ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕ್ರಿಕೆಟ್ ವೀಕ್ಷಿಸಲು ಆಗಮಿಸಿದ್ದರು. ಆದರೆ, ಪಂದ್ಯ ಮುಗಿದು ಹೊರಬರುವಾಗ ಸಾರಾ ಅರ್ಜುನ್ ಅವರು ಅಭಿಮಾನಿಗಳ ನಡುವೆ ಸಿಲುಕಿಕೊಂಡಿರುವ ಘಟನೆ ನಡೆದಿದೆ.
20 ವರ್ಷ ವಯಸ್ಸಿನ ಸಾರಾ ತನ್ನ ತಂದೆ ರಾಜ್ ಅರ್ಜುನ್ ಮತ್ತು ತಾಯಿ ಸನ್ಯಾ ಅರ್ಜುನ್ ಜೊತೆಗೆ ಮುಂಬೈ ಇಂಡಿಯನ್ಸ್ ಜೆರ್ಸಿ ಧರಿಸಿ ಪಂದ್ಯವನ್ನು ವೀಕ್ಷಿಸಿದರು. ಸಾರಾ, ಪಂದ್ಯ ಮುಗಿದ ನಂತರ ಹೊರಬರುತ್ತಿರುವಾಗ ಅಭಿಮಾನಿಗಳ ಗುಂಪು ಅವರನ್ನು ಗುರುತಿಸಿ ಸುತ್ತುವರಿದಿತು.
ಸೆಲ್ಫಿ ಮತ್ತು ಆಟೋಗ್ರಾಫ್ಗಳಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದರಿಂದ ಪರಿಸ್ಥಿತಿ ಕೆಲಕಾಲ ಕೈ ಕೈಮೀರಿತ್ತು. ಈ ವೇಳೆ ನಟಿ ಸಾರಾ ಸ್ವಲ್ಪ ಭಯಭೀತರಾದರು. ಪಕ್ಕದಲ್ಲೇ ಇದ್ದ ತಂದೆ ರಾಜ್ ಅರ್ಜುನ್ ತಕ್ಷಣವೇ ಮಗಳ ರಕ್ಷಣೆಗೆ ಮುಂದಾಗಿ, ಬಾಡಿಗಾರ್ಡ್ನಂತೆ ವರ್ತಿಸುತ್ತಾ ಅಭಿಮಾನಿಗಳ ಗುಂಪನ್ನು ಸರಿಸುತ್ತಾ ಸಾರಾಳನ್ನು ಸುರಕ್ಷಿತವಾಗಿ ಕಾರಿನವರೆಗೆ ಕರೆದೊಯ್ದರು.
ಸದ್ಯ ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣ ವೈರಲ್ ಆಗುತ್ತಿವೆ. ನೆಟ್ಟಿಗರು ರಾಜ್ ಅರ್ಜುನ್ ಅವರ ತಂದೆಯ ಕಾಳಜಿ ಮತ್ತು ತ್ವರಿತ ಪ್ರತಿಕ್ರಿಯೆಯನ್ನು ಮೆಚ್ಚುತ್ತಿದ್ದಾರೆ. “ತಂದೆ ಎಂದರೆ ಹೀಗಿರಬೇಕು”, “ಮಗಳ ರಕ್ಷಣೆಗೆ ರಾಜ್ ಅರ್ಜುನ್ ತೋರಿದ ಜಾಗ್ರತೆ ಮೆಚ್ಚುವಂತದ್ದ” ಎಂದು ಕಾಮೆಂಟ್ ಮಾಡಿದ್ದಾರೆ.
ಇನ್ನೂ ‘ಧುರಂಧರ್ 2’ ಚಿತ್ರದ ಯಶಸ್ಸಿನ ಬೆನ್ನಲ್ಲೇ ಸಾರಾ ಅರ್ಜುನ್ ಅವರ ಜನಪ್ರಿಯತೆಯೂ ಸಹ ಹೆಚ್ಚಾಗಿದೆ.
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…