ಮನರಂಜನೆ

‘ವೀಡಿಯೋ’ ಜೊತೆಗೆ ಬಂದ ದೀಕ್ಷಿತ್‍ ಶೆಟ್ಟಿ; ‘ಬ್ಲಿಂಕ್‍’ ತಂಡದ ಹೊಸ ಪ್ರಯತ್ನ

‘ಬ್ಲಿಂಕ್’ ಯಶಸ್ಸಿನ ನಂತರ ಮತ್ತೆ ಒಂದಾದ ದೀಕ್ಷಿತ್ ಶೆಟ್ಟಿ ಹಾಗೂ ಶ್ರೀನಿಧಿ ಬೆಂಗಳೂರು ಇದೀಗ ‘ವಿಡಿಯೋ’ ಎಂಬ ಚಿತ್ರದ ಮೂಲಕ ಮತ್ತೆ ಒಂದಾಗಿದ್ದಾರೆ. ಈ ಚಿತ್ರದ ಮೂಲಕ ದೀಕ್ಷಿತ್ ಶೆಟ್ಟಿ ತಮ್ಮ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಧೀ ಸಿನಿಮಾಸ್ ಹೆಸರಿನ ಈ ಸಂಸ್ಥೆಯ ಮೊದಲ ಚಿತ್ರವಾಗಿ ‘ವೀಡಿಯೋ’ ಬರಲಿದೆ.

ಈ ಚಿತ್ರವು Found Footage Genre ಚಿತ್ರವಾಗಿದ್ದು, Vlog ಮತ್ತು Documentary ಶೈಲಿಯದ್ದಾಗಿದೆ. ಈಗಾಗಲೇ ಶೇ. 80ರಷ್ಟು ಭಾಗದ ಚಿತ್ರೀಕರಣ ಮುಗಿಸಿದ್ದು, ಆದಷ್ಟು ಬೇಗ ಚಿತ್ರ ಬಿಡುಗಡೆಯಾಗಲಿದೆ. ಭಾರತದಲ್ಲಿ ಈ ತರಹದ ಪ್ರಯತ್ನಗಳಾಗಿರುವುದು ಕಡಿಮೆಯೇ. ಕನ್ನಡದಲ್ಲೂ ‘6-5=2’ ನಂತರ ಯಾರೂ ಈ ತರಹದ್ದೊಂದು ಪ್ರಯತ್ನ ಮಾಡಿರಲಿಲ್ಲ.

ಈ ಚಿತ್ರಕ್ಕೆ ಐದಾರು ಕ್ಯಾಮೆರಾಗಳನ್ನು ಸತತವಾಗಿ ಬಳಸಿ ಚಿತ್ರೀಕರಣ ಮಾಡಲಾಗುತ್ತಿದೆ. ಇದೊಂದು ವ್ಲಾಗರ್‍ನ ಕಥೆಯಾಗಿದ್ದು, ಒಂದು ಹಾಂಟೆಡ್‍ ಸ್ಥಳಕ್ಕೆ ವ್ಲಾಗರ್ ಹೋದಾಗ, ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರ ಹೇಳುತ್ತದಂತೆ.

ಈ ಕುರಿತು ಮಾತನಾಡುವ ಶ್ರೀನಿಧಿ, ‘ನನ್ನ ಮೊದಲ ಚಿತ್ರ ‘ಬ್ಲಿಂಕ್‍’ ಚಿತ್ರ ಜನರ ಮೆಚ್ಚುಗೆ ಪಡೆಯಿತು. ಆದರೆ, ಅದಕ್ಕೆ ಒಂದು ಸೀಮಿತವಾದ ಪ್ರೇಕ್ಷಕವರ್ಗ ಇತ್ತು. ಈ ಚಿತ್ರವನ್ನು ಎಲ್ಲರಿಗೂ ತಲುಪಿಸುವ ನಿಟ್ಟಿನಲ್ಲಿ, ಅದರಲ್ಲೂ ಯುವಕರು ಚಿತ್ರಮಂದಿರಗಳಿಗೆ ಬಂದು ಚಿತ್ರ ನೋಡಬೇಕೆಂದು ಒಂದು ಬೇರೆ ಶೈಲಿಯ ಕಥೆ ಮಾಡಿಕೊಂಡಿದ್ದೇನೆ’ ಎಂದು ಹೇಳುತ್ತಾರೆ.

ಕಳೆದ 11 ವರ್ಷಗಳಿಂದ ನಟನಾಗಿ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲೂ ಅಭಿನಯಿಸುತ್ತಿರುವ ದೀಕ್ಷಿತ್ ಶೆಟ್ಟಿ ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ನಿರ್ಮಾಪಕರನ್ನು ಹೊರತುಪಡಿಸಿದರೆ ‘ಬ್ಲಿಂಕ್‍’ ಚಿತ್ರಕ್ಕೆ ಕೆಲಸ ಮಾಡಿದ ತಂಡವೇ ಇಲ್ಲೂ ಕೆಲಸ ಮಾಡಲಿದೆಯಂತೆ.

ಆ ಚಿತ್ರದಲ್ಲಿ ನಾಯಕನಾಗಿದ್ದ ದೀಕ್ಷಿತ್‍ ಶೆಟ್ಟಿ, ಇಲ್ಲೂ ನಾಯಕನಾಗಿದ್ದು, ಜೊತೆಗೆ ಐವರು ಹೊಸ ನಟ-ನಟಿಯರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಅವಿನಾಶ್‍ ಶಾಸ್ತ್ರಿ ಛಾಯಾಗ್ರಹಣ ಮತ್ತು ಪ್ರಸನ್ನ ಕುಮಾರ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

5 mins ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

6 mins ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

11 mins ago

ಓದುಗರ ಪತ್ರ: ನಕಲಿ ಔಷಧ ಜಾಲ ಬೇರುಸಹಿತ ಕಿತ್ತೊಗೆಯಲಿ

ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…

14 mins ago

ಕೊಡಗಿನಲ್ಲಿ ಮತ್ತೆ ಭಾರೀ ಮಳೆ: ತ್ರಿವೇಣಿ ಸಂಗಮ ಜಲಾವೃತ

ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…

17 mins ago

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

5 hours ago