ಬೆಂಗಳೂರು: ನಟ ದರ್ಶನ್ ಅವರ ಜೊತೆಗಿನ ಮನಸ್ತಾಪದ ಬಗ್ಗೆ ಕೊನೆಗೂ ಮೌನ ಮುರಿದು, ನನ್ನ ಹಾಗೂ ಅಣ್ಣ ದರ್ಶನ್ ನಡುವೆ ಯಾವ ಮನಸ್ತಾಪವೂ ಇಲ್ಲ ಎಂದು ನಿರ್ದೇಶಕ ದಿನಕರ್ ತೂಗುದೀಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಡಿಸೆಂಬರ್.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಣ್ಣ-ತಮ್ಮ ಬೇರೆಯಾಗಿದ್ದೀವಿ ಎಂದು ಯಾರು ಹೇಳಿದ್ದು? ಕುಟುಂಬ ಅಂದಮೇಲೆ ಚಿಕ್ಕಪುಟ್ಟ ಮನಸ್ತಾಪಗಳಿರುತ್ತವೆ. ಹಾಗಂತ ಬೇರೆ ಬೇರೆಯಾಗಿ ದೂರವಾಗುವ ಮಾತಿಲ್ಲ. ನಾನು ಹಾಗೂ ದರ್ಶನ್ ಯಾವಾಗಲೂ ಮಾತನಾಡುತ್ತೇನೆ ಇರುತ್ತೇವೆ. ಅಲ್ಲದೇ ಅತ್ತಿಗೆ ವಿಜಯಲಕ್ಷ್ಮೀ ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುತ್ತೇನೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ದರ್ಶನ್ ಸಿನಿಮಾಗಳ ಚೀತ್ರಿಕರಣದ ಬಗ್ಗೆ ಮಾತನಾಡಿದ ಅವರು, ದರ್ಶನ್ ಅವರಿಗೆ ತೀವ್ರ ಬೆನ್ನು ನೋವಿದೆ. ಅವರ ದೇಹ ಸಾಥ್ ನೀಡಿದಾಗ ಚೀತ್ರಿಕರಣವನ್ನು ಪ್ರಾರಂಭಿಸುತ್ತಾರೆ. ಸದ್ಯಕ್ಕೆ ಅವರಿಗೆ ಮೈಸೂರಿನ ಮನೆಯಲ್ಲೇ ಫಿಜಿಯೋಥೆರಪಿ ಚಿಕಿತ್ಸೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ದರ್ಶನ್ ಅವರ ಎಲ್ಲಾ ಸಿನಿಮಾಗಳ ಚೀತ್ರಿಕರಣ ಮುಗಿದ ನಂತರ ನಾನು ಹಾಗೂ ದರ್ಶನ್ ಸಿನಿಮಾ ಮಾಡುತ್ತೇವೆ ಎಂದಿದ್ದಾರೆ.
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…