ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಎರಡು ವರ್ಷಗಳ ಹಿಂದೆ ‘ಜಿಮ್ಮಿ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಯಾಗಿತ್ತು. ಈ ಚಿತ್ರವನ್ನು ಲಹರಿ ಫಿಲಂಸ್ನ ನವೀನ್ ಮನೋಹರನ್ ಮತ್ತು ಕೆ.ಪಿ. ಶ್ರೀಕಾಂತ್ ನಿರ್ಮಿಸಬೇಕಿತ್ತು. ದೊಡ್ಡ ಮಟ್ಟದಲ್ಲಿ ನಡೆದ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಶಿವರಾಜಕುಮಾರ್ ಮುಂತಾದವರು ಬಂದು ಸಂಚಿತ್ಗೆ ಶುಭ ಹಾರೈಸಿದ್ದರು. ಆ ನಂತರ ಚಿತ್ರದ ಸುದ್ದಿಯೇ ಇರಲಿಲ್ಲ.
ಇದೀಗ ಸಂಚಿತ್ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ‘ಜಿಮ್ಮಿ’ ಚಿತ್ರಕ್ಕೆ ಸಂಚಿತ್ ನಾಯಕನಷ್ಟೇ ಅಲ್ಲ, ನಿರ್ದೇಶನವನ್ನೂ ಮಾಡಬೇಕಿತ್ತು. ಈಗ ಅವರು ಹೊಸ ಚಿತ್ರವೊಂದರಲ್ಲಿ ನಾಯಕನಾಗಿ ನಟಿಸುವುದಕ್ಕೆ ಸಜ್ಜಾಗುತ್ತಿದ್ದು, ಆ ಚಿತ್ರವನ್ನು ವಿವೇಕ್ ಎನ್ನುವವರು ನಿರ್ದೇಶನ ಮಾಡುತ್ತಿದ್ದಾರೆ. ಹಾಗಾದರೆ, ‘ಜಿಮ್ಮಿ’ ಚಿತ್ರ ನಿಂತು ಹೋಯ್ತಾ? ಅಥವಾ ಮುಂದಕ್ಕೇನಾದರೂ ಹೋಯ್ತಾ? ಎಂಬ ಪ್ರಶ್ನೆ ಸಹಜ. ಚಿತ್ರ ಘೋಷಣೆಯಾದ ಸಂದರ್ಭದಲ್ಲಿ ಚಿತ್ರಕ್ಕೆ ಒಂದು ಕಥೆಯೇ ಇರಲಿಲ್ಲಲ ಎಂದು ಹೇಳಲಾಗಿದೆ. ಚಿತ್ರತಂಡ ನಾಯಕನನ್ನು ಪರಿಚಯಿಸುವ ಟೀಸರ್ ಬಿಡುಗಡೆ ಮಾಡಿತಾದರೂ, ಸೂಕ್ತ ಕಥೆ ಸಿಗದ ಕಾರಣ ಚಿತ್ರ ನಿಂತಿದೆ ಎಂದು ಹೇಳಲಾಗುತ್ತಿದೆ. ಆದರೆ, ‘ಜಿಮ್ಮಿ’ ಚಿತ್ರತಂಡದಿಂದ ಈ ಕುರಿತು ಯಾವುದೇ ಸ್ಪಷ್ಟನೆ ಇಲ್ಲ.
ಅಂದಹಾಗೆ, ಸಂಚಿತ್ ಅಭಿನಯದ ಹೊಸ ಚಿತ್ರದ ಹೆಸರು ಘೋಷಣೆಯಾಗಿಲ್ಲ. ಸುದೀಪ್ ಅವರ ಪತ್ನಿ ಮತ್ತು ಮಗಳ ಹೆಸರಲ್ಲಿ ಪ್ರಾರಂಭವಾಗಿರುವ ಸುಪ್ರಿಯಾನ್ವಿ ಪ್ರೊಡಕ್ಷನ್ ಮತ್ತು KRG ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ.
ಕಾರ್ತಿಕ್ ಗೌಡ ಹೇಳಿಕೊಂಡಿರುವಂಗೆ ಮೈಸೂರು ಮೂಲದ ವಿವೇಕ್, ‘ನಿನ್ನಿಂದಲೇ’ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿದ್ದರಂತೆ. ಆ ನಂತರ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವಗಳಿಸಿರುವ ವಿವೇಕ್, ಇದೀಗ ಹೊಸ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.
ಇದು ಕ್ರೈಂ ಥ್ರಿಲ್ಲರ್ ಸ್ಟೋರಿ ಆಗಿದ್ದು, ಈ ಚಿತ್ರದ ಮೊದಲ ನೋಟ ಮತ್ತು ಶೀರ್ಷಿಕೆ ಅನಾವರಣ ಜನವರಿ 24ರಂದು ನಡೆಯಲಿದೆ. ಅಂದೇ ಚಿತ್ರದ ಮುಹೂರ್ತ ಸಹ ನಡೆಯಲಿದೆ. ಇನ್ನು ಈ ಚಿತ್ರದ ನಾಯಕಿ ಯಾರು? ಯಾರೆಲ್ಲಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಮತ್ತು ಕೆಲಸ ಮಾಡಲಿದ್ದಾರೆ ಮುಂತಾದಪ್ರಶ್ನೆಗಳಿಗೆ ಮುಹೂರ್ತದ ದಿನವೇ ಉತ್ತರ ಸಿಗಲಿದೆ.
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…
ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ…
ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು…
ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ…
ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು!…