ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕ್ರಿಕೆಟ್ ವೀಕ್ಷಿಸಲು ಆಗಮಿಸಿದ್ದರು. ಆದರೆ, ಪಂದ್ಯ ಮುಗಿದು ಹೊರಬರುವಾಗ ಸಾರಾ ಅರ್ಜುನ್ ಅವರು ಅಭಿಮಾನಿಗಳ ನಡುವೆ ಸಿಲುಕಿಕೊಂಡಿರುವ ಘಟನೆ ನಡೆದಿದೆ.
20 ವರ್ಷ ವಯಸ್ಸಿನ ಸಾರಾ ತನ್ನ ತಂದೆ ರಾಜ್ ಅರ್ಜುನ್ ಮತ್ತು ತಾಯಿ ಸನ್ಯಾ ಅರ್ಜುನ್ ಜೊತೆಗೆ ಮುಂಬೈ ಇಂಡಿಯನ್ಸ್ ಜೆರ್ಸಿ ಧರಿಸಿ ಪಂದ್ಯವನ್ನು ವೀಕ್ಷಿಸಿದರು. ಸಾರಾ, ಪಂದ್ಯ ಮುಗಿದ ನಂತರ ಹೊರಬರುತ್ತಿರುವಾಗ ಅಭಿಮಾನಿಗಳ ಗುಂಪು ಅವರನ್ನು ಗುರುತಿಸಿ ಸುತ್ತುವರಿದಿತು.
ಸೆಲ್ಫಿ ಮತ್ತು ಆಟೋಗ್ರಾಫ್ಗಳಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದರಿಂದ ಪರಿಸ್ಥಿತಿ ಕೆಲಕಾಲ ಕೈ ಕೈಮೀರಿತ್ತು. ಈ ವೇಳೆ ನಟಿ ಸಾರಾ ಸ್ವಲ್ಪ ಭಯಭೀತರಾದರು. ಪಕ್ಕದಲ್ಲೇ ಇದ್ದ ತಂದೆ ರಾಜ್ ಅರ್ಜುನ್ ತಕ್ಷಣವೇ ಮಗಳ ರಕ್ಷಣೆಗೆ ಮುಂದಾಗಿ, ಬಾಡಿಗಾರ್ಡ್ನಂತೆ ವರ್ತಿಸುತ್ತಾ ಅಭಿಮಾನಿಗಳ ಗುಂಪನ್ನು ಸರಿಸುತ್ತಾ ಸಾರಾಳನ್ನು ಸುರಕ್ಷಿತವಾಗಿ ಕಾರಿನವರೆಗೆ ಕರೆದೊಯ್ದರು.
ಸದ್ಯ ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣ ವೈರಲ್ ಆಗುತ್ತಿವೆ. ನೆಟ್ಟಿಗರು ರಾಜ್ ಅರ್ಜುನ್ ಅವರ ತಂದೆಯ ಕಾಳಜಿ ಮತ್ತು ತ್ವರಿತ ಪ್ರತಿಕ್ರಿಯೆಯನ್ನು ಮೆಚ್ಚುತ್ತಿದ್ದಾರೆ. “ತಂದೆ ಎಂದರೆ ಹೀಗಿರಬೇಕು”, “ಮಗಳ ರಕ್ಷಣೆಗೆ ರಾಜ್ ಅರ್ಜುನ್ ತೋರಿದ ಜಾಗ್ರತೆ ಮೆಚ್ಚುವಂತದ್ದ” ಎಂದು ಕಾಮೆಂಟ್ ಮಾಡಿದ್ದಾರೆ.
ಇನ್ನೂ ‘ಧುರಂಧರ್ 2’ ಚಿತ್ರದ ಯಶಸ್ಸಿನ ಬೆನ್ನಲ್ಲೇ ಸಾರಾ ಅರ್ಜುನ್ ಅವರ ಜನಪ್ರಿಯತೆಯೂ ಸಹ ಹೆಚ್ಚಾಗಿದೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…