ಬೆಂಗಳೂರು: ನಿರ್ದೇಶಕ ದಿನಕರ್ ತೂಗುದೀಪ್ ಇನ್ನೂ ಬಾಡಿಗೆ ಮನೆಯಲ್ಲಿದ್ದಾರೆ. ಕನ್ನಡದ ಸೂಪರ್ ಸ್ಟಾರ್ ದರ್ಶನ್ ತಮ್ಮನಾಗಿದ್ದರೂ ಯಾಕೆ ಅವರಿನ್ನೂ ಹಾಗೆ ಇದ್ದಾರೆ ಎಂಬುದಕ್ಕೆ ಸ್ವತಃ ದಿನಕರ್ ಅವರು ಹಲವಾರು ಬಾರಿ ಉತ್ತರಿಸಿದ್ದಾರೆ.
ನಿರ್ದೇಶಕ ದಿನಕರ್ ತೂಗುದೀಪ್ ಅವರದು ಸಿಂಪಲ್ ಲೈಫ್. ಮಡದಿ, ಮಗಳು ಹಾಗೂ ಮಗನೊಟ್ಟಿಗೆ ಚಿಕ್ಕ ಮನೆಯಲ್ಲಿ ವಾಸವಾಗಿದ್ದಾರೆ. ಸದ್ಯ ನಟ ದರ್ಶನ್ ಕೊಲೆ ಕೇಸ್ನಲ್ಲಿ ಆರೋಪಿ ಆಗಿರುವುದರಿಂದ ಸಹಜವಾಗಿಯೇ ತೂಗುದೀಪ್ ಫ್ಯಾಮಿಲಿ ಆಸಕ್ತಿ ಎಲ್ಲರಿಗೂ ಹೆಚ್ಚಾಗಿದೆ.
ನಟ ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ್ ಅವರು ಸಾರಥಿ ಚಿತ್ರದ ಮೂಲಕ ಕನ್ನಡ ಸಿನಿಪ್ರೇಮಿಗಳ ಮನಸ್ಸಿಗೆ ಬಹಳಷ್ಟು ಹತ್ತಿರವಾದರು. ೨೦೧೧ರಲ್ಲಿ ನಟ ದರ್ಶನ್ ಮುಖ್ಯ ಭೂಮಿಕೆಯಲ್ಲಿ ದಿನಕರ್ ತೂಗುದೀಪ್ ನಿರ್ದೇಶನದಲ್ಲಿ ಬಂದ ಸಾರಥಿ ಚಿತ್ರವು ಹಿಟ್ ಆಗಿತ್ತು. ಅಂದು ಆ ಚಿತ್ರವು ಅದೆಷ್ಟು ಕಲೆಕ್ಷನ್ ಮಾಡಿತ್ತು ಹಾಗೂ ಮೆಚ್ಚುಗೆ ಗಳಿಸಿತ್ತು ಎಂದರೆ ಅಂದಿನ ಕಾಲದಲ್ಲಿ ಚಿತ್ರರಂಗವೇ ಒಮ್ಮೆ ಮೂಗಿನ ಮೇಲೆ ಬೆರಳಿಟ್ಟಿತ್ತು.
ನಿರ್ದೇಶಕ ದಿನಕರ್ ಇನ್ನೂ ಬಾಡಿಗೆ ಮನೆಯಲ್ಲೇ ಇದ್ದಾರೆ. ಕನ್ನಡದ ಸೂಪರ್ ಸ್ಟಾರ್ ದರ್ಶನ್ ತಮ್ಮನಾಗಿದ್ದರೂ ಯಾಕೆ ಅವರಿನ್ನೂ ಹಾಗೆ ಇದ್ದಾರೆ ಎಂಬುದಕ್ಕೆ ಸ್ವತಃ ದಿನಕರ್ ಅವರು ಹಲವಾರು ಬಾರಿ ಉತ್ತರ ಕೊಟ್ಟಿದ್ದಾರೆ. ಅದನ್ನು ಇನ್ನೊಮ್ಮೆ ಹೇಳಬೇಕು ಎಂದರೆ, ದಿನಕರ್ ಅಮ್ಮ ಮೀನಾ ಅವರು ನೀನು ಸ್ವಂತ ದುಡಿಮೆಯ ಹಣದಿಂದ ಏನಾದರೂ ಮಾಡು. ಮನೆ ಕಟ್ಟುವುದಿರಲಿ, ವಾಹನ ಖರೀದಿ ಮಾಡುವುದಿರಲಿ ಎಂದಿದ್ರಂತೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದಿನಕರ್ ಅವರು, ನನಗೆ ಅಮ್ಮನ ಮಾತು ತುಂಬಾ ಇಷ್ಟವಾಯ್ತು. ಅದು ನನ್ನ ಹೃದಯ ತಟ್ಟಿತು. ಅದಕ್ಕಾಗಿ ನಾನು ನನ್ನ ಅಮ್ಮನ ಮಾತಿನಂತೆ ನನ್ನದೇ ಹಣದಿಂದ ಮನೆ ಕಟ್ಟುತ್ತೇನೆ. ಏನೇ ಖರೀದಿ ಮಾಡುವುದಿದ್ದರೂ ಅದು ನನ್ನದೇ ಹಣದಿಂದ ಅಷ್ಟೇ. ನಾನು ಈಗಾಗಲೇ ಸೈಟ್ ಮಾಡಿದ್ದು, ಮನೆ ಕಟ್ಟಲು ಶುರು ಮಾಡಿದ್ದೇನೆ. ಅದು ನನ್ನದೇ ದುಡ್ಡು, ಅಮ್ಮನ ಮಾತು ಎಂದು ಖುಷಿ ಹಂಚಿಕೊಂಡಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…