ಮನರಂಜನೆ

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾ ಮಾರ್ಚ್‌ 19 ರಂದು ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆಯಾಗಲಿದ್ದು, ಬಿಡುಗಡೆಗೂ ಮುನ್ನವೇ ದಾಖಲೆ ಪ್ರಮಾಣದ ಟಿಕೆಟ್‌ಗಳು ಮಾರಾಟವಾಗಿದೆ.

ಚಿತ್ರದ ಪ್ರೀಮಿಯರ್ ಹಾಗೂ ಮೊದಲ ದಿನದ ಪ್ರದರ್ಶನಗಳಿಗಾಗಿ ಈಗಾಗಲೇ ಲಕ್ಷಾಂತರ ಟಿಕೆಟ್‌ಗಳು ಮಾರಾಟವಾಗಿವೆ. ಮುಂಗಡ ಬುಕ್ಕಿಂಗ್ ಮೂಲಕವೇ ಚಿತ್ರವು ಕೋಟ್ಯಂತರ ರೂಪಾಯಿ ಸಂಗ್ರಹಿಸಿರುವುದಾಗಿ ತಿಳಿದುಬಂದಿದೆ. ಚಿತ್ರದ ಟ್ರೇಲರ್ ಬಿಡುಗಡೆಯಾದ ಬಳಿಕ ಬುಕ್ಕಿಂಗ್ ವೇಗವಾಗಿ ಹೆಚ್ಚಾಗಿದೆ.

ವೀಕ್ಷಣೆಗೆ ಮುಂಗಡವಾಗಿ 2.75 ಲಕ್ಷ ಟಿಕೆಟ್‌ಗಳು ಮಾರಾಟವಾಗಿದೆ. ಈ ಮೂಲಕ ಮುಂಗಡ ಕಾಯ್ದಿರಿಸುವಿಕೆಯಲ್ಲಿ ಒಟ್ಟು ದೇಶಿಯ ಗಳಿಗೆ 13.75 ಕೋಟಿ ಸಂಗ್ರಹವಾಗಿದೆ. ಇದರ ಜೊತೆಗೆ ಸಿನಿಮಾದ ಕೆಲವು ಟಿಕೆಟ್‌ಗಳು ಬ್ಲಾಕ್‌ನಲ್ಲಿ ಮಾರಾಟವಾಗಿದೆ. ಸಿನಿಮಾದ ಮುಂಗಡ ಟಿಕೆಟ್‌ ಕಾಯ್ದಿರಿಸುವಿಕೆಯ ಒಟ್ಟುಗಳಿಗೆ 19.46 ಕೋಟಿಗೆ ತಲುಪಿದೆ.

ಈ ಹಿಂದೆ ಪವನ್‌ ಕಲ್ಯಾಣ್‌ ನಟನೆಯ ಬೇಹುಗಾರಿಕೆ ಸಿನಿಮಾ `OG’ ಮುಂಗಡ ಟೆಕೆಟ್‌ ಖರೀದಿಯಲ್ಲಿ 25 ಕೋಟಿ ಗಳಿಸಿತ್ತು. ಇದೀಗ ಧುರಂಧರ್‌ : ದಿ ರಿವೆಂಜ್‌ ಸಿನಿಮಾ ಈ ದಾಖಲೆಯನ್ನು ಮುರಿಯುವ ಸಾಧ್ಯತೆಯೂ ಇದೆ.

ಹಿಂದಿ ಸೇರಿದಂತೆ ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲೂ ಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

5 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

5 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

5 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

5 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

5 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

5 hours ago