ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕ್ರಿಕೆಟ್ ವೀಕ್ಷಿಸಲು ಆಗಮಿಸಿದ್ದರು. ಆದರೆ, ಪಂದ್ಯ ಮುಗಿದು ಹೊರಬರುವಾಗ ಸಾರಾ ಅರ್ಜುನ್ ಅವರು ಅಭಿಮಾನಿಗಳ ನಡುವೆ ಸಿಲುಕಿಕೊಂಡಿರುವ ಘಟನೆ ನಡೆದಿದೆ.
20 ವರ್ಷ ವಯಸ್ಸಿನ ಸಾರಾ ತನ್ನ ತಂದೆ ರಾಜ್ ಅರ್ಜುನ್ ಮತ್ತು ತಾಯಿ ಸನ್ಯಾ ಅರ್ಜುನ್ ಜೊತೆಗೆ ಮುಂಬೈ ಇಂಡಿಯನ್ಸ್ ಜೆರ್ಸಿ ಧರಿಸಿ ಪಂದ್ಯವನ್ನು ವೀಕ್ಷಿಸಿದರು. ಸಾರಾ, ಪಂದ್ಯ ಮುಗಿದ ನಂತರ ಹೊರಬರುತ್ತಿರುವಾಗ ಅಭಿಮಾನಿಗಳ ಗುಂಪು ಅವರನ್ನು ಗುರುತಿಸಿ ಸುತ್ತುವರಿದಿತು.
ಸೆಲ್ಫಿ ಮತ್ತು ಆಟೋಗ್ರಾಫ್ಗಳಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದರಿಂದ ಪರಿಸ್ಥಿತಿ ಕೆಲಕಾಲ ಕೈ ಕೈಮೀರಿತ್ತು. ಈ ವೇಳೆ ನಟಿ ಸಾರಾ ಸ್ವಲ್ಪ ಭಯಭೀತರಾದರು. ಪಕ್ಕದಲ್ಲೇ ಇದ್ದ ತಂದೆ ರಾಜ್ ಅರ್ಜುನ್ ತಕ್ಷಣವೇ ಮಗಳ ರಕ್ಷಣೆಗೆ ಮುಂದಾಗಿ, ಬಾಡಿಗಾರ್ಡ್ನಂತೆ ವರ್ತಿಸುತ್ತಾ ಅಭಿಮಾನಿಗಳ ಗುಂಪನ್ನು ಸರಿಸುತ್ತಾ ಸಾರಾಳನ್ನು ಸುರಕ್ಷಿತವಾಗಿ ಕಾರಿನವರೆಗೆ ಕರೆದೊಯ್ದರು.
ಸದ್ಯ ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣ ವೈರಲ್ ಆಗುತ್ತಿವೆ. ನೆಟ್ಟಿಗರು ರಾಜ್ ಅರ್ಜುನ್ ಅವರ ತಂದೆಯ ಕಾಳಜಿ ಮತ್ತು ತ್ವರಿತ ಪ್ರತಿಕ್ರಿಯೆಯನ್ನು ಮೆಚ್ಚುತ್ತಿದ್ದಾರೆ. “ತಂದೆ ಎಂದರೆ ಹೀಗಿರಬೇಕು”, “ಮಗಳ ರಕ್ಷಣೆಗೆ ರಾಜ್ ಅರ್ಜುನ್ ತೋರಿದ ಜಾಗ್ರತೆ ಮೆಚ್ಚುವಂತದ್ದ” ಎಂದು ಕಾಮೆಂಟ್ ಮಾಡಿದ್ದಾರೆ.
ಇನ್ನೂ ‘ಧುರಂಧರ್ 2’ ಚಿತ್ರದ ಯಶಸ್ಸಿನ ಬೆನ್ನಲ್ಲೇ ಸಾರಾ ಅರ್ಜುನ್ ಅವರ ಜನಪ್ರಿಯತೆಯೂ ಸಹ ಹೆಚ್ಚಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…