ಮನರಂಜನೆ

ಮೊದಲ ದಿನದ ಗಳಿಕೆಯಲ್ಲಿ ‘ವಾರ್ 2’ ಚಿತ್ರವನ್ನು ಹಿಂದಿಕ್ಕಿದ ‘ಕೂಲಿ’

ಈ ಸ್ವಾತಂತ್ರ್ಯ ದಿನದ ಪ್ರಯುಕ್ತ ಎರಡು ನಿರೀಕ್ಷಿತ ಚಿತ್ರಗಳು ಬಿಡುಗಡೆಯಾಗಿವೆ. ರಜನಿಕಾಂತ್‍ ಅಭಿನಯದ ‘ಕೂಲಿ’ ಮತ್ತು ಹೃತಿಕ್‍ ರೋಶನ್‍ ಮತ್ತು ಜ್ಯೂನಿಯರ್‍ NTR ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘ವಾರ್ 2’ ಚಿತ್ರವು ಗುರುವಾರ (ಆಗಸ್ಟ್ 14) ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಎರಡೂ ಚಿತ್ರಗಳು ಬಹುತಾರಾಗಣದ ಮತ್ತು ಬಹು ಬಜೆಟ್‍ನ ಚಿತ್ರಗಳಾಗಿದ್ದು, ಈ ಪೈಕಿ ‘ಕೂಲಿ’ ಚಿತ್ರವು ಮೊದಲ ದಿನದ ಗಳಿಕೆಯಲ್ಲಿ ‘ವಾರ್ 2’ ಚಿತ್ರವನ್ನು ಹಿಂದಿಕ್ಕಿದೆ.

‘ಕೂಲಿ’ ಚಿತ್ರದ ಮೊದಲ ದಿನದ ಗಳಿಕೆ 100 ಕೋಟಿ ರೂ. ದಾಟಲಿದೆ ಎಂದು ಮೊದಲೇ ಅಂದಾಜಿಸಲಾಗಿತ್ತು. ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದ ಮೊದಲ ದಿನದ ಗಳಿಕೆ 100 ಕೋಟಿ ರೂ. ಮೀರಬಹುದು ಎಂದು ಅಂದಾಜಿಸಲಾಗಿತ್ತು. ಅದರಂತೆ ಮೊದಲ ದಿನ ಜಾಗತಿಕವಾಗಿ 151 ಕೋಟಿ ರೂ. ಗಳಿಕೆ ಮಾಡಿದೆ ಎಂದು ಸ್ವತಃ ಚಿತ್ರ ನಿರ್ಮಿಸಿರುವ ಸನ್‍ ಪಿಕ್ಚರ್ಸ್ ಸಂಸ್ಥೆಯೇ ಅಧಿಕೃತವಾಗಿ ಘೋಷಿಸಿದೆ. ಚಿತ್ರದಲ್ಲಿ ರಜನಿಕಾಂತ್‍ ಜೊತೆಗೆ ಉಪೇಂದ್ರ, ನಾಗಾರ್ಜುನ, ಆಮೀರ್ ಖಾನ್‍, ಶ್ರುತಿ ಹಾಸನ್‍, ಸತ್ಯರಾಜ್‍ ಮುಂತಾದವರು ನಟಿಸಿದ್ದು, ಲೋಕೇಶ್‍ ಕನಕರಾಜ್‍ ನಿರ್ದೇಶನ ಮಾಡಿದ್ದಾರೆ.

ಇನ್ನು, ‘ವಾರ್ 2’ ಚಿತ್ರವು ಮೊದಲ ದಿನ 80 ಕೋಟಿ ರೂ.ನಷ್ಟು ಗಳಿಕೆ ಮಾಡಿದ್ದು, ಈ ಪೈಕಿ ಭಾರತದಲ್ಲಿ ಸುಮಾರು 52.5 ಕೋಟಿ ರೂ. ಗಳಿಕೆಯಾಗಿದೆ. ಮಿಕ್ಕಂತೆ ಹೊರದೇಶಗಳಲ್ಲಿ 30 ಕೋಟಿ ರೂ.ಗಳು ಗಳಿಕೆಯಾಗಿದೆ. ‘ವಾರ್ 2’ ಚಿತ್ರವು ಯಶ್‍ ರಾಜ್‍ ಫಿಲಂಸ್‍ ಸ್ಪೈ ಯೂನಿವರ್ಸ್‍ನ ಹೊಸ ಚಿತ್ರವಾಗಿದ್ದು, ಈ ಹಿಂದೆ ಈ ಸರಣಿಯಲ್ಲಿ ‘ಟೈಗರ್’, ‘ಪಠಾಣ್‍’, ‘ವಾರ್’ ಮುಂತಾದ ಹಲವು ಚಿತ್ರಗಳು ಬಿಡುಗಡೆಯಾಗಿವೆ. ‘ವಾರ್ 2’ ಚಿತ್ರವನ್ನು ಅಯಾನ್ ‍ಮುಖರ್ಜಿ ನಿರ್ದೇಶನ ಮಾಡಿದ್ದು, ಆದಿತ್ಯ ಜೋಪ್ರಾ ನಿರ್ಮಿಸಿದ್ದಾರೆ. ಜೊತೆಗೆ ಕಥೆಯನ್ನು ಸಹ ರಚಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

2 mins ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

7 mins ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

13 mins ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

11 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

11 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

13 hours ago