ಮನರಂಜನೆ

‘ವೀಡಿಯೋ’ ಜೊತೆಗೆ ಬಂದ ದೀಕ್ಷಿತ್‍ ಶೆಟ್ಟಿ; ‘ಬ್ಲಿಂಕ್‍’ ತಂಡದ ಹೊಸ ಪ್ರಯತ್ನ

‘ಬ್ಲಿಂಕ್’ ಯಶಸ್ಸಿನ ನಂತರ ಮತ್ತೆ ಒಂದಾದ ದೀಕ್ಷಿತ್ ಶೆಟ್ಟಿ ಹಾಗೂ ಶ್ರೀನಿಧಿ ಬೆಂಗಳೂರು ಇದೀಗ ‘ವಿಡಿಯೋ’ ಎಂಬ ಚಿತ್ರದ ಮೂಲಕ ಮತ್ತೆ ಒಂದಾಗಿದ್ದಾರೆ. ಈ ಚಿತ್ರದ ಮೂಲಕ ದೀಕ್ಷಿತ್ ಶೆಟ್ಟಿ ತಮ್ಮ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಧೀ ಸಿನಿಮಾಸ್ ಹೆಸರಿನ ಈ ಸಂಸ್ಥೆಯ ಮೊದಲ ಚಿತ್ರವಾಗಿ ‘ವೀಡಿಯೋ’ ಬರಲಿದೆ.

ಈ ಚಿತ್ರವು Found Footage Genre ಚಿತ್ರವಾಗಿದ್ದು, Vlog ಮತ್ತು Documentary ಶೈಲಿಯದ್ದಾಗಿದೆ. ಈಗಾಗಲೇ ಶೇ. 80ರಷ್ಟು ಭಾಗದ ಚಿತ್ರೀಕರಣ ಮುಗಿಸಿದ್ದು, ಆದಷ್ಟು ಬೇಗ ಚಿತ್ರ ಬಿಡುಗಡೆಯಾಗಲಿದೆ. ಭಾರತದಲ್ಲಿ ಈ ತರಹದ ಪ್ರಯತ್ನಗಳಾಗಿರುವುದು ಕಡಿಮೆಯೇ. ಕನ್ನಡದಲ್ಲೂ ‘6-5=2’ ನಂತರ ಯಾರೂ ಈ ತರಹದ್ದೊಂದು ಪ್ರಯತ್ನ ಮಾಡಿರಲಿಲ್ಲ.

ಈ ಚಿತ್ರಕ್ಕೆ ಐದಾರು ಕ್ಯಾಮೆರಾಗಳನ್ನು ಸತತವಾಗಿ ಬಳಸಿ ಚಿತ್ರೀಕರಣ ಮಾಡಲಾಗುತ್ತಿದೆ. ಇದೊಂದು ವ್ಲಾಗರ್‍ನ ಕಥೆಯಾಗಿದ್ದು, ಒಂದು ಹಾಂಟೆಡ್‍ ಸ್ಥಳಕ್ಕೆ ವ್ಲಾಗರ್ ಹೋದಾಗ, ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರ ಹೇಳುತ್ತದಂತೆ.

ಈ ಕುರಿತು ಮಾತನಾಡುವ ಶ್ರೀನಿಧಿ, ‘ನನ್ನ ಮೊದಲ ಚಿತ್ರ ‘ಬ್ಲಿಂಕ್‍’ ಚಿತ್ರ ಜನರ ಮೆಚ್ಚುಗೆ ಪಡೆಯಿತು. ಆದರೆ, ಅದಕ್ಕೆ ಒಂದು ಸೀಮಿತವಾದ ಪ್ರೇಕ್ಷಕವರ್ಗ ಇತ್ತು. ಈ ಚಿತ್ರವನ್ನು ಎಲ್ಲರಿಗೂ ತಲುಪಿಸುವ ನಿಟ್ಟಿನಲ್ಲಿ, ಅದರಲ್ಲೂ ಯುವಕರು ಚಿತ್ರಮಂದಿರಗಳಿಗೆ ಬಂದು ಚಿತ್ರ ನೋಡಬೇಕೆಂದು ಒಂದು ಬೇರೆ ಶೈಲಿಯ ಕಥೆ ಮಾಡಿಕೊಂಡಿದ್ದೇನೆ’ ಎಂದು ಹೇಳುತ್ತಾರೆ.

ಕಳೆದ 11 ವರ್ಷಗಳಿಂದ ನಟನಾಗಿ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲೂ ಅಭಿನಯಿಸುತ್ತಿರುವ ದೀಕ್ಷಿತ್ ಶೆಟ್ಟಿ ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ನಿರ್ಮಾಪಕರನ್ನು ಹೊರತುಪಡಿಸಿದರೆ ‘ಬ್ಲಿಂಕ್‍’ ಚಿತ್ರಕ್ಕೆ ಕೆಲಸ ಮಾಡಿದ ತಂಡವೇ ಇಲ್ಲೂ ಕೆಲಸ ಮಾಡಲಿದೆಯಂತೆ.

ಆ ಚಿತ್ರದಲ್ಲಿ ನಾಯಕನಾಗಿದ್ದ ದೀಕ್ಷಿತ್‍ ಶೆಟ್ಟಿ, ಇಲ್ಲೂ ನಾಯಕನಾಗಿದ್ದು, ಜೊತೆಗೆ ಐವರು ಹೊಸ ನಟ-ನಟಿಯರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಅವಿನಾಶ್‍ ಶಾಸ್ತ್ರಿ ಛಾಯಾಗ್ರಹಣ ಮತ್ತು ಪ್ರಸನ್ನ ಕುಮಾರ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

3 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

5 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

7 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

7 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

9 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

9 hours ago