kannada new movie video
‘ಬ್ಲಿಂಕ್’ ಯಶಸ್ಸಿನ ನಂತರ ಮತ್ತೆ ಒಂದಾದ ದೀಕ್ಷಿತ್ ಶೆಟ್ಟಿ ಹಾಗೂ ಶ್ರೀನಿಧಿ ಬೆಂಗಳೂರು ಇದೀಗ ‘ವಿಡಿಯೋ’ ಎಂಬ ಚಿತ್ರದ ಮೂಲಕ ಮತ್ತೆ ಒಂದಾಗಿದ್ದಾರೆ. ಈ ಚಿತ್ರದ ಮೂಲಕ ದೀಕ್ಷಿತ್ ಶೆಟ್ಟಿ ತಮ್ಮ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಧೀ ಸಿನಿಮಾಸ್ ಹೆಸರಿನ ಈ ಸಂಸ್ಥೆಯ ಮೊದಲ ಚಿತ್ರವಾಗಿ ‘ವೀಡಿಯೋ’ ಬರಲಿದೆ.
ಈ ಚಿತ್ರವು Found Footage Genre ಚಿತ್ರವಾಗಿದ್ದು, Vlog ಮತ್ತು Documentary ಶೈಲಿಯದ್ದಾಗಿದೆ. ಈಗಾಗಲೇ ಶೇ. 80ರಷ್ಟು ಭಾಗದ ಚಿತ್ರೀಕರಣ ಮುಗಿಸಿದ್ದು, ಆದಷ್ಟು ಬೇಗ ಚಿತ್ರ ಬಿಡುಗಡೆಯಾಗಲಿದೆ. ಭಾರತದಲ್ಲಿ ಈ ತರಹದ ಪ್ರಯತ್ನಗಳಾಗಿರುವುದು ಕಡಿಮೆಯೇ. ಕನ್ನಡದಲ್ಲೂ ‘6-5=2’ ನಂತರ ಯಾರೂ ಈ ತರಹದ್ದೊಂದು ಪ್ರಯತ್ನ ಮಾಡಿರಲಿಲ್ಲ.
ಈ ಚಿತ್ರಕ್ಕೆ ಐದಾರು ಕ್ಯಾಮೆರಾಗಳನ್ನು ಸತತವಾಗಿ ಬಳಸಿ ಚಿತ್ರೀಕರಣ ಮಾಡಲಾಗುತ್ತಿದೆ. ಇದೊಂದು ವ್ಲಾಗರ್ನ ಕಥೆಯಾಗಿದ್ದು, ಒಂದು ಹಾಂಟೆಡ್ ಸ್ಥಳಕ್ಕೆ ವ್ಲಾಗರ್ ಹೋದಾಗ, ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರ ಹೇಳುತ್ತದಂತೆ.
ಈ ಕುರಿತು ಮಾತನಾಡುವ ಶ್ರೀನಿಧಿ, ‘ನನ್ನ ಮೊದಲ ಚಿತ್ರ ‘ಬ್ಲಿಂಕ್’ ಚಿತ್ರ ಜನರ ಮೆಚ್ಚುಗೆ ಪಡೆಯಿತು. ಆದರೆ, ಅದಕ್ಕೆ ಒಂದು ಸೀಮಿತವಾದ ಪ್ರೇಕ್ಷಕವರ್ಗ ಇತ್ತು. ಈ ಚಿತ್ರವನ್ನು ಎಲ್ಲರಿಗೂ ತಲುಪಿಸುವ ನಿಟ್ಟಿನಲ್ಲಿ, ಅದರಲ್ಲೂ ಯುವಕರು ಚಿತ್ರಮಂದಿರಗಳಿಗೆ ಬಂದು ಚಿತ್ರ ನೋಡಬೇಕೆಂದು ಒಂದು ಬೇರೆ ಶೈಲಿಯ ಕಥೆ ಮಾಡಿಕೊಂಡಿದ್ದೇನೆ’ ಎಂದು ಹೇಳುತ್ತಾರೆ.
ಕಳೆದ 11 ವರ್ಷಗಳಿಂದ ನಟನಾಗಿ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲೂ ಅಭಿನಯಿಸುತ್ತಿರುವ ದೀಕ್ಷಿತ್ ಶೆಟ್ಟಿ ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ನಿರ್ಮಾಪಕರನ್ನು ಹೊರತುಪಡಿಸಿದರೆ ‘ಬ್ಲಿಂಕ್’ ಚಿತ್ರಕ್ಕೆ ಕೆಲಸ ಮಾಡಿದ ತಂಡವೇ ಇಲ್ಲೂ ಕೆಲಸ ಮಾಡಲಿದೆಯಂತೆ.
ಆ ಚಿತ್ರದಲ್ಲಿ ನಾಯಕನಾಗಿದ್ದ ದೀಕ್ಷಿತ್ ಶೆಟ್ಟಿ, ಇಲ್ಲೂ ನಾಯಕನಾಗಿದ್ದು, ಜೊತೆಗೆ ಐವರು ಹೊಸ ನಟ-ನಟಿಯರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಅವಿನಾಶ್ ಶಾಸ್ತ್ರಿ ಛಾಯಾಗ್ರಹಣ ಮತ್ತು ಪ್ರಸನ್ನ ಕುಮಾರ್ ಸಂಗೀತವಿದೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…