ಮನರಂಜನೆ

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾ ಮಾರ್ಚ್‌ 19 ರಂದು ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆಯಾಗಲಿದ್ದು, ಬಿಡುಗಡೆಗೂ ಮುನ್ನವೇ ದಾಖಲೆ ಪ್ರಮಾಣದ ಟಿಕೆಟ್‌ಗಳು ಮಾರಾಟವಾಗಿದೆ.

ಚಿತ್ರದ ಪ್ರೀಮಿಯರ್ ಹಾಗೂ ಮೊದಲ ದಿನದ ಪ್ರದರ್ಶನಗಳಿಗಾಗಿ ಈಗಾಗಲೇ ಲಕ್ಷಾಂತರ ಟಿಕೆಟ್‌ಗಳು ಮಾರಾಟವಾಗಿವೆ. ಮುಂಗಡ ಬುಕ್ಕಿಂಗ್ ಮೂಲಕವೇ ಚಿತ್ರವು ಕೋಟ್ಯಂತರ ರೂಪಾಯಿ ಸಂಗ್ರಹಿಸಿರುವುದಾಗಿ ತಿಳಿದುಬಂದಿದೆ. ಚಿತ್ರದ ಟ್ರೇಲರ್ ಬಿಡುಗಡೆಯಾದ ಬಳಿಕ ಬುಕ್ಕಿಂಗ್ ವೇಗವಾಗಿ ಹೆಚ್ಚಾಗಿದೆ.

ವೀಕ್ಷಣೆಗೆ ಮುಂಗಡವಾಗಿ 2.75 ಲಕ್ಷ ಟಿಕೆಟ್‌ಗಳು ಮಾರಾಟವಾಗಿದೆ. ಈ ಮೂಲಕ ಮುಂಗಡ ಕಾಯ್ದಿರಿಸುವಿಕೆಯಲ್ಲಿ ಒಟ್ಟು ದೇಶಿಯ ಗಳಿಗೆ 13.75 ಕೋಟಿ ಸಂಗ್ರಹವಾಗಿದೆ. ಇದರ ಜೊತೆಗೆ ಸಿನಿಮಾದ ಕೆಲವು ಟಿಕೆಟ್‌ಗಳು ಬ್ಲಾಕ್‌ನಲ್ಲಿ ಮಾರಾಟವಾಗಿದೆ. ಸಿನಿಮಾದ ಮುಂಗಡ ಟಿಕೆಟ್‌ ಕಾಯ್ದಿರಿಸುವಿಕೆಯ ಒಟ್ಟುಗಳಿಗೆ 19.46 ಕೋಟಿಗೆ ತಲುಪಿದೆ.

ಈ ಹಿಂದೆ ಪವನ್‌ ಕಲ್ಯಾಣ್‌ ನಟನೆಯ ಬೇಹುಗಾರಿಕೆ ಸಿನಿಮಾ `OG’ ಮುಂಗಡ ಟೆಕೆಟ್‌ ಖರೀದಿಯಲ್ಲಿ 25 ಕೋಟಿ ಗಳಿಸಿತ್ತು. ಇದೀಗ ಧುರಂಧರ್‌ : ದಿ ರಿವೆಂಜ್‌ ಸಿನಿಮಾ ಈ ದಾಖಲೆಯನ್ನು ಮುರಿಯುವ ಸಾಧ್ಯತೆಯೂ ಇದೆ.

ಹಿಂದಿ ಸೇರಿದಂತೆ ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲೂ ಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

19 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

19 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago