ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್ : ದಿ ರೆವೆಂಜ್ನ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾ ಮಾರ್ಚ್ 19 ರಂದು ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆಯಾಗಲಿದ್ದು, ಬಿಡುಗಡೆಗೂ ಮುನ್ನವೇ ದಾಖಲೆ ಪ್ರಮಾಣದ ಟಿಕೆಟ್ಗಳು ಮಾರಾಟವಾಗಿದೆ.
ಚಿತ್ರದ ಪ್ರೀಮಿಯರ್ ಹಾಗೂ ಮೊದಲ ದಿನದ ಪ್ರದರ್ಶನಗಳಿಗಾಗಿ ಈಗಾಗಲೇ ಲಕ್ಷಾಂತರ ಟಿಕೆಟ್ಗಳು ಮಾರಾಟವಾಗಿವೆ. ಮುಂಗಡ ಬುಕ್ಕಿಂಗ್ ಮೂಲಕವೇ ಚಿತ್ರವು ಕೋಟ್ಯಂತರ ರೂಪಾಯಿ ಸಂಗ್ರಹಿಸಿರುವುದಾಗಿ ತಿಳಿದುಬಂದಿದೆ. ಚಿತ್ರದ ಟ್ರೇಲರ್ ಬಿಡುಗಡೆಯಾದ ಬಳಿಕ ಬುಕ್ಕಿಂಗ್ ವೇಗವಾಗಿ ಹೆಚ್ಚಾಗಿದೆ.
ವೀಕ್ಷಣೆಗೆ ಮುಂಗಡವಾಗಿ 2.75 ಲಕ್ಷ ಟಿಕೆಟ್ಗಳು ಮಾರಾಟವಾಗಿದೆ. ಈ ಮೂಲಕ ಮುಂಗಡ ಕಾಯ್ದಿರಿಸುವಿಕೆಯಲ್ಲಿ ಒಟ್ಟು ದೇಶಿಯ ಗಳಿಗೆ 13.75 ಕೋಟಿ ಸಂಗ್ರಹವಾಗಿದೆ. ಇದರ ಜೊತೆಗೆ ಸಿನಿಮಾದ ಕೆಲವು ಟಿಕೆಟ್ಗಳು ಬ್ಲಾಕ್ನಲ್ಲಿ ಮಾರಾಟವಾಗಿದೆ. ಸಿನಿಮಾದ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಯ ಒಟ್ಟುಗಳಿಗೆ 19.46 ಕೋಟಿಗೆ ತಲುಪಿದೆ.
ಈ ಹಿಂದೆ ಪವನ್ ಕಲ್ಯಾಣ್ ನಟನೆಯ ಬೇಹುಗಾರಿಕೆ ಸಿನಿಮಾ `OG’ ಮುಂಗಡ ಟೆಕೆಟ್ ಖರೀದಿಯಲ್ಲಿ 25 ಕೋಟಿ ಗಳಿಸಿತ್ತು. ಇದೀಗ ಧುರಂಧರ್ : ದಿ ರಿವೆಂಜ್ ಸಿನಿಮಾ ಈ ದಾಖಲೆಯನ್ನು ಮುರಿಯುವ ಸಾಧ್ಯತೆಯೂ ಇದೆ.
ಹಿಂದಿ ಸೇರಿದಂತೆ ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲೂ ಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸಿದ್ದಾರೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…