ಮನರಂಜನೆ

ಶಿಷ್ಯ ತಂಬಿ ನಿರ್ದೇಶನದಲ್ಲಿ ಗುರು ‘ದುನಿಯಾ’ ವಿಜಯ್ ನಟನೆ

‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರ ಬಿಡುಗಡೆಯಾಗಿ ಎರಡು ವಾರಗಳಾಗಿವೆ. ಮೊದಲ ಎರಡು ವಾರಗಳಿದ್ದ ಸದ್ದು ಕ್ರಮೇಣ ಮೂರನೆಯ ವಾರದಲ್ಲಿ ಕಡಿಮೆಯಾಗಿದೆ. ಯಾವುದೇ ಹಕ್ಕುಗಳು ಮಾರಾಟವಾಗದಿದ್ದರೂ ನಿರ್ಮಾಪಕರು ಹಾಕಿದ ದುಡ್ಡನ್ನು ವಾಪಸ್ಸು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಹೀಗಿರುವಾಗಲೇ, ‘ದುನಿಯಾ’ ವಿಜಯ್‍ ಅಭಿನಯದ ಹೊಸ ಚಿತ್ರ ಘೋಷಣೆಯಾಗಿದೆ. ಇದು ಅವರ ಅಭಿನಯದ 30ನೇ ಚಿತ್ರವಾಗಿದ್ದು, ಈ ಚಿತ್ರವನ್ನು ಅವರ ಶಿಷ್ಯ ವೆಟ್ರಿವೇಲ್‍ ಅಲಿಯಾಸ್‍ ತಂಬಿ ನಿರ್ದೇಶನ ಮಾಡುತ್ತಿದ್ದಾರೆ. ಈ ಕುರಿತು ಸೋಮವಾರ ಅಧಿಕೃತ ಘೋಷಣೆಯಾಗಿದ್ದು, ಹೊಸ ಪೋಸ್ಟರ್‍ ಸಹ ಬಿಡುಗಡೆ ಆಗಿದೆ.

ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ, ಅವರ ಹೊಸ ಚಿತ್ರದ ಘೋಷಣೆಯಾಗಿದ್ದು, ಸದ್ಯಕ್ಕೆ ವಿಕೆ30 ಎಂದು ತಾತ್ಕಾಲಿಕವಾಗಿ ಕರೆಯಲಾಗುತ್ತಿದೆ. ಈ ಚಿತ್ರವನ್ನು ಅವರ ತಂಡದ ತಂಬಿ ಎನ್ನುವವರು ನಿರ್ದೇಶನ ಮಾಡುತ್ತಿದ್ದು, ಚಿತ್ರದ ಮೊದಲ ನೋಟ ಬಿಡುಗಡೆ ಆಗಿದೆ. ಇತ್ತೀಚೆಗೆ ನಡೆದ ‘ಭೀಮ’ ಚಿತ್ರದ ಸಂತೋಷಕೂಟದಲ್ಲೇ ವಿಜಯ್‍ ತಮ್ಮ ಮುಂದಿನ ಚಿತ್ರ ತಂಬಿಗೆ ಎಂದು ಹೇಳಿದ್ದರು. ಅದೀಗ ನಿಜವಾಗಿದೆ.

ಈ ಕುರಿತು ಮಾತನಾಡಿದ ವಿಜಯ್, ‘ನನ್ನನ್ನು ನಂಬಿ ಕೆಲವು ಹುಡುಗರು ಈ ಕ್ಷೇತ್ರಕ್ಕೆ ಬಂದಿದ್ದಾರೆ. ತಂಬಿ, ವೀರ, ಮೌರ್ಯ, ಡೆನ್ನಿಸ್‍, ಜೀವನ್‍ ಇವರೆಲ್ಲಾ ನನಗೆ ಅಣ್ಣನ ಸ್ಥಾನ ಕೊಟ್ಟಿದ್ದಾರೆ. ಅದನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ನನ್ನ ನಂಬಿ ಬಂದವರು ಎರಡ್ಮೂರು ವರ್ಷಗಳಿಂದ ಕಾಯುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಬೇಕು. ಅವರಿಗೆ ಮೊದಲು ಸಿನಿಮಾ ಮಾಡುತ್ತೇನೆ. ಮೊದಲು ತಂಬಿ, ನಂತರ ವೀರನಿಗೆ ಸಿನಿಮಾ ಮಾಡುತ್ತೇನೆ. ಮೌರ್ಯನಿಗೂ ಕಥೆ ಬರೆಯೋಕೆ ಹೇಳಿದ್ದೇನೆ. ಒಬ್ಬರ ನಂತರ ಇನ್ನೊಬ್ಬರಿಗೆ ಚಿತ್ರ ಮಾಡುತ್ತೇನೆ’ ಎಂದಿದ್ದರು. ಅದಕ್ಕೆ ತಕ್ಕಂತೆ ತಂಬಿ ನಿರ್ದೇಶನದ ಚಿತ್ರದಲ್ಲಿ ಅವರು ಮೊದಲು ನಟಿಸುತ್ತಾರಂತೆ.

ಈ ಚಿತ್ರದ ನಿರ್ಮಾಪಕರ್ಯಾರು? ಅದು ಸದ್ಯಕ್ಕೆ ಗೊತ್ತಿಲ್ಲ. ಈ ವಿಷಯದ ಬಗ್ಗೆ ವಿಜಯ್‍ ಸಂತೋಷ ಕೂಟದಲ್ಲಿ ಹೇಳಿದ್ದರು. ತಮಗೆ ಯಾರು ಸ್ವಾತಂತ್ರ್ಯ ಕೊಡುತ್ತಾರೋ ಅವರಿಗೆ ಮೊದಲ ಆದ್ಯತೆ ಎಂದು ಹೇಳಿದ್ದರು. ಸದ್ಯಕ್ಕಂತೂ ಪೋಸ್ಟರ್‍ನಲ್ಲಿ ನಿರ್ಮಾಪಕರ ಹೆಸರು ನಮೂದಾಗಿಲ್ಲ. ಅಲ್ಲಿಗೆ ಚಿತ್ರಕ್ಕೆ ಇನ್ನೂ ನಿರ್ಮಾಪಕರು ಸಿಕ್ಕಿಲ್ಲ ಎಂದರ್ಥ. ಬಹುಶಃ ನಿರ್ಮಾಪಕರನ್ನು ಸೆಳೆಯುವದಕ್ಕೆಂದೇ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿರುವ ಸಾಧ್ಯತೆಯೂ ಇದೆ.

ಇನ್ನು, ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಾರೆ, ಯಾರೆಲ್ಲಾ ಕೆಲಸ ಮಾಡುತ್ತಾರೆ ಎಂಬುದು ಸಹ ಸ್ಪಷ್ಟವಾಗಿಲ್ಲ. ಸದ್ಯಕ್ಕೆ ಬರವಣಿಗೆ ಕೆಲಸ ಪ್ರಾರಂಭವಾಗಿದ್ದು, ಅದೊಂದು ಮಟ್ಟಕ್ಕೆ ಬಂದ ಮೇಲೆ, ಮಿಕ್ಕ ವಿಷಯಗಳು ಘೋಷಣೆಯಾಗುವ ಸಾಧ್ಯತೆ ಇದೆ.

ಭೂಮಿಕಾ

Recent Posts

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

44 mins ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

53 mins ago

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…

2 hours ago

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

2 hours ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

2 hours ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

2 hours ago