ಮನರಂಜನೆ

ನಾನಿನ್ನೂ ಬಾಡಿಗೆ ಮನೆಯಲ್ಲಿ ಇರೋದಕ್ಕೆ ಜೆನ್ಯೂನ್‌ ಕಾರಣವಿದೆ: ಗುಟ್ಟು ಬಿಚ್ಚಿಟ್ಟ ದಿನಕರ್‌ ತೂಗುದೀಪ್‌

ಬೆಂಗಳೂರು: ನಿರ್ದೇಶಕ ದಿನಕರ್‌ ತೂಗುದೀಪ್‌ ಇನ್ನೂ ಬಾಡಿಗೆ ಮನೆಯಲ್ಲಿದ್ದಾರೆ. ಕನ್ನಡದ ಸೂಪರ್‌ ಸ್ಟಾರ್‌ ದರ್ಶನ್‌ ತಮ್ಮನಾಗಿದ್ದರೂ ಯಾಕೆ ಅವರಿನ್ನೂ ಹಾಗೆ ಇದ್ದಾರೆ ಎಂಬುದಕ್ಕೆ ಸ್ವತಃ ದಿನಕರ್‌ ಅವರು ಹಲವಾರು ಬಾರಿ ಉತ್ತರಿಸಿದ್ದಾರೆ.

ನಿರ್ದೇಶಕ ದಿನಕರ್‌ ತೂಗುದೀಪ್‌ ಅವರದು ಸಿಂಪಲ್‌ ಲೈಫ್.‌ ಮಡದಿ, ಮಗಳು ಹಾಗೂ ಮಗನೊಟ್ಟಿಗೆ ಚಿಕ್ಕ ಮನೆಯಲ್ಲಿ ವಾಸವಾಗಿದ್ದಾರೆ. ಸದ್ಯ ನಟ ದರ್ಶನ್‌ ಕೊಲೆ ಕೇಸ್‌ನಲ್ಲಿ ಆರೋಪಿ ಆಗಿರುವುದರಿಂದ ಸಹಜವಾಗಿಯೇ ತೂಗುದೀಪ್‌ ಫ್ಯಾಮಿಲಿ ಆಸಕ್ತಿ ಎಲ್ಲರಿಗೂ ಹೆಚ್ಚಾಗಿದೆ.

ನಟ ದರ್ಶನ್‌ ಅವರ ಸಹೋದರ ದಿನಕರ್‌ ತೂಗುದೀಪ್‌ ಅವರು ಸಾರಥಿ ಚಿತ್ರದ ಮೂಲಕ ಕನ್ನಡ ಸಿನಿಪ್ರೇಮಿಗಳ ಮನಸ್ಸಿಗೆ ಬಹಳಷ್ಟು ಹತ್ತಿರವಾದರು. ೨೦೧೧ರಲ್ಲಿ ನಟ ದರ್ಶನ್‌ ಮುಖ್ಯ ಭೂಮಿಕೆಯಲ್ಲಿ ದಿನಕರ್‌ ತೂಗುದೀಪ್‌ ನಿರ್ದೇಶನದಲ್ಲಿ ಬಂದ ಸಾರಥಿ ಚಿತ್ರವು ಹಿಟ್‌ ಆಗಿತ್ತು. ಅಂದು ಆ ಚಿತ್ರವು ಅದೆಷ್ಟು ಕಲೆಕ್ಷನ್‌ ಮಾಡಿತ್ತು ಹಾಗೂ ಮೆಚ್ಚುಗೆ ಗಳಿಸಿತ್ತು ಎಂದರೆ ಅಂದಿನ ಕಾಲದಲ್ಲಿ ಚಿತ್ರರಂಗವೇ ಒಮ್ಮೆ ಮೂಗಿನ ಮೇಲೆ ಬೆರಳಿಟ್ಟಿತ್ತು.

ನಿರ್ದೇಶಕ ದಿನಕರ್‌ ಇನ್ನೂ ಬಾಡಿಗೆ ಮನೆಯಲ್ಲೇ ಇದ್ದಾರೆ. ಕನ್ನಡದ ಸೂಪರ್‌ ಸ್ಟಾರ್‌ ದರ್ಶನ್‌ ತಮ್ಮನಾಗಿದ್ದರೂ ಯಾಕೆ ಅವರಿನ್ನೂ ಹಾಗೆ ಇದ್ದಾರೆ ಎಂಬುದಕ್ಕೆ ಸ್ವತಃ ದಿನಕರ್‌ ಅವರು ಹಲವಾರು ಬಾರಿ ಉತ್ತರ ಕೊಟ್ಟಿದ್ದಾರೆ. ಅದನ್ನು ಇನ್ನೊಮ್ಮೆ ಹೇಳಬೇಕು ಎಂದರೆ, ದಿನಕರ್‌ ಅಮ್ಮ ಮೀನಾ ಅವರು ನೀನು ಸ್ವಂತ ದುಡಿಮೆಯ ಹಣದಿಂದ ಏನಾದರೂ ಮಾಡು. ಮನೆ ಕಟ್ಟುವುದಿರಲಿ, ವಾಹನ ಖರೀದಿ ಮಾಡುವುದಿರಲಿ ಎಂದಿದ್ರಂತೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ದಿನಕರ್‌ ಅವರು, ನನಗೆ ಅಮ್ಮನ ಮಾತು ತುಂಬಾ ಇಷ್ಟವಾಯ್ತು. ಅದು ನನ್ನ ಹೃದಯ ತಟ್ಟಿತು. ಅದಕ್ಕಾಗಿ ನಾನು ನನ್ನ ಅಮ್ಮನ ಮಾತಿನಂತೆ ನನ್ನದೇ ಹಣದಿಂದ ಮನೆ ಕಟ್ಟುತ್ತೇನೆ. ಏನೇ ಖರೀದಿ ಮಾಡುವುದಿದ್ದರೂ ಅದು ನನ್ನದೇ ಹಣದಿಂದ ಅಷ್ಟೇ. ನಾನು ಈಗಾಗಲೇ ಸೈಟ್‌ ಮಾಡಿದ್ದು, ಮನೆ ಕಟ್ಟಲು ಶುರು ಮಾಡಿದ್ದೇನೆ. ಅದು ನನ್ನದೇ ದುಡ್ಡು, ಅಮ್ಮನ ಮಾತು ಎಂದು ಖುಷಿ ಹಂಚಿಕೊಂಡಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago