ಮನರಂಜನೆ

‘ವೀಡಿಯೋ’ ಜೊತೆಗೆ ಬಂದ ದೀಕ್ಷಿತ್‍ ಶೆಟ್ಟಿ; ‘ಬ್ಲಿಂಕ್‍’ ತಂಡದ ಹೊಸ ಪ್ರಯತ್ನ

‘ಬ್ಲಿಂಕ್’ ಯಶಸ್ಸಿನ ನಂತರ ಮತ್ತೆ ಒಂದಾದ ದೀಕ್ಷಿತ್ ಶೆಟ್ಟಿ ಹಾಗೂ ಶ್ರೀನಿಧಿ ಬೆಂಗಳೂರು ಇದೀಗ ‘ವಿಡಿಯೋ’ ಎಂಬ ಚಿತ್ರದ ಮೂಲಕ ಮತ್ತೆ ಒಂದಾಗಿದ್ದಾರೆ. ಈ ಚಿತ್ರದ ಮೂಲಕ ದೀಕ್ಷಿತ್ ಶೆಟ್ಟಿ ತಮ್ಮ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಧೀ ಸಿನಿಮಾಸ್ ಹೆಸರಿನ ಈ ಸಂಸ್ಥೆಯ ಮೊದಲ ಚಿತ್ರವಾಗಿ ‘ವೀಡಿಯೋ’ ಬರಲಿದೆ.

ಈ ಚಿತ್ರವು Found Footage Genre ಚಿತ್ರವಾಗಿದ್ದು, Vlog ಮತ್ತು Documentary ಶೈಲಿಯದ್ದಾಗಿದೆ. ಈಗಾಗಲೇ ಶೇ. 80ರಷ್ಟು ಭಾಗದ ಚಿತ್ರೀಕರಣ ಮುಗಿಸಿದ್ದು, ಆದಷ್ಟು ಬೇಗ ಚಿತ್ರ ಬಿಡುಗಡೆಯಾಗಲಿದೆ. ಭಾರತದಲ್ಲಿ ಈ ತರಹದ ಪ್ರಯತ್ನಗಳಾಗಿರುವುದು ಕಡಿಮೆಯೇ. ಕನ್ನಡದಲ್ಲೂ ‘6-5=2’ ನಂತರ ಯಾರೂ ಈ ತರಹದ್ದೊಂದು ಪ್ರಯತ್ನ ಮಾಡಿರಲಿಲ್ಲ.

ಈ ಚಿತ್ರಕ್ಕೆ ಐದಾರು ಕ್ಯಾಮೆರಾಗಳನ್ನು ಸತತವಾಗಿ ಬಳಸಿ ಚಿತ್ರೀಕರಣ ಮಾಡಲಾಗುತ್ತಿದೆ. ಇದೊಂದು ವ್ಲಾಗರ್‍ನ ಕಥೆಯಾಗಿದ್ದು, ಒಂದು ಹಾಂಟೆಡ್‍ ಸ್ಥಳಕ್ಕೆ ವ್ಲಾಗರ್ ಹೋದಾಗ, ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರ ಹೇಳುತ್ತದಂತೆ.

ಈ ಕುರಿತು ಮಾತನಾಡುವ ಶ್ರೀನಿಧಿ, ‘ನನ್ನ ಮೊದಲ ಚಿತ್ರ ‘ಬ್ಲಿಂಕ್‍’ ಚಿತ್ರ ಜನರ ಮೆಚ್ಚುಗೆ ಪಡೆಯಿತು. ಆದರೆ, ಅದಕ್ಕೆ ಒಂದು ಸೀಮಿತವಾದ ಪ್ರೇಕ್ಷಕವರ್ಗ ಇತ್ತು. ಈ ಚಿತ್ರವನ್ನು ಎಲ್ಲರಿಗೂ ತಲುಪಿಸುವ ನಿಟ್ಟಿನಲ್ಲಿ, ಅದರಲ್ಲೂ ಯುವಕರು ಚಿತ್ರಮಂದಿರಗಳಿಗೆ ಬಂದು ಚಿತ್ರ ನೋಡಬೇಕೆಂದು ಒಂದು ಬೇರೆ ಶೈಲಿಯ ಕಥೆ ಮಾಡಿಕೊಂಡಿದ್ದೇನೆ’ ಎಂದು ಹೇಳುತ್ತಾರೆ.

ಕಳೆದ 11 ವರ್ಷಗಳಿಂದ ನಟನಾಗಿ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲೂ ಅಭಿನಯಿಸುತ್ತಿರುವ ದೀಕ್ಷಿತ್ ಶೆಟ್ಟಿ ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ನಿರ್ಮಾಪಕರನ್ನು ಹೊರತುಪಡಿಸಿದರೆ ‘ಬ್ಲಿಂಕ್‍’ ಚಿತ್ರಕ್ಕೆ ಕೆಲಸ ಮಾಡಿದ ತಂಡವೇ ಇಲ್ಲೂ ಕೆಲಸ ಮಾಡಲಿದೆಯಂತೆ.

ಆ ಚಿತ್ರದಲ್ಲಿ ನಾಯಕನಾಗಿದ್ದ ದೀಕ್ಷಿತ್‍ ಶೆಟ್ಟಿ, ಇಲ್ಲೂ ನಾಯಕನಾಗಿದ್ದು, ಜೊತೆಗೆ ಐವರು ಹೊಸ ನಟ-ನಟಿಯರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಅವಿನಾಶ್‍ ಶಾಸ್ತ್ರಿ ಛಾಯಾಗ್ರಹಣ ಮತ್ತು ಪ್ರಸನ್ನ ಕುಮಾರ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

12 mins ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

18 mins ago

ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರಿಂದ ಮಹಾಮೇಳಾವ್:‌ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಮಹಾಮೇಳಾವ್‌ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…

29 mins ago

ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರು

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ…

1 hour ago

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…

1 hour ago

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

2 hours ago