ಮನರಂಜನೆ

ಜುಲೈ.11ರಿಂದ ‘ದೂರ ತೀರ ಯಾನ’ ಪ್ರಾರಂಭ

ಕಳೆದ ವರ್ಷ ಪ್ರಾರಂಭವಾಗಿದ್ದ ಮಂಸೋರೆ ನಿರ್ದೇಶನದ ‘ದೂರ ತೀರ ಯಾನ’ ಚಿತ್ರದ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಇದೀಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಜುಲೈ.11ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಚಿತ್ರದ ಬಿಡುಗಡೆ ದಿನಾಂಕ ಘೋಷಿಸುವುದರ ಜೊತೆಗೆ ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಶುರು ಮಾಡಿದೆ ಚಿತ್ರತಂಡ.

ಸಂಗೀತ ನಿರ್ದೇಶಕ ಬಕ್ಕೇಶ್‍ ಮತ್ತು ಈಶ ಸುಚಿ ಹಾಡಿರುವ ‘ದೂರ ತೀರ ಯಾನ…’ ಎಂಬ ಹಾಡನ್ನು MRT ಮ್ಯೂಸಿಕ್‍ ಚಾನಲ್‍ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಸಮಾರಂಭದಲ್ಲಿ ಹಿರಿಯ ನಿರ್ದೇಶಕ ಸುನೀಲ್‍ ಕುಮಾರ್ ದೇಸಾಯಿ, ನಟ ನವೀನ್‍ ಶಂಕರ್ ಮುಂತಾದವರು ಹಾಜರಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಚಿತ್ರದ ಕುರಿತು ಮಾತನಾಡುವ ಮಂಸೋರೆ, ‘ನಾನು ಕುಸಿದಿದ್ದಾಗ ನಿರ್ಮಾಪಕರು ಬಂದು, ‘ಇಲ್ಲಿಗೆ ಎಲ್ಲವೂ ಮುಗಿಯುವುದಿಲ್ಲ. ನಾವು ಮುಂದುವರೆಯುತ್ತಿರಬೇಕು’ ಎಂದರು. ಅಲ್ಲಿಂದ ಈ ಪ್ರಯಾಣ ಶುರುವಾಯಿತು. ಪ್ರಯಾಣ ಮಾಡುವಾಗ ನಾವು ಹಲವು ಹಾಡುಗಳನ್ನು ಕೇಳುತ್ತಿರುತ್ತೇವೆ. ಪ್ರಯಾಣಕ್ಕೆಂದೇ ಒಂದು ಹಾಡು ಬೇಕಿತ್ತು. ಇದು ನನಗಾಗಿ ಮಾಡಿಕೊಂಡ ಹಾಡು. ನನಗೆ ಖುಷಿ ಕೊಟ್ಟರೆ, ಜನರಿಗೂ ಖುಷಿ ಕೊಡುತ್ತದೆ ಎಂದು ನಂಬಿದವನು ನಾನು. ಈ ಹಾಡು ವೈಯಕ್ತಿಕವಾಗಿ ಬಹಳ ಖುಷಿಕೊಟ್ಟಿದೆ. ಸಾಮಾನ್ಯವಾಗಿ ಪ್ರೀ-ಕ್ಲೈಮ್ಯಾಕ್ಸ್ ಡ್ರಾಮಾ ಅಥವಾ ಫೈಟ್‍ ಇರುತ್ತದೆ. ನಮ್ಮ ಚಿತ್ರದಲ್ಲಿ ಈ ಹಾಡು ಬರುತ್ತದೆ’ ಎಂದರು.

ಈ ಚಿತ್ರದ ಮೂಲಕ ನಮ್ಮ ಗುರುತನ್ನು ಹುಡುಕುವ ಪ್ರಯತ್ನ ಮಾಡಲಾಗಿದೆ ಎನ್ನುವ ಮಂಸೋರೆ, ‘ಕನ್ನಡ ಚಿತ್ರರಂಗಕ್ಕೂ ಒಂದು ಬದಲಾವಣೆಯ ಅವಶ್ಯಕತೆ ಇದೆ. ಕನ್ನಡ ಚಿತ್ರರಂಗ ಬೇರೆ ರೀತಿಯಲ್ಲಿ ಪುನಃ ತನ್ನ ಗುರುತನ್ನು ಸ್ಥಾಪಿಸಬೇಕು, ತನ್ನ ಸೊಗಡನ್ನು ತೋರಿಸಬೇಕು. ಆ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದೇವೆ. ನಮ್ಮ ಚಿತ್ರದ ಹಾಡುಗಳಲ್ಲಿ ಒಂದೇ ಒಂದು ಇಂಗ್ಲಿಷ್ ಪದ ಬಳಸದೇ ಹಾಡುಗಳನ್ನು ಮಾಡಿದ್ದೇವೆ’ ಎಂದರು.

ಸಂಗೀತ ಸಂಯೋಜಿಸಿರುವ ಮತ್ತು ಶೀರ್ಷಿಕೆ ಹಾಡನ್ನು ಹಾಡಿರುವ ಬಕ್ಕೇಶ್‍ ಮಾತನಾಡಿ, ‘ಚಿತ್ರದಲ್ಲಿ ಅಚ್ಚ ಹಾಗೂ ಸ್ವಚ್ಛ ಕನ್ನಡದ ಹಾಡುಗಳಿವೆ. ಒಟ್ಟು ಆರು ಹಾಡುಗಳು ಮತ್ತು ಎರಡು ಬಿಟ್‍ಗಳಿವೆ. ಮಂಸೋರೆ ಇದೇ ತರಹ ಬೇಕು ಎಂದು ಹೇಳಿ ಹಾಡುಗಳನ್ನು ಮಡಿಸಿಕೊಂಡಿದ್ದಾರೆ. ಅರ್ಜುನ್‍ ಕೊಳಲು, ನಾರಾಯಣ್‍ ಶರ್ಮ ಪಿಟೀಲು ಮತ್ತು ರಿತ್ವಿಕ್‍ ಭಟ್ಟಾಚಾರ್ಯ ಗಿಟಾರ್ ನುಡಿಸಿದ್ದಾರೆ. ಚಿತ್ರಕ್ಕೆ ಅತ್ಯುತ್ತಮ ಸಂಗೀತಗಾರರು ಕೆಲಸ ಮಾಡಿದ್ದು, ಲೈವ್ ವಾದ್ಯಗಳನ್ನು ಬಳಸಿದ್ದೇವೆ’ ಎಂದು ಹೇಳಿದರು. ಕಿರಣ್‍ ಕಾವೇರಪ್ಪ ಈ ಹಾಡು ಬರೆದಿದ್ದಾರೆ.

ಚಿತ್ರದಲ್ಲಿ ವಿಜಯ್‍ ಕೃಷ್ಣ ಮತ್ತು ಮೈಸೂರಿನ ಪ್ರಿಯಾಂಕಾ ಕುಮಾರ್ ನಾಯಕ-ನಾಯಕಿಯರಾಗಿ ನಟಿಸಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago