ಬೆಂಗಳೂರು: ನಟ ದರ್ಶನ್ ಅವರ ಜೊತೆಗಿನ ಮನಸ್ತಾಪದ ಬಗ್ಗೆ ಕೊನೆಗೂ ಮೌನ ಮುರಿದು, ನನ್ನ ಹಾಗೂ ಅಣ್ಣ ದರ್ಶನ್ ನಡುವೆ ಯಾವ ಮನಸ್ತಾಪವೂ ಇಲ್ಲ ಎಂದು ನಿರ್ದೇಶಕ ದಿನಕರ್ ತೂಗುದೀಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಡಿಸೆಂಬರ್.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಣ್ಣ-ತಮ್ಮ ಬೇರೆಯಾಗಿದ್ದೀವಿ ಎಂದು ಯಾರು ಹೇಳಿದ್ದು? ಕುಟುಂಬ ಅಂದಮೇಲೆ ಚಿಕ್ಕಪುಟ್ಟ ಮನಸ್ತಾಪಗಳಿರುತ್ತವೆ. ಹಾಗಂತ ಬೇರೆ ಬೇರೆಯಾಗಿ ದೂರವಾಗುವ ಮಾತಿಲ್ಲ. ನಾನು ಹಾಗೂ ದರ್ಶನ್ ಯಾವಾಗಲೂ ಮಾತನಾಡುತ್ತೇನೆ ಇರುತ್ತೇವೆ. ಅಲ್ಲದೇ ಅತ್ತಿಗೆ ವಿಜಯಲಕ್ಷ್ಮೀ ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುತ್ತೇನೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ದರ್ಶನ್ ಸಿನಿಮಾಗಳ ಚೀತ್ರಿಕರಣದ ಬಗ್ಗೆ ಮಾತನಾಡಿದ ಅವರು, ದರ್ಶನ್ ಅವರಿಗೆ ತೀವ್ರ ಬೆನ್ನು ನೋವಿದೆ. ಅವರ ದೇಹ ಸಾಥ್ ನೀಡಿದಾಗ ಚೀತ್ರಿಕರಣವನ್ನು ಪ್ರಾರಂಭಿಸುತ್ತಾರೆ. ಸದ್ಯಕ್ಕೆ ಅವರಿಗೆ ಮೈಸೂರಿನ ಮನೆಯಲ್ಲೇ ಫಿಜಿಯೋಥೆರಪಿ ಚಿಕಿತ್ಸೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ದರ್ಶನ್ ಅವರ ಎಲ್ಲಾ ಸಿನಿಮಾಗಳ ಚೀತ್ರಿಕರಣ ಮುಗಿದ ನಂತರ ನಾನು ಹಾಗೂ ದರ್ಶನ್ ಸಿನಿಮಾ ಮಾಡುತ್ತೇವೆ ಎಂದಿದ್ದಾರೆ.
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…
ಬೆಳಗಾವಿ : ಶೀಘ್ರದಲ್ಲೇ 3600 ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್ಗೆ ತಿಳಿಸಿದ್ದಾರೆ. ಸದಸ್ಯ ಜಗದೇವ್…
ಶಿವಮೊಗ್ಗ : ಬಿಜೆಪಿ ಪ್ರತಿಭಟನೆ ವೇಳೆ ಕರ್ತವ್ಯ ನಿರತ ಎಎಸ್ಐ ಕುತ್ತಿಗೆಯಲ್ಲಿದ್ದ 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು…
ಮಂಡ್ಯ : ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ…
ಮೈಸೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ಯಾವುದೇ ದೌರ್ಜನ್ಯ ಕಂಡುಬಂದರೆ ಕೂಡಲೇ ಎಫ್.ಐ.ಆರ್ ದಾಖಲಿಸಿ ಸೂಕ್ತ…