ಮನರಂಜನೆ

ನಾನಿನ್ನೂ ಬಾಡಿಗೆ ಮನೆಯಲ್ಲಿ ಇರೋದಕ್ಕೆ ಜೆನ್ಯೂನ್‌ ಕಾರಣವಿದೆ: ಗುಟ್ಟು ಬಿಚ್ಚಿಟ್ಟ ದಿನಕರ್‌ ತೂಗುದೀಪ್‌

ಬೆಂಗಳೂರು: ನಿರ್ದೇಶಕ ದಿನಕರ್‌ ತೂಗುದೀಪ್‌ ಇನ್ನೂ ಬಾಡಿಗೆ ಮನೆಯಲ್ಲಿದ್ದಾರೆ. ಕನ್ನಡದ ಸೂಪರ್‌ ಸ್ಟಾರ್‌ ದರ್ಶನ್‌ ತಮ್ಮನಾಗಿದ್ದರೂ ಯಾಕೆ ಅವರಿನ್ನೂ ಹಾಗೆ ಇದ್ದಾರೆ ಎಂಬುದಕ್ಕೆ ಸ್ವತಃ ದಿನಕರ್‌ ಅವರು ಹಲವಾರು ಬಾರಿ ಉತ್ತರಿಸಿದ್ದಾರೆ.

ನಿರ್ದೇಶಕ ದಿನಕರ್‌ ತೂಗುದೀಪ್‌ ಅವರದು ಸಿಂಪಲ್‌ ಲೈಫ್.‌ ಮಡದಿ, ಮಗಳು ಹಾಗೂ ಮಗನೊಟ್ಟಿಗೆ ಚಿಕ್ಕ ಮನೆಯಲ್ಲಿ ವಾಸವಾಗಿದ್ದಾರೆ. ಸದ್ಯ ನಟ ದರ್ಶನ್‌ ಕೊಲೆ ಕೇಸ್‌ನಲ್ಲಿ ಆರೋಪಿ ಆಗಿರುವುದರಿಂದ ಸಹಜವಾಗಿಯೇ ತೂಗುದೀಪ್‌ ಫ್ಯಾಮಿಲಿ ಆಸಕ್ತಿ ಎಲ್ಲರಿಗೂ ಹೆಚ್ಚಾಗಿದೆ.

ನಟ ದರ್ಶನ್‌ ಅವರ ಸಹೋದರ ದಿನಕರ್‌ ತೂಗುದೀಪ್‌ ಅವರು ಸಾರಥಿ ಚಿತ್ರದ ಮೂಲಕ ಕನ್ನಡ ಸಿನಿಪ್ರೇಮಿಗಳ ಮನಸ್ಸಿಗೆ ಬಹಳಷ್ಟು ಹತ್ತಿರವಾದರು. ೨೦೧೧ರಲ್ಲಿ ನಟ ದರ್ಶನ್‌ ಮುಖ್ಯ ಭೂಮಿಕೆಯಲ್ಲಿ ದಿನಕರ್‌ ತೂಗುದೀಪ್‌ ನಿರ್ದೇಶನದಲ್ಲಿ ಬಂದ ಸಾರಥಿ ಚಿತ್ರವು ಹಿಟ್‌ ಆಗಿತ್ತು. ಅಂದು ಆ ಚಿತ್ರವು ಅದೆಷ್ಟು ಕಲೆಕ್ಷನ್‌ ಮಾಡಿತ್ತು ಹಾಗೂ ಮೆಚ್ಚುಗೆ ಗಳಿಸಿತ್ತು ಎಂದರೆ ಅಂದಿನ ಕಾಲದಲ್ಲಿ ಚಿತ್ರರಂಗವೇ ಒಮ್ಮೆ ಮೂಗಿನ ಮೇಲೆ ಬೆರಳಿಟ್ಟಿತ್ತು.

ನಿರ್ದೇಶಕ ದಿನಕರ್‌ ಇನ್ನೂ ಬಾಡಿಗೆ ಮನೆಯಲ್ಲೇ ಇದ್ದಾರೆ. ಕನ್ನಡದ ಸೂಪರ್‌ ಸ್ಟಾರ್‌ ದರ್ಶನ್‌ ತಮ್ಮನಾಗಿದ್ದರೂ ಯಾಕೆ ಅವರಿನ್ನೂ ಹಾಗೆ ಇದ್ದಾರೆ ಎಂಬುದಕ್ಕೆ ಸ್ವತಃ ದಿನಕರ್‌ ಅವರು ಹಲವಾರು ಬಾರಿ ಉತ್ತರ ಕೊಟ್ಟಿದ್ದಾರೆ. ಅದನ್ನು ಇನ್ನೊಮ್ಮೆ ಹೇಳಬೇಕು ಎಂದರೆ, ದಿನಕರ್‌ ಅಮ್ಮ ಮೀನಾ ಅವರು ನೀನು ಸ್ವಂತ ದುಡಿಮೆಯ ಹಣದಿಂದ ಏನಾದರೂ ಮಾಡು. ಮನೆ ಕಟ್ಟುವುದಿರಲಿ, ವಾಹನ ಖರೀದಿ ಮಾಡುವುದಿರಲಿ ಎಂದಿದ್ರಂತೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ದಿನಕರ್‌ ಅವರು, ನನಗೆ ಅಮ್ಮನ ಮಾತು ತುಂಬಾ ಇಷ್ಟವಾಯ್ತು. ಅದು ನನ್ನ ಹೃದಯ ತಟ್ಟಿತು. ಅದಕ್ಕಾಗಿ ನಾನು ನನ್ನ ಅಮ್ಮನ ಮಾತಿನಂತೆ ನನ್ನದೇ ಹಣದಿಂದ ಮನೆ ಕಟ್ಟುತ್ತೇನೆ. ಏನೇ ಖರೀದಿ ಮಾಡುವುದಿದ್ದರೂ ಅದು ನನ್ನದೇ ಹಣದಿಂದ ಅಷ್ಟೇ. ನಾನು ಈಗಾಗಲೇ ಸೈಟ್‌ ಮಾಡಿದ್ದು, ಮನೆ ಕಟ್ಟಲು ಶುರು ಮಾಡಿದ್ದೇನೆ. ಅದು ನನ್ನದೇ ದುಡ್ಡು, ಅಮ್ಮನ ಮಾತು ಎಂದು ಖುಷಿ ಹಂಚಿಕೊಂಡಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

6 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

10 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

11 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

11 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

11 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

11 hours ago