ಬೆಂಗಳೂರು: ನಟ ದರ್ಶನ್ ಅವರ ಜೊತೆಗಿನ ಮನಸ್ತಾಪದ ಬಗ್ಗೆ ಕೊನೆಗೂ ಮೌನ ಮುರಿದು, ನನ್ನ ಹಾಗೂ ಅಣ್ಣ ದರ್ಶನ್ ನಡುವೆ ಯಾವ ಮನಸ್ತಾಪವೂ ಇಲ್ಲ ಎಂದು ನಿರ್ದೇಶಕ ದಿನಕರ್ ತೂಗುದೀಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಡಿಸೆಂಬರ್.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಣ್ಣ-ತಮ್ಮ ಬೇರೆಯಾಗಿದ್ದೀವಿ ಎಂದು ಯಾರು ಹೇಳಿದ್ದು? ಕುಟುಂಬ ಅಂದಮೇಲೆ ಚಿಕ್ಕಪುಟ್ಟ ಮನಸ್ತಾಪಗಳಿರುತ್ತವೆ. ಹಾಗಂತ ಬೇರೆ ಬೇರೆಯಾಗಿ ದೂರವಾಗುವ ಮಾತಿಲ್ಲ. ನಾನು ಹಾಗೂ ದರ್ಶನ್ ಯಾವಾಗಲೂ ಮಾತನಾಡುತ್ತೇನೆ ಇರುತ್ತೇವೆ. ಅಲ್ಲದೇ ಅತ್ತಿಗೆ ವಿಜಯಲಕ್ಷ್ಮೀ ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುತ್ತೇನೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ದರ್ಶನ್ ಸಿನಿಮಾಗಳ ಚೀತ್ರಿಕರಣದ ಬಗ್ಗೆ ಮಾತನಾಡಿದ ಅವರು, ದರ್ಶನ್ ಅವರಿಗೆ ತೀವ್ರ ಬೆನ್ನು ನೋವಿದೆ. ಅವರ ದೇಹ ಸಾಥ್ ನೀಡಿದಾಗ ಚೀತ್ರಿಕರಣವನ್ನು ಪ್ರಾರಂಭಿಸುತ್ತಾರೆ. ಸದ್ಯಕ್ಕೆ ಅವರಿಗೆ ಮೈಸೂರಿನ ಮನೆಯಲ್ಲೇ ಫಿಜಿಯೋಥೆರಪಿ ಚಿಕಿತ್ಸೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ದರ್ಶನ್ ಅವರ ಎಲ್ಲಾ ಸಿನಿಮಾಗಳ ಚೀತ್ರಿಕರಣ ಮುಗಿದ ನಂತರ ನಾನು ಹಾಗೂ ದರ್ಶನ್ ಸಿನಿಮಾ ಮಾಡುತ್ತೇವೆ ಎಂದಿದ್ದಾರೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…