ಮನರಂಜನೆ

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾ ಮಾರ್ಚ್‌ 19 ರಂದು ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆಯಾಗಲಿದ್ದು, ಬಿಡುಗಡೆಗೂ ಮುನ್ನವೇ ದಾಖಲೆ ಪ್ರಮಾಣದ ಟಿಕೆಟ್‌ಗಳು ಮಾರಾಟವಾಗಿದೆ.

ಚಿತ್ರದ ಪ್ರೀಮಿಯರ್ ಹಾಗೂ ಮೊದಲ ದಿನದ ಪ್ರದರ್ಶನಗಳಿಗಾಗಿ ಈಗಾಗಲೇ ಲಕ್ಷಾಂತರ ಟಿಕೆಟ್‌ಗಳು ಮಾರಾಟವಾಗಿವೆ. ಮುಂಗಡ ಬುಕ್ಕಿಂಗ್ ಮೂಲಕವೇ ಚಿತ್ರವು ಕೋಟ್ಯಂತರ ರೂಪಾಯಿ ಸಂಗ್ರಹಿಸಿರುವುದಾಗಿ ತಿಳಿದುಬಂದಿದೆ. ಚಿತ್ರದ ಟ್ರೇಲರ್ ಬಿಡುಗಡೆಯಾದ ಬಳಿಕ ಬುಕ್ಕಿಂಗ್ ವೇಗವಾಗಿ ಹೆಚ್ಚಾಗಿದೆ.

ವೀಕ್ಷಣೆಗೆ ಮುಂಗಡವಾಗಿ 2.75 ಲಕ್ಷ ಟಿಕೆಟ್‌ಗಳು ಮಾರಾಟವಾಗಿದೆ. ಈ ಮೂಲಕ ಮುಂಗಡ ಕಾಯ್ದಿರಿಸುವಿಕೆಯಲ್ಲಿ ಒಟ್ಟು ದೇಶಿಯ ಗಳಿಗೆ 13.75 ಕೋಟಿ ಸಂಗ್ರಹವಾಗಿದೆ. ಇದರ ಜೊತೆಗೆ ಸಿನಿಮಾದ ಕೆಲವು ಟಿಕೆಟ್‌ಗಳು ಬ್ಲಾಕ್‌ನಲ್ಲಿ ಮಾರಾಟವಾಗಿದೆ. ಸಿನಿಮಾದ ಮುಂಗಡ ಟಿಕೆಟ್‌ ಕಾಯ್ದಿರಿಸುವಿಕೆಯ ಒಟ್ಟುಗಳಿಗೆ 19.46 ಕೋಟಿಗೆ ತಲುಪಿದೆ.

ಈ ಹಿಂದೆ ಪವನ್‌ ಕಲ್ಯಾಣ್‌ ನಟನೆಯ ಬೇಹುಗಾರಿಕೆ ಸಿನಿಮಾ `OG’ ಮುಂಗಡ ಟೆಕೆಟ್‌ ಖರೀದಿಯಲ್ಲಿ 25 ಕೋಟಿ ಗಳಿಸಿತ್ತು. ಇದೀಗ ಧುರಂಧರ್‌ : ದಿ ರಿವೆಂಜ್‌ ಸಿನಿಮಾ ಈ ದಾಖಲೆಯನ್ನು ಮುರಿಯುವ ಸಾಧ್ಯತೆಯೂ ಇದೆ.

ಹಿಂದಿ ಸೇರಿದಂತೆ ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲೂ ಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

2 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

3 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

7 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

8 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

9 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

10 hours ago