ಮನರಂಜನೆ

ಮೊದಲ ದಿನದ ಗಳಿಕೆಯಲ್ಲಿ ‘ವಾರ್ 2’ ಚಿತ್ರವನ್ನು ಹಿಂದಿಕ್ಕಿದ ‘ಕೂಲಿ’

ಈ ಸ್ವಾತಂತ್ರ್ಯ ದಿನದ ಪ್ರಯುಕ್ತ ಎರಡು ನಿರೀಕ್ಷಿತ ಚಿತ್ರಗಳು ಬಿಡುಗಡೆಯಾಗಿವೆ. ರಜನಿಕಾಂತ್‍ ಅಭಿನಯದ ‘ಕೂಲಿ’ ಮತ್ತು ಹೃತಿಕ್‍ ರೋಶನ್‍ ಮತ್ತು ಜ್ಯೂನಿಯರ್‍ NTR ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘ವಾರ್ 2’ ಚಿತ್ರವು ಗುರುವಾರ (ಆಗಸ್ಟ್ 14) ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಎರಡೂ ಚಿತ್ರಗಳು ಬಹುತಾರಾಗಣದ ಮತ್ತು ಬಹು ಬಜೆಟ್‍ನ ಚಿತ್ರಗಳಾಗಿದ್ದು, ಈ ಪೈಕಿ ‘ಕೂಲಿ’ ಚಿತ್ರವು ಮೊದಲ ದಿನದ ಗಳಿಕೆಯಲ್ಲಿ ‘ವಾರ್ 2’ ಚಿತ್ರವನ್ನು ಹಿಂದಿಕ್ಕಿದೆ.

‘ಕೂಲಿ’ ಚಿತ್ರದ ಮೊದಲ ದಿನದ ಗಳಿಕೆ 100 ಕೋಟಿ ರೂ. ದಾಟಲಿದೆ ಎಂದು ಮೊದಲೇ ಅಂದಾಜಿಸಲಾಗಿತ್ತು. ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದ ಮೊದಲ ದಿನದ ಗಳಿಕೆ 100 ಕೋಟಿ ರೂ. ಮೀರಬಹುದು ಎಂದು ಅಂದಾಜಿಸಲಾಗಿತ್ತು. ಅದರಂತೆ ಮೊದಲ ದಿನ ಜಾಗತಿಕವಾಗಿ 151 ಕೋಟಿ ರೂ. ಗಳಿಕೆ ಮಾಡಿದೆ ಎಂದು ಸ್ವತಃ ಚಿತ್ರ ನಿರ್ಮಿಸಿರುವ ಸನ್‍ ಪಿಕ್ಚರ್ಸ್ ಸಂಸ್ಥೆಯೇ ಅಧಿಕೃತವಾಗಿ ಘೋಷಿಸಿದೆ. ಚಿತ್ರದಲ್ಲಿ ರಜನಿಕಾಂತ್‍ ಜೊತೆಗೆ ಉಪೇಂದ್ರ, ನಾಗಾರ್ಜುನ, ಆಮೀರ್ ಖಾನ್‍, ಶ್ರುತಿ ಹಾಸನ್‍, ಸತ್ಯರಾಜ್‍ ಮುಂತಾದವರು ನಟಿಸಿದ್ದು, ಲೋಕೇಶ್‍ ಕನಕರಾಜ್‍ ನಿರ್ದೇಶನ ಮಾಡಿದ್ದಾರೆ.

ಇನ್ನು, ‘ವಾರ್ 2’ ಚಿತ್ರವು ಮೊದಲ ದಿನ 80 ಕೋಟಿ ರೂ.ನಷ್ಟು ಗಳಿಕೆ ಮಾಡಿದ್ದು, ಈ ಪೈಕಿ ಭಾರತದಲ್ಲಿ ಸುಮಾರು 52.5 ಕೋಟಿ ರೂ. ಗಳಿಕೆಯಾಗಿದೆ. ಮಿಕ್ಕಂತೆ ಹೊರದೇಶಗಳಲ್ಲಿ 30 ಕೋಟಿ ರೂ.ಗಳು ಗಳಿಕೆಯಾಗಿದೆ. ‘ವಾರ್ 2’ ಚಿತ್ರವು ಯಶ್‍ ರಾಜ್‍ ಫಿಲಂಸ್‍ ಸ್ಪೈ ಯೂನಿವರ್ಸ್‍ನ ಹೊಸ ಚಿತ್ರವಾಗಿದ್ದು, ಈ ಹಿಂದೆ ಈ ಸರಣಿಯಲ್ಲಿ ‘ಟೈಗರ್’, ‘ಪಠಾಣ್‍’, ‘ವಾರ್’ ಮುಂತಾದ ಹಲವು ಚಿತ್ರಗಳು ಬಿಡುಗಡೆಯಾಗಿವೆ. ‘ವಾರ್ 2’ ಚಿತ್ರವನ್ನು ಅಯಾನ್ ‍ಮುಖರ್ಜಿ ನಿರ್ದೇಶನ ಮಾಡಿದ್ದು, ಆದಿತ್ಯ ಜೋಪ್ರಾ ನಿರ್ಮಿಸಿದ್ದಾರೆ. ಜೊತೆಗೆ ಕಥೆಯನ್ನು ಸಹ ರಚಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

3 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

3 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

3 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

3 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

3 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

6 hours ago