ಮನರಂಜನೆ

ಜುಲೈ.11ರಿಂದ ‘ದೂರ ತೀರ ಯಾನ’ ಪ್ರಾರಂಭ

ಕಳೆದ ವರ್ಷ ಪ್ರಾರಂಭವಾಗಿದ್ದ ಮಂಸೋರೆ ನಿರ್ದೇಶನದ ‘ದೂರ ತೀರ ಯಾನ’ ಚಿತ್ರದ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಇದೀಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಜುಲೈ.11ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಚಿತ್ರದ ಬಿಡುಗಡೆ ದಿನಾಂಕ ಘೋಷಿಸುವುದರ ಜೊತೆಗೆ ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಶುರು ಮಾಡಿದೆ ಚಿತ್ರತಂಡ.

ಸಂಗೀತ ನಿರ್ದೇಶಕ ಬಕ್ಕೇಶ್‍ ಮತ್ತು ಈಶ ಸುಚಿ ಹಾಡಿರುವ ‘ದೂರ ತೀರ ಯಾನ…’ ಎಂಬ ಹಾಡನ್ನು MRT ಮ್ಯೂಸಿಕ್‍ ಚಾನಲ್‍ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಸಮಾರಂಭದಲ್ಲಿ ಹಿರಿಯ ನಿರ್ದೇಶಕ ಸುನೀಲ್‍ ಕುಮಾರ್ ದೇಸಾಯಿ, ನಟ ನವೀನ್‍ ಶಂಕರ್ ಮುಂತಾದವರು ಹಾಜರಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಚಿತ್ರದ ಕುರಿತು ಮಾತನಾಡುವ ಮಂಸೋರೆ, ‘ನಾನು ಕುಸಿದಿದ್ದಾಗ ನಿರ್ಮಾಪಕರು ಬಂದು, ‘ಇಲ್ಲಿಗೆ ಎಲ್ಲವೂ ಮುಗಿಯುವುದಿಲ್ಲ. ನಾವು ಮುಂದುವರೆಯುತ್ತಿರಬೇಕು’ ಎಂದರು. ಅಲ್ಲಿಂದ ಈ ಪ್ರಯಾಣ ಶುರುವಾಯಿತು. ಪ್ರಯಾಣ ಮಾಡುವಾಗ ನಾವು ಹಲವು ಹಾಡುಗಳನ್ನು ಕೇಳುತ್ತಿರುತ್ತೇವೆ. ಪ್ರಯಾಣಕ್ಕೆಂದೇ ಒಂದು ಹಾಡು ಬೇಕಿತ್ತು. ಇದು ನನಗಾಗಿ ಮಾಡಿಕೊಂಡ ಹಾಡು. ನನಗೆ ಖುಷಿ ಕೊಟ್ಟರೆ, ಜನರಿಗೂ ಖುಷಿ ಕೊಡುತ್ತದೆ ಎಂದು ನಂಬಿದವನು ನಾನು. ಈ ಹಾಡು ವೈಯಕ್ತಿಕವಾಗಿ ಬಹಳ ಖುಷಿಕೊಟ್ಟಿದೆ. ಸಾಮಾನ್ಯವಾಗಿ ಪ್ರೀ-ಕ್ಲೈಮ್ಯಾಕ್ಸ್ ಡ್ರಾಮಾ ಅಥವಾ ಫೈಟ್‍ ಇರುತ್ತದೆ. ನಮ್ಮ ಚಿತ್ರದಲ್ಲಿ ಈ ಹಾಡು ಬರುತ್ತದೆ’ ಎಂದರು.

