ಮನರಂಜನೆ

ಶಿಷ್ಯ ತಂಬಿ ನಿರ್ದೇಶನದಲ್ಲಿ ಗುರು ‘ದುನಿಯಾ’ ವಿಜಯ್ ನಟನೆ

‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರ ಬಿಡುಗಡೆಯಾಗಿ ಎರಡು ವಾರಗಳಾಗಿವೆ. ಮೊದಲ ಎರಡು ವಾರಗಳಿದ್ದ ಸದ್ದು ಕ್ರಮೇಣ ಮೂರನೆಯ ವಾರದಲ್ಲಿ ಕಡಿಮೆಯಾಗಿದೆ. ಯಾವುದೇ ಹಕ್ಕುಗಳು ಮಾರಾಟವಾಗದಿದ್ದರೂ ನಿರ್ಮಾಪಕರು ಹಾಕಿದ ದುಡ್ಡನ್ನು ವಾಪಸ್ಸು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಹೀಗಿರುವಾಗಲೇ, ‘ದುನಿಯಾ’ ವಿಜಯ್‍ ಅಭಿನಯದ ಹೊಸ ಚಿತ್ರ ಘೋಷಣೆಯಾಗಿದೆ. ಇದು ಅವರ ಅಭಿನಯದ 30ನೇ ಚಿತ್ರವಾಗಿದ್ದು, ಈ ಚಿತ್ರವನ್ನು ಅವರ ಶಿಷ್ಯ ವೆಟ್ರಿವೇಲ್‍ ಅಲಿಯಾಸ್‍ ತಂಬಿ ನಿರ್ದೇಶನ ಮಾಡುತ್ತಿದ್ದಾರೆ. ಈ ಕುರಿತು ಸೋಮವಾರ ಅಧಿಕೃತ ಘೋಷಣೆಯಾಗಿದ್ದು, ಹೊಸ ಪೋಸ್ಟರ್‍ ಸಹ ಬಿಡುಗಡೆ ಆಗಿದೆ.

ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ, ಅವರ ಹೊಸ ಚಿತ್ರದ ಘೋಷಣೆಯಾಗಿದ್ದು, ಸದ್ಯಕ್ಕೆ ವಿಕೆ30 ಎಂದು ತಾತ್ಕಾಲಿಕವಾಗಿ ಕರೆಯಲಾಗುತ್ತಿದೆ. ಈ ಚಿತ್ರವನ್ನು ಅವರ ತಂಡದ ತಂಬಿ ಎನ್ನುವವರು ನಿರ್ದೇಶನ ಮಾಡುತ್ತಿದ್ದು, ಚಿತ್ರದ ಮೊದಲ ನೋಟ ಬಿಡುಗಡೆ ಆಗಿದೆ. ಇತ್ತೀಚೆಗೆ ನಡೆದ ‘ಭೀಮ’ ಚಿತ್ರದ ಸಂತೋಷಕೂಟದಲ್ಲೇ ವಿಜಯ್‍ ತಮ್ಮ ಮುಂದಿನ ಚಿತ್ರ ತಂಬಿಗೆ ಎಂದು ಹೇಳಿದ್ದರು. ಅದೀಗ ನಿಜವಾಗಿದೆ.

ಈ ಕುರಿತು ಮಾತನಾಡಿದ ವಿಜಯ್, ‘ನನ್ನನ್ನು ನಂಬಿ ಕೆಲವು ಹುಡುಗರು ಈ ಕ್ಷೇತ್ರಕ್ಕೆ ಬಂದಿದ್ದಾರೆ. ತಂಬಿ, ವೀರ, ಮೌರ್ಯ, ಡೆನ್ನಿಸ್‍, ಜೀವನ್‍ ಇವರೆಲ್ಲಾ ನನಗೆ ಅಣ್ಣನ ಸ್ಥಾನ ಕೊಟ್ಟಿದ್ದಾರೆ. ಅದನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ನನ್ನ ನಂಬಿ ಬಂದವರು ಎರಡ್ಮೂರು ವರ್ಷಗಳಿಂದ ಕಾಯುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಬೇಕು. ಅವರಿಗೆ ಮೊದಲು ಸಿನಿಮಾ ಮಾಡುತ್ತೇನೆ. ಮೊದಲು ತಂಬಿ, ನಂತರ ವೀರನಿಗೆ ಸಿನಿಮಾ ಮಾಡುತ್ತೇನೆ. ಮೌರ್ಯನಿಗೂ ಕಥೆ ಬರೆಯೋಕೆ ಹೇಳಿದ್ದೇನೆ. ಒಬ್ಬರ ನಂತರ ಇನ್ನೊಬ್ಬರಿಗೆ ಚಿತ್ರ ಮಾಡುತ್ತೇನೆ’ ಎಂದಿದ್ದರು. ಅದಕ್ಕೆ ತಕ್ಕಂತೆ ತಂಬಿ ನಿರ್ದೇಶನದ ಚಿತ್ರದಲ್ಲಿ ಅವರು ಮೊದಲು ನಟಿಸುತ್ತಾರಂತೆ.

ಈ ಚಿತ್ರದ ನಿರ್ಮಾಪಕರ್ಯಾರು? ಅದು ಸದ್ಯಕ್ಕೆ ಗೊತ್ತಿಲ್ಲ. ಈ ವಿಷಯದ ಬಗ್ಗೆ ವಿಜಯ್‍ ಸಂತೋಷ ಕೂಟದಲ್ಲಿ ಹೇಳಿದ್ದರು. ತಮಗೆ ಯಾರು ಸ್ವಾತಂತ್ರ್ಯ ಕೊಡುತ್ತಾರೋ ಅವರಿಗೆ ಮೊದಲ ಆದ್ಯತೆ ಎಂದು ಹೇಳಿದ್ದರು. ಸದ್ಯಕ್ಕಂತೂ ಪೋಸ್ಟರ್‍ನಲ್ಲಿ ನಿರ್ಮಾಪಕರ ಹೆಸರು ನಮೂದಾಗಿಲ್ಲ. ಅಲ್ಲಿಗೆ ಚಿತ್ರಕ್ಕೆ ಇನ್ನೂ ನಿರ್ಮಾಪಕರು ಸಿಕ್ಕಿಲ್ಲ ಎಂದರ್ಥ. ಬಹುಶಃ ನಿರ್ಮಾಪಕರನ್ನು ಸೆಳೆಯುವದಕ್ಕೆಂದೇ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿರುವ ಸಾಧ್ಯತೆಯೂ ಇದೆ.

ಇನ್ನು, ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಾರೆ, ಯಾರೆಲ್ಲಾ ಕೆಲಸ ಮಾಡುತ್ತಾರೆ ಎಂಬುದು ಸಹ ಸ್ಪಷ್ಟವಾಗಿಲ್ಲ. ಸದ್ಯಕ್ಕೆ ಬರವಣಿಗೆ ಕೆಲಸ ಪ್ರಾರಂಭವಾಗಿದ್ದು, ಅದೊಂದು ಮಟ್ಟಕ್ಕೆ ಬಂದ ಮೇಲೆ, ಮಿಕ್ಕ ವಿಷಯಗಳು ಘೋಷಣೆಯಾಗುವ ಸಾಧ್ಯತೆ ಇದೆ.

ಭೂಮಿಕಾ

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago