ಮನರಂಜನೆ

ಜುಲೈ.11ರಿಂದ ‘ದೂರ ತೀರ ಯಾನ’ ಪ್ರಾರಂಭ

ಕಳೆದ ವರ್ಷ ಪ್ರಾರಂಭವಾಗಿದ್ದ ಮಂಸೋರೆ ನಿರ್ದೇಶನದ ‘ದೂರ ತೀರ ಯಾನ’ ಚಿತ್ರದ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಇದೀಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಜುಲೈ.11ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಚಿತ್ರದ ಬಿಡುಗಡೆ ದಿನಾಂಕ ಘೋಷಿಸುವುದರ ಜೊತೆಗೆ ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಶುರು ಮಾಡಿದೆ ಚಿತ್ರತಂಡ.

ಸಂಗೀತ ನಿರ್ದೇಶಕ ಬಕ್ಕೇಶ್‍ ಮತ್ತು ಈಶ ಸುಚಿ ಹಾಡಿರುವ ‘ದೂರ ತೀರ ಯಾನ…’ ಎಂಬ ಹಾಡನ್ನು MRT ಮ್ಯೂಸಿಕ್‍ ಚಾನಲ್‍ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಸಮಾರಂಭದಲ್ಲಿ ಹಿರಿಯ ನಿರ್ದೇಶಕ ಸುನೀಲ್‍ ಕುಮಾರ್ ದೇಸಾಯಿ, ನಟ ನವೀನ್‍ ಶಂಕರ್ ಮುಂತಾದವರು ಹಾಜರಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಚಿತ್ರದ ಕುರಿತು ಮಾತನಾಡುವ ಮಂಸೋರೆ, ‘ನಾನು ಕುಸಿದಿದ್ದಾಗ ನಿರ್ಮಾಪಕರು ಬಂದು, ‘ಇಲ್ಲಿಗೆ ಎಲ್ಲವೂ ಮುಗಿಯುವುದಿಲ್ಲ. ನಾವು ಮುಂದುವರೆಯುತ್ತಿರಬೇಕು’ ಎಂದರು. ಅಲ್ಲಿಂದ ಈ ಪ್ರಯಾಣ ಶುರುವಾಯಿತು. ಪ್ರಯಾಣ ಮಾಡುವಾಗ ನಾವು ಹಲವು ಹಾಡುಗಳನ್ನು ಕೇಳುತ್ತಿರುತ್ತೇವೆ. ಪ್ರಯಾಣಕ್ಕೆಂದೇ ಒಂದು ಹಾಡು ಬೇಕಿತ್ತು. ಇದು ನನಗಾಗಿ ಮಾಡಿಕೊಂಡ ಹಾಡು. ನನಗೆ ಖುಷಿ ಕೊಟ್ಟರೆ, ಜನರಿಗೂ ಖುಷಿ ಕೊಡುತ್ತದೆ ಎಂದು ನಂಬಿದವನು ನಾನು. ಈ ಹಾಡು ವೈಯಕ್ತಿಕವಾಗಿ ಬಹಳ ಖುಷಿಕೊಟ್ಟಿದೆ. ಸಾಮಾನ್ಯವಾಗಿ ಪ್ರೀ-ಕ್ಲೈಮ್ಯಾಕ್ಸ್ ಡ್ರಾಮಾ ಅಥವಾ ಫೈಟ್‍ ಇರುತ್ತದೆ. ನಮ್ಮ ಚಿತ್ರದಲ್ಲಿ ಈ ಹಾಡು ಬರುತ್ತದೆ’ ಎಂದರು.

ಈ ಚಿತ್ರದ ಮೂಲಕ ನಮ್ಮ ಗುರುತನ್ನು ಹುಡುಕುವ ಪ್ರಯತ್ನ ಮಾಡಲಾಗಿದೆ ಎನ್ನುವ ಮಂಸೋರೆ, ‘ಕನ್ನಡ ಚಿತ್ರರಂಗಕ್ಕೂ ಒಂದು ಬದಲಾವಣೆಯ ಅವಶ್ಯಕತೆ ಇದೆ. ಕನ್ನಡ ಚಿತ್ರರಂಗ ಬೇರೆ ರೀತಿಯಲ್ಲಿ ಪುನಃ ತನ್ನ ಗುರುತನ್ನು ಸ್ಥಾಪಿಸಬೇಕು, ತನ್ನ ಸೊಗಡನ್ನು ತೋರಿಸಬೇಕು. ಆ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದೇವೆ. ನಮ್ಮ ಚಿತ್ರದ ಹಾಡುಗಳಲ್ಲಿ ಒಂದೇ ಒಂದು ಇಂಗ್ಲಿಷ್ ಪದ ಬಳಸದೇ ಹಾಡುಗಳನ್ನು ಮಾಡಿದ್ದೇವೆ’ ಎಂದರು.

ಸಂಗೀತ ಸಂಯೋಜಿಸಿರುವ ಮತ್ತು ಶೀರ್ಷಿಕೆ ಹಾಡನ್ನು ಹಾಡಿರುವ ಬಕ್ಕೇಶ್‍ ಮಾತನಾಡಿ, ‘ಚಿತ್ರದಲ್ಲಿ ಅಚ್ಚ ಹಾಗೂ ಸ್ವಚ್ಛ ಕನ್ನಡದ ಹಾಡುಗಳಿವೆ. ಒಟ್ಟು ಆರು ಹಾಡುಗಳು ಮತ್ತು ಎರಡು ಬಿಟ್‍ಗಳಿವೆ. ಮಂಸೋರೆ ಇದೇ ತರಹ ಬೇಕು ಎಂದು ಹೇಳಿ ಹಾಡುಗಳನ್ನು ಮಡಿಸಿಕೊಂಡಿದ್ದಾರೆ. ಅರ್ಜುನ್‍ ಕೊಳಲು, ನಾರಾಯಣ್‍ ಶರ್ಮ ಪಿಟೀಲು ಮತ್ತು ರಿತ್ವಿಕ್‍ ಭಟ್ಟಾಚಾರ್ಯ ಗಿಟಾರ್ ನುಡಿಸಿದ್ದಾರೆ. ಚಿತ್ರಕ್ಕೆ ಅತ್ಯುತ್ತಮ ಸಂಗೀತಗಾರರು ಕೆಲಸ ಮಾಡಿದ್ದು, ಲೈವ್ ವಾದ್ಯಗಳನ್ನು ಬಳಸಿದ್ದೇವೆ’ ಎಂದು ಹೇಳಿದರು. ಕಿರಣ್‍ ಕಾವೇರಪ್ಪ ಈ ಹಾಡು ಬರೆದಿದ್ದಾರೆ.

ಚಿತ್ರದಲ್ಲಿ ವಿಜಯ್‍ ಕೃಷ್ಣ ಮತ್ತು ಮೈಸೂರಿನ ಪ್ರಿಯಾಂಕಾ ಕುಮಾರ್ ನಾಯಕ-ನಾಯಕಿಯರಾಗಿ ನಟಿಸಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಡಿಸಿಎಂ ಡಿಕೆಶಿ ಆಪ್ತ ಇನಾಯತ್‌ಗೆ ನೋಟಿಸ್‌ ಜಾರಿ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಪ್ತನಿಗೂ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್‌ ಮುಖಂಡ ಇನಾಯತ್‌ ಅಲಿ ಅವರಿಗೆ…

29 mins ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್‌ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…

46 mins ago

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…

1 hour ago

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…

1 hour ago

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

3 hours ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

3 hours ago