ಮನರಂಜನೆ

ಆರು ವರ್ಷಗಳ ನಂತರ ಮತ್ತೆ ಬಂದ್ರು ದಿನಕರ್ ತೂಗುದೀಪ

ಪುನೀತ್‍ ರಾಜಕುಮಾರ್ ಅಭಿನಯದಲ್ಲಿ ದಿನಕರ್ ತೂಗುದೀಪವೊಂದು ಚಿತ್ರವೊಂದನ್ನು ನಿರ್ದೇಶಿಸಬೇಕಿತ್ತು. ಜಯಣ್ಣ ಫಿಲಂಸ್ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸಬೇಕಿತ್ತು. ಈ ಚಿತ್ರದ ಘೋಷಣೆ ಸಹ ಆಗಿತ್ತು. ಆದರೆ, ಅಷ್ಟರಲ್ಲಿ ಪುನೀತ್‍ ರಾಜಕುಮಾರ್‍ ನಿಧನರಾದ್ದರಿಂದ, ಚಿತ್ರ ರದ್ದಾಯಿತು. ಈಗ ದಿನಕರ್‍, ವಿರಾಟ್‍ ಅಭಿನಯದಲ್ಲಿ ‘ರಾಯಲ್‍’ ಎಂಬ ಚಿತ್ರವನ್ನು ನಿರ್ದೇಶಿಸಿದ್ದು, ಈ ಚಿತ್ರವು ಜನವರಿ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ದಿನಕರ್ ನಿರ್ದೇಶನದ ಚಿತ್ರವೊಂದು ಸುಮಾರು ಆರು ವರ್ಷಗಳ ನಂತರ ಬಿಡುಗಡೆಯಾಗುತ್ತಿದೆ. 2018ರಲ್ಲಿ ದಿನಕರ್ ತೂಗುದೀಪ ನಿರ್ದೇಶನದ ‘ಲೈಫ್‍ ಜೊತೆಗೆ ಒಂದ್‍ ಸೆಲ್ಫಿ’ ಚಿತ್ರ ಬಿಡುಗಡೆಯಾಗಿತ್ತು. ಪ್ರಜ್ವಲ್‍ ದೇವರಾಜ್‍, ಹರಿಪ್ರಿಯಾ, ಪ್ರೇಮ್‍ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದರು.

ಆ ನಂತರ ದಿನಕರ್‍, ಪುನೀತ್‍ ರಾಜಕುಮಾರ್‍ ಅಭಿನಯದಲ್ಲಿ ಚಿತ್ರ ನಿರ್ದೇಶಿಸಬೇಕಿತ್ತು. ಆದರೆ, ಅದು ರದ್ದಾಯಿತು. ಈ ಮಧ್ಯೆ, ಜಯಣ್ಣ ಫಿಲಂಸ್‍ ಬಳಿ ನಟ ವಿರಾಟ್‍ ಹಾಗೂ ದಿನಕರ್‍ ತೂಗುದೀಪ ಇಬ್ಬರ ಕಾಲ್‍ಶೀಟ್‍ ಇತ್ತು. ಹಾಗಾಗಿ, ಈ ಮೂವರು ಸೇರಿ ‘ರಾಯಲ್‍’ ಚಿತ್ರವನ್ನು ರೂಪಿಸಿದ್ದಾರೆ. ಚಿತ್ರದ ಚಿತ್ರೀಕರಣ ಎರಡೂವರೆ ವರ್ಷಗಳ ಹಿಂದೆಯೇ ಪ್ರಾರಂಭಾಗಿದ್ದು, ಈಗ ಕೊನೆಗೂ ಸಂಪೂರ್ಣವಾಗಿದೆ.

‘ರಾಯಲ್‍’ ಚಿತ್ರದಲ್ಲಿ ವಿರಾಟ್‍ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಎ.ಪಿ. ಅರ್ಜುನ್‍ ನಿರ್ದೇಶದ ‘ಕಿಸ್‍’ ಮೂಲಕ ಚಿತ್ರರಂಗಕ್ಕೆ ಬಂದ ವಿರಾಟ್‍ಗಿದು ಎರಡನೇ ಚಿತ್ರ. ವಿರಾಟ್‍ ಜೊತೆಗೆ ಜಯಣ್ಣ ಮೂರು ಚಿತ್ರಗಳನ್ನು ನಿರ್ಮಿಸುತ್ತಿರುವ ಸುದ್ದಿ ಇದ್ದು, ಈ ಪೈಕಿ ‘ರಾಯಲ್‍’ ಮೊದಲ ಚಿತ್ರವಾಗಿದೆ. ಮುಂದಿನ ದಿನಗಳಲ್ಲಿ ಇನ್ನೆರಡು ಚಿತ್ರಗಳು ಬರುವ ಸಾಧ್ಯತೆ ಇದೆ.

ವಿರಾಟ್‍ಗೆ ನಾಯಕಿಯಾಗಿ ಸಂಜನಾ ಆನಂದ್‍ ಕಾಣಿಸಿಕೊಳ್ಳುತ್ತಿದ್ದು, ಮಿಕ್ಕಂತೆ ರಘು ಮುಖರ್ಜಿ, ಛಾಯಾ ಸಿಂಗ್‍, ಅಚ್ಯುತ್‍ ಕುಮಾರ್, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಚರಣ್‍ ರಾಜ್‍ ಸಂಗೀತ ಮತ್ತು ಸಂಕೇತ್‍ ಅವರ ಛಾಯಾಗ್ರಹಣವಿದೆ.

2006ರಲ್ಲಿ ‘ಜೊತೆ ಜೊತೆಯಲಿ’ ಮೂಲಕ ನಿರ್ದೇಶಕರಾದ ದಿನಕರ್‍ ಕಳೆದ 18 ವರ್ಷಗಲ್ಲಿ ನಿರ್ದೇಶಿಸಿದ್ದು ಕೇವಲ ಐದು ಚಿತ್ರಗಳು. ಈ ಪೈಕಿ ನಾಲ್ಕು ಚಿತ್ರಗಳು ಬಿಡುಗಡೆಯಾಗಿದ್ದು, ಅವರ ಐದನೇ ಚಿತ್ರ ಜನವರಿ 24ಕ್ಕೆ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

4 mins ago

ಉತ್ತರ ಸಿಕ್ಕಿಂನಲ್ಲಿ ಭೂಕುಸಿತ : ಚುಂಗಾಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…

31 mins ago

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…

47 mins ago

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

2 hours ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

2 hours ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

2 hours ago