ಮನರಂಜನೆ

ನಾನಿನ್ನೂ ಬಾಡಿಗೆ ಮನೆಯಲ್ಲಿ ಇರೋದಕ್ಕೆ ಜೆನ್ಯೂನ್‌ ಕಾರಣವಿದೆ: ಗುಟ್ಟು ಬಿಚ್ಚಿಟ್ಟ ದಿನಕರ್‌ ತೂಗುದೀಪ್‌

ಬೆಂಗಳೂರು: ನಿರ್ದೇಶಕ ದಿನಕರ್‌ ತೂಗುದೀಪ್‌ ಇನ್ನೂ ಬಾಡಿಗೆ ಮನೆಯಲ್ಲಿದ್ದಾರೆ. ಕನ್ನಡದ ಸೂಪರ್‌ ಸ್ಟಾರ್‌ ದರ್ಶನ್‌ ತಮ್ಮನಾಗಿದ್ದರೂ ಯಾಕೆ ಅವರಿನ್ನೂ ಹಾಗೆ ಇದ್ದಾರೆ ಎಂಬುದಕ್ಕೆ ಸ್ವತಃ ದಿನಕರ್‌ ಅವರು ಹಲವಾರು ಬಾರಿ ಉತ್ತರಿಸಿದ್ದಾರೆ.

ನಿರ್ದೇಶಕ ದಿನಕರ್‌ ತೂಗುದೀಪ್‌ ಅವರದು ಸಿಂಪಲ್‌ ಲೈಫ್.‌ ಮಡದಿ, ಮಗಳು ಹಾಗೂ ಮಗನೊಟ್ಟಿಗೆ ಚಿಕ್ಕ ಮನೆಯಲ್ಲಿ ವಾಸವಾಗಿದ್ದಾರೆ. ಸದ್ಯ ನಟ ದರ್ಶನ್‌ ಕೊಲೆ ಕೇಸ್‌ನಲ್ಲಿ ಆರೋಪಿ ಆಗಿರುವುದರಿಂದ ಸಹಜವಾಗಿಯೇ ತೂಗುದೀಪ್‌ ಫ್ಯಾಮಿಲಿ ಆಸಕ್ತಿ ಎಲ್ಲರಿಗೂ ಹೆಚ್ಚಾಗಿದೆ.

ನಟ ದರ್ಶನ್‌ ಅವರ ಸಹೋದರ ದಿನಕರ್‌ ತೂಗುದೀಪ್‌ ಅವರು ಸಾರಥಿ ಚಿತ್ರದ ಮೂಲಕ ಕನ್ನಡ ಸಿನಿಪ್ರೇಮಿಗಳ ಮನಸ್ಸಿಗೆ ಬಹಳಷ್ಟು ಹತ್ತಿರವಾದರು. ೨೦೧೧ರಲ್ಲಿ ನಟ ದರ್ಶನ್‌ ಮುಖ್ಯ ಭೂಮಿಕೆಯಲ್ಲಿ ದಿನಕರ್‌ ತೂಗುದೀಪ್‌ ನಿರ್ದೇಶನದಲ್ಲಿ ಬಂದ ಸಾರಥಿ ಚಿತ್ರವು ಹಿಟ್‌ ಆಗಿತ್ತು. ಅಂದು ಆ ಚಿತ್ರವು ಅದೆಷ್ಟು ಕಲೆಕ್ಷನ್‌ ಮಾಡಿತ್ತು ಹಾಗೂ ಮೆಚ್ಚುಗೆ ಗಳಿಸಿತ್ತು ಎಂದರೆ ಅಂದಿನ ಕಾಲದಲ್ಲಿ ಚಿತ್ರರಂಗವೇ ಒಮ್ಮೆ ಮೂಗಿನ ಮೇಲೆ ಬೆರಳಿಟ್ಟಿತ್ತು.

ನಿರ್ದೇಶಕ ದಿನಕರ್‌ ಇನ್ನೂ ಬಾಡಿಗೆ ಮನೆಯಲ್ಲೇ ಇದ್ದಾರೆ. ಕನ್ನಡದ ಸೂಪರ್‌ ಸ್ಟಾರ್‌ ದರ್ಶನ್‌ ತಮ್ಮನಾಗಿದ್ದರೂ ಯಾಕೆ ಅವರಿನ್ನೂ ಹಾಗೆ ಇದ್ದಾರೆ ಎಂಬುದಕ್ಕೆ ಸ್ವತಃ ದಿನಕರ್‌ ಅವರು ಹಲವಾರು ಬಾರಿ ಉತ್ತರ ಕೊಟ್ಟಿದ್ದಾರೆ. ಅದನ್ನು ಇನ್ನೊಮ್ಮೆ ಹೇಳಬೇಕು ಎಂದರೆ, ದಿನಕರ್‌ ಅಮ್ಮ ಮೀನಾ ಅವರು ನೀನು ಸ್ವಂತ ದುಡಿಮೆಯ ಹಣದಿಂದ ಏನಾದರೂ ಮಾಡು. ಮನೆ ಕಟ್ಟುವುದಿರಲಿ, ವಾಹನ ಖರೀದಿ ಮಾಡುವುದಿರಲಿ ಎಂದಿದ್ರಂತೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ದಿನಕರ್‌ ಅವರು, ನನಗೆ ಅಮ್ಮನ ಮಾತು ತುಂಬಾ ಇಷ್ಟವಾಯ್ತು. ಅದು ನನ್ನ ಹೃದಯ ತಟ್ಟಿತು. ಅದಕ್ಕಾಗಿ ನಾನು ನನ್ನ ಅಮ್ಮನ ಮಾತಿನಂತೆ ನನ್ನದೇ ಹಣದಿಂದ ಮನೆ ಕಟ್ಟುತ್ತೇನೆ. ಏನೇ ಖರೀದಿ ಮಾಡುವುದಿದ್ದರೂ ಅದು ನನ್ನದೇ ಹಣದಿಂದ ಅಷ್ಟೇ. ನಾನು ಈಗಾಗಲೇ ಸೈಟ್‌ ಮಾಡಿದ್ದು, ಮನೆ ಕಟ್ಟಲು ಶುರು ಮಾಡಿದ್ದೇನೆ. ಅದು ನನ್ನದೇ ದುಡ್ಡು, ಅಮ್ಮನ ಮಾತು ಎಂದು ಖುಷಿ ಹಂಚಿಕೊಂಡಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

19 mins ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

1 hour ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

1 hour ago

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

2 hours ago

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

2 hours ago

ಜೆಡಿಎಸ್‌ನಲ್ಲೇ ಇದ್ದೀನಿ, ಪಕ್ಷದಿಂದಲೇ ಸ್ಪರ್ಧೆ : ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…

3 hours ago