ಮನರಂಜನೆ

ಆರು ವರ್ಷಗಳ ನಂತರ ಮತ್ತೆ ಬಂದ್ರು ದಿನಕರ್ ತೂಗುದೀಪ

ಪುನೀತ್‍ ರಾಜಕುಮಾರ್ ಅಭಿನಯದಲ್ಲಿ ದಿನಕರ್ ತೂಗುದೀಪವೊಂದು ಚಿತ್ರವೊಂದನ್ನು ನಿರ್ದೇಶಿಸಬೇಕಿತ್ತು. ಜಯಣ್ಣ ಫಿಲಂಸ್ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸಬೇಕಿತ್ತು. ಈ ಚಿತ್ರದ ಘೋಷಣೆ ಸಹ ಆಗಿತ್ತು. ಆದರೆ, ಅಷ್ಟರಲ್ಲಿ ಪುನೀತ್‍ ರಾಜಕುಮಾರ್‍ ನಿಧನರಾದ್ದರಿಂದ, ಚಿತ್ರ ರದ್ದಾಯಿತು. ಈಗ ದಿನಕರ್‍, ವಿರಾಟ್‍ ಅಭಿನಯದಲ್ಲಿ ‘ರಾಯಲ್‍’ ಎಂಬ ಚಿತ್ರವನ್ನು ನಿರ್ದೇಶಿಸಿದ್ದು, ಈ ಚಿತ್ರವು ಜನವರಿ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ದಿನಕರ್ ನಿರ್ದೇಶನದ ಚಿತ್ರವೊಂದು ಸುಮಾರು ಆರು ವರ್ಷಗಳ ನಂತರ ಬಿಡುಗಡೆಯಾಗುತ್ತಿದೆ. 2018ರಲ್ಲಿ ದಿನಕರ್ ತೂಗುದೀಪ ನಿರ್ದೇಶನದ ‘ಲೈಫ್‍ ಜೊತೆಗೆ ಒಂದ್‍ ಸೆಲ್ಫಿ’ ಚಿತ್ರ ಬಿಡುಗಡೆಯಾಗಿತ್ತು. ಪ್ರಜ್ವಲ್‍ ದೇವರಾಜ್‍, ಹರಿಪ್ರಿಯಾ, ಪ್ರೇಮ್‍ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದರು.

ಆ ನಂತರ ದಿನಕರ್‍, ಪುನೀತ್‍ ರಾಜಕುಮಾರ್‍ ಅಭಿನಯದಲ್ಲಿ ಚಿತ್ರ ನಿರ್ದೇಶಿಸಬೇಕಿತ್ತು. ಆದರೆ, ಅದು ರದ್ದಾಯಿತು. ಈ ಮಧ್ಯೆ, ಜಯಣ್ಣ ಫಿಲಂಸ್‍ ಬಳಿ ನಟ ವಿರಾಟ್‍ ಹಾಗೂ ದಿನಕರ್‍ ತೂಗುದೀಪ ಇಬ್ಬರ ಕಾಲ್‍ಶೀಟ್‍ ಇತ್ತು. ಹಾಗಾಗಿ, ಈ ಮೂವರು ಸೇರಿ ‘ರಾಯಲ್‍’ ಚಿತ್ರವನ್ನು ರೂಪಿಸಿದ್ದಾರೆ. ಚಿತ್ರದ ಚಿತ್ರೀಕರಣ ಎರಡೂವರೆ ವರ್ಷಗಳ ಹಿಂದೆಯೇ ಪ್ರಾರಂಭಾಗಿದ್ದು, ಈಗ ಕೊನೆಗೂ ಸಂಪೂರ್ಣವಾಗಿದೆ.

‘ರಾಯಲ್‍’ ಚಿತ್ರದಲ್ಲಿ ವಿರಾಟ್‍ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಎ.ಪಿ. ಅರ್ಜುನ್‍ ನಿರ್ದೇಶದ ‘ಕಿಸ್‍’ ಮೂಲಕ ಚಿತ್ರರಂಗಕ್ಕೆ ಬಂದ ವಿರಾಟ್‍ಗಿದು ಎರಡನೇ ಚಿತ್ರ. ವಿರಾಟ್‍ ಜೊತೆಗೆ ಜಯಣ್ಣ ಮೂರು ಚಿತ್ರಗಳನ್ನು ನಿರ್ಮಿಸುತ್ತಿರುವ ಸುದ್ದಿ ಇದ್ದು, ಈ ಪೈಕಿ ‘ರಾಯಲ್‍’ ಮೊದಲ ಚಿತ್ರವಾಗಿದೆ. ಮುಂದಿನ ದಿನಗಳಲ್ಲಿ ಇನ್ನೆರಡು ಚಿತ್ರಗಳು ಬರುವ ಸಾಧ್ಯತೆ ಇದೆ.

ವಿರಾಟ್‍ಗೆ ನಾಯಕಿಯಾಗಿ ಸಂಜನಾ ಆನಂದ್‍ ಕಾಣಿಸಿಕೊಳ್ಳುತ್ತಿದ್ದು, ಮಿಕ್ಕಂತೆ ರಘು ಮುಖರ್ಜಿ, ಛಾಯಾ ಸಿಂಗ್‍, ಅಚ್ಯುತ್‍ ಕುಮಾರ್, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಚರಣ್‍ ರಾಜ್‍ ಸಂಗೀತ ಮತ್ತು ಸಂಕೇತ್‍ ಅವರ ಛಾಯಾಗ್ರಹಣವಿದೆ.

2006ರಲ್ಲಿ ‘ಜೊತೆ ಜೊತೆಯಲಿ’ ಮೂಲಕ ನಿರ್ದೇಶಕರಾದ ದಿನಕರ್‍ ಕಳೆದ 18 ವರ್ಷಗಲ್ಲಿ ನಿರ್ದೇಶಿಸಿದ್ದು ಕೇವಲ ಐದು ಚಿತ್ರಗಳು. ಈ ಪೈಕಿ ನಾಲ್ಕು ಚಿತ್ರಗಳು ಬಿಡುಗಡೆಯಾಗಿದ್ದು, ಅವರ ಐದನೇ ಚಿತ್ರ ಜನವರಿ 24ಕ್ಕೆ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

49 mins ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

1 hour ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

2 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

2 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

5 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

7 hours ago