ಈ ಚಿತ್ರದ ಮೂಲಕ ನಮ್ಮ ಗುರುತನ್ನು ಹುಡುಕುವ ಪ್ರಯತ್ನ ಮಾಡಲಾಗಿದೆ ಎನ್ನುವ ಮಂಸೋರೆ, ‘ಕನ್ನಡ ಚಿತ್ರರಂಗಕ್ಕೂ ಒಂದು ಬದಲಾವಣೆಯ ಅವಶ್ಯಕತೆ ಇದೆ. ಕನ್ನಡ ಚಿತ್ರರಂಗ ಬೇರೆ ರೀತಿಯಲ್ಲಿ ಪುನಃ ತನ್ನ ಗುರುತನ್ನು ಸ್ಥಾಪಿಸಬೇಕು, ತನ್ನ ಸೊಗಡನ್ನು ತೋರಿಸಬೇಕು. ಆ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದೇವೆ. ನಮ್ಮ ಚಿತ್ರದ ಹಾಡುಗಳಲ್ಲಿ ಒಂದೇ ಒಂದು ಇಂಗ್ಲಿಷ್ ಪದ ಬಳಸದೇ ಹಾಡುಗಳನ್ನು ಮಾಡಿದ್ದೇವೆ’ ಎಂದರು.

ಸಂಗೀತ ಸಂಯೋಜಿಸಿರುವ ಮತ್ತು ಶೀರ್ಷಿಕೆ ಹಾಡನ್ನು ಹಾಡಿರುವ ಬಕ್ಕೇಶ್‍ ಮಾತನಾಡಿ, ‘ಚಿತ್ರದಲ್ಲಿ ಅಚ್ಚ ಹಾಗೂ ಸ್ವಚ್ಛ ಕನ್ನಡದ ಹಾಡುಗಳಿವೆ. ಒಟ್ಟು ಆರು ಹಾಡುಗಳು ಮತ್ತು ಎರಡು ಬಿಟ್‍ಗಳಿವೆ. ಮಂಸೋರೆ ಇದೇ ತರಹ ಬೇಕು ಎಂದು ಹೇಳಿ ಹಾಡುಗಳನ್ನು ಮಡಿಸಿಕೊಂಡಿದ್ದಾರೆ. ಅರ್ಜುನ್‍ ಕೊಳಲು, ನಾರಾಯಣ್‍ ಶರ್ಮ ಪಿಟೀಲು ಮತ್ತು ರಿತ್ವಿಕ್‍ ಭಟ್ಟಾಚಾರ್ಯ ಗಿಟಾರ್ ನುಡಿಸಿದ್ದಾರೆ. ಚಿತ್ರಕ್ಕೆ ಅತ್ಯುತ್ತಮ ಸಂಗೀತಗಾರರು ಕೆಲಸ ಮಾಡಿದ್ದು, ಲೈವ್ ವಾದ್ಯಗಳನ್ನು ಬಳಸಿದ್ದೇವೆ’ ಎಂದು ಹೇಳಿದರು. ಕಿರಣ್‍ ಕಾವೇರಪ್ಪ ಈ ಹಾಡು ಬರೆದಿದ್ದಾರೆ.

ಚಿತ್ರದಲ್ಲಿ ವಿಜಯ್‍ ಕೃಷ್ಣ ಮತ್ತು ಮೈಸೂರಿನ ಪ್ರಿಯಾಂಕಾ ಕುಮಾರ್ ನಾಯಕ-ನಾಯಕಿಯರಾಗಿ ನಟಿಸಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಇಂಧನ ಯೋಜನೆಗಳ ಭೂ ಪರಿವರ್ತನೆ ಇನ್ಮುಂದೆ ಆಟೋಮ್ಯಾಟಿಕ್

ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…

33 mins ago

ಜ.25 ರಂದು ಮೈಸೂರಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ

ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…

50 mins ago

ಕಾಡ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ ವಹಿಸಿ : ಅರಣ್ಯಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…

60 mins ago

ಸಿಲಿಕಾನ್‌ ಸಿಟಿಗೆ ಟ್ರಾಫಿಕ್‌ ಹೊರೆ : ಬೆಂಗಳೂರು ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ 2ನೇ ನಗರ

ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…

1 hour ago

ಮೈಸೂರಿನ ಒರಿಜಿನಲ್‌ ಮೈಲಾರಿ ಹೋಟೆಲ್‌ ಇದೀಗ ಬೆಂಗಳೂರಲ್ಲೂ ಲಭ್ಯ

ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…

1 hour ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…

3 hours ago