dhoora theera yaana
ಕಳೆದ ವರ್ಷ ಪ್ರಾರಂಭವಾಗಿದ್ದ ಮಂಸೋರೆ ನಿರ್ದೇಶನದ ‘ದೂರ ತೀರ ಯಾನ’ ಚಿತ್ರದ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಇದೀಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಜುಲೈ.11ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಚಿತ್ರದ ಬಿಡುಗಡೆ ದಿನಾಂಕ ಘೋಷಿಸುವುದರ ಜೊತೆಗೆ ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಶುರು ಮಾಡಿದೆ ಚಿತ್ರತಂಡ.
ಸಂಗೀತ ನಿರ್ದೇಶಕ ಬಕ್ಕೇಶ್ ಮತ್ತು ಈಶ ಸುಚಿ ಹಾಡಿರುವ ‘ದೂರ ತೀರ ಯಾನ…’ ಎಂಬ ಹಾಡನ್ನು MRT ಮ್ಯೂಸಿಕ್ ಚಾನಲ್ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಸಮಾರಂಭದಲ್ಲಿ ಹಿರಿಯ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ, ನಟ ನವೀನ್ ಶಂಕರ್ ಮುಂತಾದವರು ಹಾಜರಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಚಿತ್ರದ ಕುರಿತು ಮಾತನಾಡುವ ಮಂಸೋರೆ, ‘ನಾನು ಕುಸಿದಿದ್ದಾಗ ನಿರ್ಮಾಪಕರು ಬಂದು, ‘ಇಲ್ಲಿಗೆ ಎಲ್ಲವೂ ಮುಗಿಯುವುದಿಲ್ಲ. ನಾವು ಮುಂದುವರೆಯುತ್ತಿರಬೇಕು’ ಎಂದರು. ಅಲ್ಲಿಂದ ಈ ಪ್ರಯಾಣ ಶುರುವಾಯಿತು. ಪ್ರಯಾಣ ಮಾಡುವಾಗ ನಾವು ಹಲವು ಹಾಡುಗಳನ್ನು ಕೇಳುತ್ತಿರುತ್ತೇವೆ. ಪ್ರಯಾಣಕ್ಕೆಂದೇ ಒಂದು ಹಾಡು ಬೇಕಿತ್ತು. ಇದು ನನಗಾಗಿ ಮಾಡಿಕೊಂಡ ಹಾಡು. ನನಗೆ ಖುಷಿ ಕೊಟ್ಟರೆ, ಜನರಿಗೂ ಖುಷಿ ಕೊಡುತ್ತದೆ ಎಂದು ನಂಬಿದವನು ನಾನು. ಈ ಹಾಡು ವೈಯಕ್ತಿಕವಾಗಿ ಬಹಳ ಖುಷಿಕೊಟ್ಟಿದೆ. ಸಾಮಾನ್ಯವಾಗಿ ಪ್ರೀ-ಕ್ಲೈಮ್ಯಾಕ್ಸ್ ಡ್ರಾಮಾ ಅಥವಾ ಫೈಟ್ ಇರುತ್ತದೆ. ನಮ್ಮ ಚಿತ್ರದಲ್ಲಿ ಈ ಹಾಡು ಬರುತ್ತದೆ’ ಎಂದರು.
ಈ ಚಿತ್ರದ ಮೂಲಕ ನಮ್ಮ ಗುರುತನ್ನು ಹುಡುಕುವ ಪ್ರಯತ್ನ ಮಾಡಲಾಗಿದೆ ಎನ್ನುವ ಮಂಸೋರೆ, ‘ಕನ್ನಡ ಚಿತ್ರರಂಗಕ್ಕೂ ಒಂದು ಬದಲಾವಣೆಯ ಅವಶ್ಯಕತೆ ಇದೆ. ಕನ್ನಡ ಚಿತ್ರರಂಗ ಬೇರೆ ರೀತಿಯಲ್ಲಿ ಪುನಃ ತನ್ನ ಗುರುತನ್ನು ಸ್ಥಾಪಿಸಬೇಕು, ತನ್ನ ಸೊಗಡನ್ನು ತೋರಿಸಬೇಕು. ಆ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದೇವೆ. ನಮ್ಮ ಚಿತ್ರದ ಹಾಡುಗಳಲ್ಲಿ ಒಂದೇ ಒಂದು ಇಂಗ್ಲಿಷ್ ಪದ ಬಳಸದೇ ಹಾಡುಗಳನ್ನು ಮಾಡಿದ್ದೇವೆ’ ಎಂದರು.
ಸಂಗೀತ ಸಂಯೋಜಿಸಿರುವ ಮತ್ತು ಶೀರ್ಷಿಕೆ ಹಾಡನ್ನು ಹಾಡಿರುವ ಬಕ್ಕೇಶ್ ಮಾತನಾಡಿ, ‘ಚಿತ್ರದಲ್ಲಿ ಅಚ್ಚ ಹಾಗೂ ಸ್ವಚ್ಛ ಕನ್ನಡದ ಹಾಡುಗಳಿವೆ. ಒಟ್ಟು ಆರು ಹಾಡುಗಳು ಮತ್ತು ಎರಡು ಬಿಟ್ಗಳಿವೆ. ಮಂಸೋರೆ ಇದೇ ತರಹ ಬೇಕು ಎಂದು ಹೇಳಿ ಹಾಡುಗಳನ್ನು ಮಡಿಸಿಕೊಂಡಿದ್ದಾರೆ. ಅರ್ಜುನ್ ಕೊಳಲು, ನಾರಾಯಣ್ ಶರ್ಮ ಪಿಟೀಲು ಮತ್ತು ರಿತ್ವಿಕ್ ಭಟ್ಟಾಚಾರ್ಯ ಗಿಟಾರ್ ನುಡಿಸಿದ್ದಾರೆ. ಚಿತ್ರಕ್ಕೆ ಅತ್ಯುತ್ತಮ ಸಂಗೀತಗಾರರು ಕೆಲಸ ಮಾಡಿದ್ದು, ಲೈವ್ ವಾದ್ಯಗಳನ್ನು ಬಳಸಿದ್ದೇವೆ’ ಎಂದು ಹೇಳಿದರು. ಕಿರಣ್ ಕಾವೇರಪ್ಪ ಈ ಹಾಡು ಬರೆದಿದ್ದಾರೆ.
ಚಿತ್ರದಲ್ಲಿ ವಿಜಯ್ ಕೃಷ್ಣ ಮತ್ತು ಮೈಸೂರಿನ ಪ್ರಿಯಾಂಕಾ ಕುಮಾರ್ ನಾಯಕ-ನಾಯಕಿಯರಾಗಿ ನಟಿಸಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣವಿದೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…