ಬೆಂಗಳೂರು: ನಟ ದರ್ಶನ್ ಅವರ ಜೊತೆಗಿನ ಮನಸ್ತಾಪದ ಬಗ್ಗೆ ಕೊನೆಗೂ ಮೌನ ಮುರಿದು, ನನ್ನ ಹಾಗೂ ಅಣ್ಣ ದರ್ಶನ್ ನಡುವೆ ಯಾವ ಮನಸ್ತಾಪವೂ ಇಲ್ಲ ಎಂದು ನಿರ್ದೇಶಕ ದಿನಕರ್ ತೂಗುದೀಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಡಿಸೆಂಬರ್.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಣ್ಣ-ತಮ್ಮ ಬೇರೆಯಾಗಿದ್ದೀವಿ ಎಂದು ಯಾರು ಹೇಳಿದ್ದು? ಕುಟುಂಬ ಅಂದಮೇಲೆ ಚಿಕ್ಕಪುಟ್ಟ ಮನಸ್ತಾಪಗಳಿರುತ್ತವೆ. ಹಾಗಂತ ಬೇರೆ ಬೇರೆಯಾಗಿ ದೂರವಾಗುವ ಮಾತಿಲ್ಲ. ನಾನು ಹಾಗೂ ದರ್ಶನ್ ಯಾವಾಗಲೂ ಮಾತನಾಡುತ್ತೇನೆ ಇರುತ್ತೇವೆ. ಅಲ್ಲದೇ ಅತ್ತಿಗೆ ವಿಜಯಲಕ್ಷ್ಮೀ ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುತ್ತೇನೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ದರ್ಶನ್ ಸಿನಿಮಾಗಳ ಚೀತ್ರಿಕರಣದ ಬಗ್ಗೆ ಮಾತನಾಡಿದ ಅವರು, ದರ್ಶನ್ ಅವರಿಗೆ ತೀವ್ರ ಬೆನ್ನು ನೋವಿದೆ. ಅವರ ದೇಹ ಸಾಥ್ ನೀಡಿದಾಗ ಚೀತ್ರಿಕರಣವನ್ನು ಪ್ರಾರಂಭಿಸುತ್ತಾರೆ. ಸದ್ಯಕ್ಕೆ ಅವರಿಗೆ ಮೈಸೂರಿನ ಮನೆಯಲ್ಲೇ ಫಿಜಿಯೋಥೆರಪಿ ಚಿಕಿತ್ಸೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ದರ್ಶನ್ ಅವರ ಎಲ್ಲಾ ಸಿನಿಮಾಗಳ ಚೀತ್ರಿಕರಣ ಮುಗಿದ ನಂತರ ನಾನು ಹಾಗೂ ದರ್ಶನ್ ಸಿನಿಮಾ ಮಾಡುತ್ತೇವೆ ಎಂದಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…