್ಟಿ ತಮ್ಮ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಧೀ ಸಿನಿಮಾಸ್ ಹೆಸರಿನ ಈ ಸಂಸ್ಥೆಯ ಮೊದಲ ಚಿತ್ರವಾಗಿ ‘ವೀಡಿಯೋ’ ಬರಲಿದೆ.

ಈ ಚಿತ್ರವು Found Footage Genre ಚಿತ್ರವಾಗಿದ್ದು, Vlog ಮತ್ತು Documentary ಶೈಲಿಯದ್ದಾಗಿದೆ. ಈಗಾಗಲೇ ಶೇ. 80ರಷ್ಟು ಭಾಗದ ಚಿತ್ರೀಕರಣ ಮುಗಿಸಿದ್ದು, ಆದಷ್ಟು ಬೇಗ ಚಿತ್ರ ಬಿಡುಗಡೆಯಾಗಲಿದೆ. ಭಾರತದಲ್ಲಿ ಈ ತರಹದ ಪ್ರಯತ್ನಗಳಾಗಿರುವುದು ಕಡಿಮೆಯೇ. ಕನ್ನಡದಲ್ಲೂ ‘6-5=2’ ನಂತರ ಯಾರೂ ಈ ತರಹದ್ದೊಂದು ಪ್ರಯತ್ನ ಮಾಡಿರಲಿಲ್ಲ.

ಈ ಚಿತ್ರಕ್ಕೆ ಐದಾರು ಕ್ಯಾಮೆರಾಗಳನ್ನು ಸತತವಾಗಿ ಬಳಸಿ ಚಿತ್ರೀಕರಣ ಮಾಡಲಾಗುತ್ತಿದೆ. ಇದೊಂದು ವ್ಲಾಗರ್‍ನ ಕಥೆಯಾಗಿದ್ದು, ಒಂದು ಹಾಂಟೆಡ್‍ ಸ್ಥಳಕ್ಕೆ ವ್ಲಾಗರ್ ಹೋದಾಗ, ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರ ಹೇಳುತ್ತದಂತೆ.

ಈ ಕುರಿತು ಮಾತನಾಡುವ ಶ್ರೀನಿಧಿ, ‘ನನ್ನ ಮೊದಲ ಚಿತ್ರ ‘ಬ್ಲಿಂಕ್‍’ ಚಿತ್ರ ಜನರ ಮೆಚ್ಚುಗೆ ಪಡೆಯಿತು. ಆದರೆ, ಅದಕ್ಕೆ ಒಂದು ಸೀಮಿತವಾದ ಪ್ರೇಕ್ಷಕವರ್ಗ ಇತ್ತು. ಈ ಚಿತ್ರವನ್ನು ಎಲ್ಲರಿಗೂ ತಲುಪಿಸುವ ನಿಟ್ಟಿನಲ್ಲಿ, ಅದರಲ್ಲೂ ಯುವಕರು ಚಿತ್ರಮಂದಿರಗಳಿಗೆ ಬಂದು ಚಿತ್ರ ನೋಡಬೇಕೆಂದು ಒಂದು ಬೇರೆ ಶೈಲಿಯ ಕಥೆ ಮಾಡಿಕೊಂಡಿದ್ದೇನೆ’ ಎಂದು ಹೇಳುತ್ತಾರೆ.

ಕಳೆದ 11 ವರ್ಷಗಳಿಂದ ನಟನಾಗಿ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲೂ ಅಭಿನಯಿಸುತ್ತಿರುವ ದೀಕ್ಷಿತ್ ಶೆಟ್ಟಿ ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ನಿರ್ಮಾಪಕರನ್ನು ಹೊರತುಪಡಿಸಿದರೆ ‘ಬ್ಲಿಂಕ್‍’ ಚಿತ್ರಕ್ಕೆ ಕೆಲಸ ಮಾಡಿದ ತಂಡವೇ ಇಲ್ಲೂ ಕೆಲಸ ಮಾಡಲಿದೆಯಂತೆ.

ಆ ಚಿತ್ರದಲ್ಲಿ ನಾಯಕನಾಗಿದ್ದ ದೀಕ್ಷಿತ್‍ ಶೆಟ್ಟಿ, ಇಲ್ಲೂ ನಾಯಕನಾಗಿದ್ದು, ಜೊತೆಗೆ ಐವರು ಹೊಸ ನಟ-ನಟಿಯರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಅವಿನಾಶ್‍ ಶಾಸ್ತ್ರಿ ಛಾಯಾಗ್ರಹಣ ಮತ್ತು ಪ್ರಸನ್ನ ಕುಮಾರ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

4 mins ago

ಮಳವಳ್ಳಿ: ಸಿಡಿ ಹಬ್ಬಕ್ಕೆ ಸಿಂಗಾರಗೊಂಡ ಪಟ್ಣಣ

ಮಾಗನೂರು ಶಿವಕುಮಾರ್ ಇಂದು,ನಾಳೆ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವ  ಮಳವಳ್ಳಿ: ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ಪಟ್ಟಣದ ಗ್ರಾಮ ದೇವತೆಗಳಾದ ದಂಡಿನ…

7 mins ago

ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ದುಪ್ಪಟ್ಟು ಹಣ ವಸೂಲಿ..!

ಪ್ರವಾಸಿಗರ ಅಸಮಾಧಾನ; ವಿಡಿಯೋ ವೈರಲ್ ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ಪ್ರವಾಸಿಗರಿಂದ ದುಪ್ಪಟ್ಟು…

14 mins ago

ವಿಶ್ವದರ್ಜೆ ಫುಟ್‌ಪಾತ್ ನಿರ್ಮಾಣಕ್ಕೆ ಪ್ಲಾನ್!

ಕೆ.ಬಿ.ರಮೇಶನಾಯಕ ಮೊದಲ ಹಂತದಲ್ಲಿ ಮೈಸೂರಿನ ಪ್ರಮುಖ ಮೂರು ರಸ್ತೆಗಳ ಗುರುತು ಮೈಸೂರು: ದೇಶದ ಪ್ರಮುಖ ಸ್ಮಾರ್ಟ್ ಸಿಟಿಗಳಲ್ಲಿ ನಿರ್ಮಾಣಗೊಂಡಿರುವ ವಿಶ್ವದರ್ಜೆಯ…

18 mins ago

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

10 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

10 hours ago