ಮನರಂಜನೆ

‘ವೀಡಿಯೋ’ ಜೊತೆಗೆ ಬಂದ ದೀಕ್ಷಿತ್‍ ಶೆಟ್ಟಿ; ‘ಬ್ಲಿಂಕ್‍’ ತಂಡದ ಹೊಸ ಪ್ರಯತ್ನ

‘ಬ್ಲಿಂಕ್’ ಯಶಸ್ಸಿನ ನಂತರ ಮತ್ತೆ ಒಂದಾದ ದೀಕ್ಷಿತ್ ಶೆಟ್ಟಿ ಹಾಗೂ ಶ್ರೀನಿಧಿ ಬೆಂಗಳೂರು ಇದೀಗ ‘ವಿಡಿಯೋ’ ಎಂಬ ಚಿತ್ರದ ಮೂಲಕ ಮತ್ತೆ ಒಂದಾಗಿದ್ದಾರೆ. ಈ ಚಿತ್ರದ ಮೂಲಕ ದೀಕ್ಷಿತ್ ಶೆಟ್ಟಿ ತಮ್ಮ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಧೀ ಸಿನಿಮಾಸ್ ಹೆಸರಿನ ಈ ಸಂಸ್ಥೆಯ ಮೊದಲ ಚಿತ್ರವಾಗಿ ‘ವೀಡಿಯೋ’ ಬರಲಿದೆ.

ಈ ಚಿತ್ರವು Found Footage Genre ಚಿತ್ರವಾಗಿದ್ದು, Vlog ಮತ್ತು Documentary ಶೈಲಿಯದ್ದಾಗಿದೆ. ಈಗಾಗಲೇ ಶೇ. 80ರಷ್ಟು ಭಾಗದ ಚಿತ್ರೀಕರಣ ಮುಗಿಸಿದ್ದು, ಆದಷ್ಟು ಬೇಗ ಚಿತ್ರ ಬಿಡುಗಡೆಯಾಗಲಿದೆ. ಭಾರತದಲ್ಲಿ ಈ ತರಹದ ಪ್ರಯತ್ನಗಳಾಗಿರುವುದು ಕಡಿಮೆಯೇ. ಕನ್ನಡದಲ್ಲೂ ‘6-5=2’ ನಂತರ ಯಾರೂ ಈ ತರಹದ್ದೊಂದು ಪ್ರಯತ್ನ ಮಾಡಿರಲಿಲ್ಲ.

ಈ ಚಿತ್ರಕ್ಕೆ ಐದಾರು ಕ್ಯಾಮೆರಾಗಳನ್ನು ಸತತವಾಗಿ ಬಳಸಿ ಚಿತ್ರೀಕರಣ ಮಾಡಲಾಗುತ್ತಿದೆ. ಇದೊಂದು ವ್ಲಾಗರ್‍ನ ಕಥೆಯಾಗಿದ್ದು, ಒಂದು ಹಾಂಟೆಡ್‍ ಸ್ಥಳಕ್ಕೆ ವ್ಲಾಗರ್ ಹೋದಾಗ, ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರ ಹೇಳುತ್ತದಂತೆ.

ಈ ಕುರಿತು ಮಾತನಾಡುವ ಶ್ರೀನಿಧಿ, ‘ನನ್ನ ಮೊದಲ ಚಿತ್ರ ‘ಬ್ಲಿಂಕ್‍’ ಚಿತ್ರ ಜನರ ಮೆಚ್ಚುಗೆ ಪಡೆಯಿತು. ಆದರೆ, ಅದಕ್ಕೆ ಒಂದು ಸೀಮಿತವಾದ ಪ್ರೇಕ್ಷಕವರ್ಗ ಇತ್ತು. ಈ ಚಿತ್ರವನ್ನು ಎಲ್ಲರಿಗೂ ತಲುಪಿಸುವ ನಿಟ್ಟಿನಲ್ಲಿ, ಅದರಲ್ಲೂ ಯುವಕರು ಚಿತ್ರಮಂದಿರಗಳಿಗೆ ಬಂದು ಚಿತ್ರ ನೋಡಬೇಕೆಂದು ಒಂದು ಬೇರೆ ಶೈಲಿಯ ಕಥೆ ಮಾಡಿಕೊಂಡಿದ್ದೇನೆ’ ಎಂದು ಹೇಳುತ್ತಾರೆ.

ಕಳೆದ 11 ವರ್ಷಗಳಿಂದ ನಟನಾಗಿ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲೂ ಅಭಿನಯಿಸುತ್ತಿರುವ ದೀಕ್ಷಿತ್ ಶೆಟ್ಟಿ ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ನಿರ್ಮಾಪಕರನ್ನು ಹೊರತುಪಡಿಸಿದರೆ ‘ಬ್ಲಿಂಕ್‍’ ಚಿತ್ರಕ್ಕೆ ಕೆಲಸ ಮಾಡಿದ ತಂಡವೇ ಇಲ್ಲೂ ಕೆಲಸ ಮಾಡಲಿದೆಯಂತೆ.

ಆ ಚಿತ್ರದಲ್ಲಿ ನಾಯಕನಾಗಿದ್ದ ದೀಕ್ಷಿತ್‍ ಶೆಟ್ಟಿ, ಇಲ್ಲೂ ನಾಯಕನಾಗಿದ್ದು, ಜೊತೆಗೆ ಐವರು ಹೊಸ ನಟ-ನಟಿಯರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಅವಿನಾಶ್‍ ಶಾಸ್ತ್ರಿ ಛಾಯಾಗ್ರಹಣ ಮತ್ತು ಪ್ರಸನ್ನ ಕುಮಾರ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

1 hour ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

2 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

3 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

4 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

4 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

5 hours ago