ಮನರಂಜನೆ

ನಿಂತು ಹೋಯ್ತಾ ‘ಜಿಮ್ಮಿ’?; ಹೊಸ ಚಿತ್ರದೊಂದಿಗೆ ಬಂದ ಸಂಚಿತ್‍

ಸುದೀಪ್‍ ಅಕ್ಕನ ಮಗ ಸಂಚಿತ್‍ ಸಂಜೀವ್‍ ಎರಡು ವರ್ಷಗಳ ಹಿಂದೆ ‘ಜಿಮ್ಮಿ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಯಾಗಿತ್ತು. ಈ ಚಿತ್ರವನ್ನು ಲಹರಿ ಫಿಲಂಸ್‍ನ ನವೀನ್ ‍ಮನೋಹರನ್‍ ಮತ್ತು ಕೆ.ಪಿ. ಶ್ರೀಕಾಂತ್‍ ನಿರ್ಮಿಸಬೇಕಿತ್ತು. ದೊಡ್ಡ ಮಟ್ಟದಲ್ಲಿ ನಡೆದ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಶಿವರಾಜಕುಮಾರ್ ಮುಂತಾದವರು ಬಂದು ಸಂಚಿತ್‍ಗೆ ಶುಭ ಹಾರೈಸಿದ್ದರು. ಆ ನಂತರ ಚಿತ್ರದ ಸುದ್ದಿಯೇ ಇರಲಿಲ್ಲ.

ಇದೀಗ ಸಂಚಿತ್‍ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ‘ಜಿಮ್ಮಿ’ ಚಿತ್ರಕ್ಕೆ ಸಂಚಿತ್ ನಾಯಕನಷ್ಟೇ ಅಲ್ಲ, ನಿರ್ದೇಶನವನ್ನೂ ಮಾಡಬೇಕಿತ್ತು. ಈಗ ಅವರು ಹೊಸ ಚಿತ್ರವೊಂದರಲ್ಲಿ ನಾಯಕನಾಗಿ ನಟಿಸುವುದಕ್ಕೆ ಸಜ್ಜಾಗುತ್ತಿದ್ದು, ಆ ಚಿತ್ರವನ್ನು ವಿವೇಕ್‍ ಎನ್ನುವವರು ನಿರ್ದೇಶನ ಮಾಡುತ್ತಿದ್ದಾರೆ. ಹಾಗಾದರೆ, ‘ಜಿಮ್ಮಿ’ ಚಿತ್ರ ನಿಂತು ಹೋಯ್ತಾ? ಅಥವಾ ಮುಂದಕ್ಕೇನಾದರೂ ಹೋಯ್ತಾ? ಎಂಬ ಪ್ರಶ್ನೆ ಸಹಜ. ಚಿತ್ರ ಘೋಷಣೆಯಾದ ಸಂದರ್ಭದಲ್ಲಿ ಚಿತ್ರಕ್ಕೆ ಒಂದು ಕಥೆಯೇ ಇರಲಿಲ್ಲಲ ಎಂದು ಹೇಳಲಾಗಿದೆ. ಚಿತ್ರತಂಡ ನಾಯಕನನ್ನು ಪರಿಚಯಿಸುವ ಟೀಸರ್ ಬಿಡುಗಡೆ ಮಾಡಿತಾದರೂ, ಸೂಕ್ತ ಕಥೆ ಸಿಗದ ಕಾರಣ ಚಿತ್ರ ನಿಂತಿದೆ ಎಂದು ಹೇಳಲಾಗುತ್ತಿದೆ. ಆದರೆ, ‘ಜಿಮ್ಮಿ’ ಚಿತ್ರತಂಡದಿಂದ ಈ ಕುರಿತು ಯಾವುದೇ ಸ್ಪಷ್ಟನೆ ಇಲ್ಲ.

ಅಂದಹಾಗೆ, ಸಂಚಿತ್‍ ಅಭಿನಯದ ಹೊಸ ಚಿತ್ರದ ಹೆಸರು ಘೋಷಣೆಯಾಗಿಲ್ಲ. ಸುದೀಪ್‍ ಅವರ ಪತ್ನಿ ಮತ್ತು ಮಗಳ ಹೆಸರಲ್ಲಿ ಪ್ರಾರಂಭವಾಗಿರುವ ಸುಪ್ರಿಯಾನ್ವಿ ಪ್ರೊಡಕ್ಷನ್ ಮತ್ತು KRG ಪ್ರೊಡಕ್ಷನ್ಸ್ ಬ್ಯಾನರ್‍ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ.

ಕಾರ್ತಿಕ್‍ ಗೌಡ ಹೇಳಿಕೊಂಡಿರುವಂಗೆ ಮೈಸೂರು ಮೂಲದ ವಿವೇಕ್‍, ‘ನಿನ್ನಿಂದಲೇ’ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿದ್ದರಂತೆ. ಆ ನಂತರ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವಗಳಿಸಿರುವ ವಿವೇಕ್‍, ಇದೀಗ ಹೊಸ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

ಇದು ಕ್ರೈಂ ಥ್ರಿಲ್ಲರ್ ಸ್ಟೋರಿ ಆಗಿದ್ದು, ಈ ಚಿತ್ರದ ಮೊದಲ ನೋಟ ಮತ್ತು ಶೀರ್ಷಿಕೆ ಅನಾವರಣ ಜನವರಿ 24ರಂದು ನಡೆಯಲಿದೆ. ಅಂದೇ ಚಿತ್ರದ ಮುಹೂರ್ತ ಸಹ ನಡೆಯಲಿದೆ. ಇನ್ನು ಈ ಚಿತ್ರದ ನಾಯಕಿ ಯಾರು? ಯಾರೆಲ್ಲಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಮತ್ತು ಕೆಲಸ ಮಾಡಲಿದ್ದಾರೆ ಮುಂತಾದಪ್ರಶ್ನೆಗಳಿಗೆ ಮುಹೂರ್ತದ ದಿನವೇ ಉತ್ತರ ಸಿಗಲಿದೆ.

ಭೂಮಿಕಾ

Recent Posts

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

10 mins ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

39 mins ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

5 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

5 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

5 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

6 hours ago